ಹಾಸನ | ರಂಜಾನ್‌ ಉಪವಾಸದ ವೇಳೆ ಮೀಸಲಾತಿ ತೆಗೆದಿರುವುದೇ ಸರ್ಕಾರವನ್ನು ಕೆಳಗಿಳಿಸಲಿದೆ: ಎಚ್‌ ಡಿ ರೇವಣ್ಣ

Date:

Advertisements
  • ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಏಕಾಂಗಿ ಹೋರಾಟ
  • ಶಾಸಕ ಪ್ರೀತಂಗೌಡ ವಿರುದ್ಧ ಎಚ್‌ ಡಿ ರೇವಣ್ಣ ಪರೋಕ್ಷವಾಗಿ ವಾಗ್ದಾಳಿ

ರಂಜಾನ್‌ ಉಪವಾಸದ ಸಂದರ್ಭದಲ್ಲೇ ಮುಸ್ಲಿಮರಿಗಿದ್ದ ಮೀಸಲಾತಿ ತೆಗೆದಿದ್ದಾರೆ. ಆ ಭಕ್ತಿಯೇ ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲಿದೆ ಎಂದು ಜೆಡಿಎಸ್‌ ನಾಯಕ ಮತ್ತು ಶಾಸಕ ಎಚ್‌.ಡಿ ರೇವಣ್ಣ ಹೇಳಿದ್ದಾರೆ.

ಹಾಸನ ಜಿಲ್ಲೆ ಬೇಲೂರಿನ ಚನ್ನಕೇಶವಸ್ವಾಮಿ ರಥೋತ್ಸವದಲ್ಲಿ ಭಾಗವಹಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಜೆಡಿಎಸ್‌ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಮರು ಜಾರಿ ಮಾಡುತ್ತೇವೆ ಎಂದು ತಿಳಿಸಿದರು.

“1994ರಲ್ಲಿ ಅಲ್ಪಸಂಖ್ಯಾತರಿಗೆ ದೇವೇಗೌಡರು 2(ಬಿ) ಮೀಸಲಾತಿ ಕೊಟ್ಟರು. ಆದರೆ ಈಗ ಈ ಮೀಸಲಾತಿಯನ್ನು ದುರುದ್ದೇಶ ಪೂರಿತವಾಗಿ ತೆಗೆದಿದ್ದಾರೆ. ವಂಚಿತ ಜನರ ಶಾಪ, ರದ್ದು ಮಾಡಿದವರಿಗೆ ತಟ್ಟಲಿದೆ” ಎಂದು ಕಿಡಿಕಾರಿದ್ದಾರೆ.

Advertisements

“ಕಾಂಗ್ರೆಸ್‌ ಅಲ್ವಸಂಖ್ಯಾತರನ್ನು ಕೇವಲ ಮತಬ್ಯಾಂಕ್‌ ಮಾಡಿಕೊಂಡಿತ್ತೇ ಹೊರತು, ಮೀಸಲಾತಿ ನೀಡಿರಲಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ಹೊಂದಾಣಿಕೆ ಪಕ್ಷಗಳು. ರಾತ್ರಿ ಹೊತ್ತು ಎರಡೂ ಪಕ್ಷದವರು ಪರಸ್ಪರ ಚನ್ನಾಗಿಯೇ ಮಾತನಾಡುತ್ತಾರೆ, ಬೆಳಗಾಗುತ್ತಲೇ ಒಬ್ಬರನ್ನೊಬ್ಬರು ಬೈಯ್ದಾಡುತ್ತಾರೆ. ಅದೇ ರೀತಿ ಇವರು ಮೀಸಲಾತಿ ಹೆಸರಿನಲ್ಲಿ ಜನರನ್ನು ಹೊಡೆದಾಡಿಸುತ್ತಿದ್ದಾರೆ” ಎಂದು ಆರೋಪಿಸಿದರು.

