ಬೆಂಗಳೂರು | ಸಂಬಂಧಿಕರ ಮನೆಯಲ್ಲಿಯೇ ಕೋಟಿ ಬೆಲೆಬಾಳುವ ಚಿನ್ನ ದೋಚಿ ಪರಾರಿ; ಬಂಧನ

Date:

Advertisements

ಸಂಬಂಧಿಕರ ಮನೆಯಲ್ಲಿಯೇ ಕೋಟ್ಯಂತರ ರೂಪಾಯಿ ಬೆಲೆಬಾಳುವ ಚಿನ್ನ, ನಗದು ದೋಚಿ ಪರಾರಿಯಾಗಿದ್ದ ಆರೋಪಿಯನ್ನು ತಿಲಕನಗರ ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್ ರಫೀಕ್(35) ಬಂಧಿತ ಆರೋಪಿ. ಬಂಧಿತನಿಂದ ₹1.10 ಕೋಟಿ ಮೌಲ್ಯದ 1.8 ಕೆಜಿ ಚಿನ್ನಾಭರಣ ಹಾಗೂ ₹74 ಸಾವಿರ ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಏನಿದು ಪ್ರಕರಣ?

Advertisements

ಗುಜರಿ ವ್ಯಾಪಾರಿಯಾಗಿದ್ದ ಷಹನವಾಜ್ ತಿಲಕನಗರದ ಎಸ್‌.ಆರ್.ಕೆ ಗಾರ್ಡನ್ ಬಳಿ ತನ್ನ ಕುಟುಂಬದೊಂದಿಗೆ ವಾಸವಿದ್ದರು. ಇವರ ಕುಟುಂಬಕ್ಕೆ ಸಂಬಂಧಿಯಾಗಿದ್ದ ಆರೋಪಿ ಮೊಹಮ್ಮದ್ ರಫೀಕ್ ಆಗಾಗ ಇವರ ಮನೆಗೆ ಬಂದು ಹೋಗುತ್ತಿದ್ದನು. ಮೊದಲಿನಿಂದಲೂ ಷಹನವಾಜ್ ಅವರ ಐಷಾರಾಮಿ ಜೀವನದ ಬಗ್ಗೆ ಈತ ಅಸೂಯೆ ಹೊಂದಿದ್ದನು.

ಷಹನವಾಜ್ ಅವರ ಮನೆಯ ಬೀಗದ ಕೀ ಅಚ್ಚು ತೆಗೆದುಕೊಂಡು ತನ್ನ ಬಳಿ ಇಟ್ಟುಕೊಂಡಿದ್ದನು. ರಾಮನಗರದಲ್ಲಿ ಸಂಬಂಧಿಕರೊಬ್ಬರ ಮದುವೆ ಇದ್ದ ಕಾರಣ ಷಹನವಾಜ್ ಕುಟುಂಬ ತೆರಳಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಗಮನಿಸಿ ಆರೋಪಿ ನಕಲಿ ಕೀ ಬಳಸಿ, ಮನೆಗೆ ನುಗ್ಗಿ 2.5 ಕೆ‌ಜಿ ತೂಕದ ಚಿನ್ನಾಭರಣ, ₹8 ರಿಂದ ₹10 ಲಕ್ಷ ನಗದು ದೋಚಿ ಪರಾರಿಯಾಗಿದ್ದನು.

ಸೆಪ್ಟೆಂಬರ್ 25ರ ರಾತ್ರಿ ಷಹನವಾಜ್ ಕುಟುಂಬ ಮನೆಗೆ ಹಿಂತಿರುಗಿ ಬಂದಾಗ ಮನೆಯಲ್ಲಿ ಕಳ್ಳತನವಾಗಿರುವುದು ಗೊತ್ತಾಗಿದೆ.

ತಕ್ಷಣ ಷಹನವಾಜ್ ತಿಲಕ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಾಲು ರಜೆಗಳ ಬಳಿಕ ಬೆಂಗಳೂರಿಗೆ ವಾಪಸ್ಸಾಗುತ್ತಿರುವ ಜನ; ವಾಹನ ಸಂಚಾರ ದಟ್ಟಣೆ ಹೆಚ್ಚಳ

ಆರೋಪಿಯಿಂದ ಸದ್ಯ ಪೊಲೀಸರು 1.8 ಕೆ.ಜಿ ಚಿನ್ನಾಭರಣ ಹಾಗೂ ₹74 ಸಾವಿರ ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ಹಣವನ್ನು ಆರೋಪಿ ತನ್ನ ಸಾಲಗಳನ್ನು ತೀರಿಸಲು ಬಳಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಷಹನವಾಜ್ ಅವರ ಮನೆಯಲ್ಲಿ ಮದುವೆ ತಯಾರಿ ನಡೆಯುತ್ತಿದ್ದ ಹಿನ್ನೆಲೆ, ಚಿನ್ನಾಭರಣ ಹಾಗೂ ನಗದು ತಂದಿಡಲಾಗಿತ್ತು ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X