ಬಿಎಂಟಿಸಿ ನಕಲು ಸಹಿ ಅಕ್ರಮ | 7 ಜನರ ವಿರುದ್ಧ ಎಫ್‌ಐಆರ್‌ ದಾಖಲು; ಓರ್ವನ ಬಂಧನ

Date:

Advertisements

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಹಿರಿಯ ಅಧಿಕಾರಿಗಳ ಸಹಿ ನಕಲು ಮಾಡಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದೀಗ ಒಬ್ಬರನ್ನು ವಿಲ್ಸನ್ ಗಾರ್ಡನ್‌ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಶ್ರೀರಾಮ್ ಮುಲ್ಕಾವನ್ ಬಂಧಿತ. ಅಸಿಸ್ಟೆಂಟ್ ಸೆಕ್ಯುರಿಟಿ ಅಂಡ್ ವಿಜಿಲೆನ್ಸ್ ಅಧಿಕಾರಿ ಸಿ.ಕೆ ರಮ್ಯ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೋಲಿಸ್ ಠಾಣೆಯಲ್ಲಿ ಏಳು ಜನ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದೀಗ ಪ್ರಕರಣದ ಪ್ರಮುಖ ಆರೋಪಿಯನ್ನು ವಿಲ್ಸನ್‌ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Advertisements

ರಾಮ್ ಮುಲ್ಕಾವನ್(ಅಂದಿನ ಮುಖ್ಯ ಸಂಚಾರ ವ್ಯವಸ್ಥಾಪಕರು), ಶ್ಯಾಮಲಾ ಎಸ್. ಮದ್ದೋಡಿ(ವಿಭಾಗೀಯ ಸಂಚಾರ ಅಧಿಕಾರಿ), ಮಮತಾ ಬಿ.ಕೆ, ಸಹಾಯಕ(ಸಹಾಯಕ ಸಂಚಾರ ವ್ಯವಸ್ಥಾಪಕರು), ಅನಿತಾ ಟಿ(ಸಹಾಯಕ ಸಂಚಾರ ಅಧೀಕ್ಷಕಿ), ಗುಣಶೀಲ(ಸಹಾಯಕ ಸಂಚಾರ ನಿರೀಕ್ಷಕಿ), ವೆಂಕಟೇಶ್ ಆರ್(ಕಿರಿಯ ಸಹಾಯಕ), ಪ್ರಕಾಶ್ ಕೊಪ್ಪಳ(ಕಿರಿಯ ಸಹಾಯಕ) ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು.

ಈ ಹಿಂದೆ ಬಿಎಂಟಿಸಿಯಲ್ಲಿ ಎಂಡಿಗಳಾಗಿದ್ದ ಶಿಖಾ, ರೇಜು ಹಾಗೂ ಭದ್ರತಾ ಮತ್ತು ‌ಜಾಗೃತದಳದ ನಿರ್ದೇಶಕ ಅರುಣ್ ಕೆ ಸಹಿಯನ್ನು ಕಲರ್ ಜೆರಾಕ್ಸ್ ಮಾಡುವ ಮೂಲಕ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಕೋಟ್ಯಂತರ ಹಣವನ್ನು ವಂಚನೆ ಮಾಡಿದ್ದರು ಎಂದು ಆರೋಪಿಸಲಾಗಿದೆ.

ಕೋಟ್ಯಂತರ ಹಣವನ್ನು ವಂಚನೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆ, ಏಳು ಜನರನ್ನು ಕಮರ್ಷಿಯಲ್ ವಿಭಾಗದಿಂದ ನಾನಾ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ 30 ಕಡೆ ಬುಧವಾರ ಬೆಳ್ಳಂಬೆಳಗ್ಗೆ ಐಟಿ ದಾಳಿ

ಈ ಬಗ್ಗೆ ಅಸಿಸ್ಟೆಂಟ್ ಸೆಕ್ಯುರಿಟಿ ಅಂಡ್ ವಿಜಿಲೆನ್ಸ್ ಅಧಿಕಾರಿ ಸಿ.ಕೆ ರಮ್ಯ ನೀಡಿದ ದೂರಿನಲ್ಲಿ, “ಒಂದು ಕಡತದಲ್ಲಿ ₹10 ಕೋಟಿ 50 ಲಕ್ಷ ಹಾಗೂ ಮತ್ತೊಂದು ಕಡತದಲ್ಲಿ ₹6 ಕೋಟಿ 91 ಲಕ್ಷ ಹಾಗೂ ₹21 ಲಕ್ಷದ 64 ಸಾವಿರ, ₹1 ಲಕ್ಷದ 5 ಸಾವಿರ ಒಟ್ಟು ಸುಮಾರು ₹17 ಕೋಟಿ 64 ಲಕ್ಷ ರೂಪಾಯಿ ಸಂಸ್ಥೆಗೆ ನಷ್ಟ ಉಂಟು ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X