“250ಕ್ಕೂ ಹೆಚ್ಚು ದಿನಗಳ ಕಾಲ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನಿರಂತರ ಹೋರಾಟ ಮಾಡಿದರು. ಆದರೆ, ಈಗ ಮೀಸಲಾತಿ ಜಾರಿ ಮಾಡಿದ್ದಾರೆ. ಅದೂ ಜಾರಿ ಆಗುತ್ತೊ ಇಲ್ಲವೊ ಗೊತ್ತಿಲ್ಲ. ಇವರು ಜಾತಿ ಜಾತಿಗಳ ನಡುವೆ ಹೊಡೆದಾಡಿಸುತ್ತಿದ್ದಾರೆ. ಜಾತಿ ಸಂಘರ್ಷ ಮಾಡಿ ರಾಜಕೀಯ ಮಾಡಲು ಹೊರಟಿದ್ದಾರೆ. ಜನರು ಎಚ್ಚರಿಕೆಯಿಂದ ಮತ ಚಲಾವಣೆ ಮಾಡಬೇಕು” ಎಂದು ಮನವಿ ಮಾಡಿದರು.

ಕುಮಾರಸ್ವಾಮಿ ಏಕಾಂಗಿ ಹೋರಾಟ

“2023ರ ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಏಕಾಂಗಿ ಹೋರಾಟ ಮಾಡುತ್ತಿದ್ದಾರೆ. ಎರಡೂ ಪಕ್ಷಗಳನ್ನು ಜನರು ನೋಡಿದ್ದಾರೆ. ಹಾಗೆಯೇ ಕುಮಾರಸ್ವಾಮಿ ಅವರ 14 ತಿಂಗಳ ಆಡಳಿತ ಕೂಡ ಜನ ನೋಡಿದ್ದಾರೆ” ಎಂದರು.

“ಕುಮಾರಸ್ವಾಮಿ ಅವರು ಕೊಟ್ಟ ಮಾತು ಉಳಿಸಿಕೊಳ್ಳುವ ನಾಯಕ. ಅಧಿಕಾರದಲ್ಲಿದ್ದಾಗ 25 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಹಿಂದೆ ಕೆಲವರು ಹಾಸನ ಬಜೆಟ್‌, ಮಂಡ್ಯ ಬಜೆಟ್‌, ರಾಮನಗರ ಬಜೆಟ್‌ ಎಂದು ಅಣಕಿಸಿದರೂ ತಲೆ ಕಡಿಸಿಕೊಳ್ಳದೆ ಅಭಿವೃದ್ಧಿ ಕೆಲಸ ಮಾಡಿದರು. ಆದರೆ, ಬಿಜೆಪಿಯವರು ಹಾಸನಕ್ಕೆ ತಾಂತ್ರಿಕ ವಿವಿ ತಡೆ ಹಿಡಿದರು. ಶಾಸಕ ಕೆ ಎಸ್‌ ಲಿಂಗೇಶ್‌ ಅವರ ಪ್ರಾಮಾಣಿಕ ಪ್ರಯತ್ನದಿಂದ ಬೇಲೂರು ರಣಘಟ್ಟ ಯೋಜನೆ ಆಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಹಾಸನ | ಚನ್ನಕೇಶವಸ್ವಾಮಿ ರಥೋತ್ಸವ: ವಿರೋಧದ ನಡುವೆಯೂ ಸೌಹಾರ್ದತೆ ಮೆರೆದ ಬೇಲೂರು

ಪ್ರೀತಂ ವಿರುದ್ಧ ಪರೋಕ್ಷ ವಾಗ್ದಾಳಿ

“ಹಿಂದೆ, ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಅಡಿಗಲ್ಲು ಹಾಕಿದ ಯೋಜನೆಯನ್ನು ರದ್ದು ಮಾಡಿದ್ದರು. ಬೇಲೂರು-ಹಾಸನ ನಡುವಿನ ನಾಲ್ಕು ಪಥದ ರಸ್ತೆಗೆ ಈಗ ಮತ್ತೆ 900 ಕೋಟಿ ರೂ. ಮಂಜೂರು ಮಾಡಿದ್ದಾರೆ. ಜಿಲ್ಲೆಯ ಎಲ್ಲ ರಸ್ತೆಗೆ ನಾನು ಸಚಿವನಾಗಿದ್ದಾಗ 2 ಸಾವಿರ ಕೋಟಿ ಅನುದಾನ ಕೊಟ್ಟಿದ್ದೆ. ಈಗ ಹೊಸದಾಗಿ ಎಲ್ಲೋ ಶೆಡ್‌ ಹಾಕಲು ಅನುದಾನ ಕೊಟ್ಟಿರಬೇಕು” ಎಂದು ಶಾಸಕ ಪ್ರೀತಂಗೌಡ ಹೆಸರು ಹೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X