ದಾವಣಗೆರೆ | ಕೊಲೆ ಪ್ರಕರಣ ಭೇದಿಸಲು ಪೊಲೀಸರಿಗೆ ನೆರವಾದ ‘ಆ್ಯಪ್’

Date:

Advertisements

ಎಲ್ಲ ಕ್ಷೇತ್ರಗಳಲ್ಲಿಯೂ ತಂತ್ರಜ್ಞಾನ ಮುಂದುವರೆಯುತ್ತಿದೆ. ಕಳ್ಳರು, ಕೊಲೆಗಡುಕರು, ಹ್ಯಾಕರ್‌ಗಳು ತಮ್ಮ ಅಪರಾಧಗಳಿಲ್ಲಿಯೂ ತಂತ್ರಜ್ಞಾನವನ್ನು ಬಳಸಿಕೊಳ್ಳಲಾರಂಭಿಸಿದ್ದಾರೆ. ಅದೇ ರೀತಿ ಅವರನ್ನು ಬಂಧಿಸಬೇಕಾದ ಮತ್ತು ನಿಯಂತ್ರಿಸಬೇಕಾದ ಪೊಲೀಸರೂ ‘ಅಪ್‌ಡೇಟ್‌’ ಆಗಲೇಬೇಕಾದ ಅನಿವಾರ್ಯತೆ ಇದೆ. ಪೊಲೀಸ್‌ ಇಲಾಖೆಯೂ ಹೊಸ ಆ್ಯಪ್‌ಗಳನ್ನು ಅಭಿವೃದ್ಧಿಪಡಿಸಿ ಬಳಸಲಾರಂಭಿಸಿದೆ. ಅವುಗಳಲ್ಲಿ ಕ್ರೈಂ ಮತ್ತು ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಸಿಸ್ಟಮ್ (M-CCTNS) ಆ್ಯಪ್ ಕೂಡ ಒಂದು. ಕರ್ನಾಟಕದಲ್ಲಿ ಈ ಆ್ಯಪ್‌ ಬಳಸಿ, ಮೊದಲ ಬಾರಿಗೆ ಪ್ರಕರಣವೊಂದನ್ನು ಪೊಲೀಸರು ಬೇಧಿಸಿದ್ದಾರೆ.

ಮಾರ್ಚ್​​ 23 ರಂದು ದಾವಣಗೆರೆಯ ‘ರಿಂಗ್‌ ರೋಡ್‌’ನಲ್ಲಿ ಮೈ ಮೇಲೆ ಖಾರದ ಪುಡಿ ಹಾಕಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿತ್ತು. ಮೃತ ವ್ಯಕ್ತಿ ಯಾರೆಂದು ಪತ್ತೆ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದರಾದರೂ, ವ್ಯಕ್ತಿಯ ಗುರುತು ಮಾತ್ರ ಪತ್ತೆಯಾಗಿರಲಿಲ್ಲ. ಆಗ ಅವರಿಗೆ ಈ ಆ್ಯಪ್‌ ನೆರವಾಯಿತು. ಆ್ಯಪ್‌ ಸಹಾಯದಲ್ಲಿ ವ್ಯಕ್ತಿಯ ಗುರುತನ್ನು ಪತ್ತೆ ಹಚ್ಚಿದ ಪೊಲೀಸರು ಆತನ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ.

ದಾವಣಗೆರೆಯ ವಿದ್ಯಾನಗರ ಪೊಲೀಸರು ಕೊಲೆಯಾದ ವ್ಯಕ್ತಿಯ ಬೆರಳಚ್ಚನ್ನು ‘ಸ್ಕಾನ್’ ಮಾಡಿ ಆ್ಯಪ್‌ಗೆ ಅಪ್‌ಲೋಡ್‌ ಮಾಡಿದ್ದಾರೆ. ಕೂಡಲೇ, ಆ ವ್ಯಕ್ತಿಯ ಹೆಸರು ಮತ್ತು ವಿಳಾಸ ತೆರೆದುಕೊಂಡಿದೆ. ಹತ್ಯೆಯಾದ ವ್ಯಕ್ತಿ, ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಾಂತೇಶ್ ಎಂಬುದನ್ನು ಪೊಲೀಸರು ಆ್ಯಪ್‌ ಮೂಲಕ ಕಂಡುಕೊಂಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ?: ಹಾಸನ | ರಂಜಾನ್‌ ಉಪವಾಸದ ವೇಳೆ ಮೀಸಲಾತಿ ತೆಗೆದಿರುವುದೇ ಸರ್ಕಾರವನ್ನು ಕೆಳಗಿಳಿಸಲಿದೆ: ಎಚ್‌ ಡಿ ರೇವಣ್ಣ

ಪ್ರಕರಣದ ಬೆನ್ನತ್ತಿದ ಪೊಲೀಸರು ಆತನ ಪತ್ನಿ ಸೌಮ್ಯ ಹಾಗೂ ಅವಳ ಪ್ರಿಯಕರ ಚಂದ್ರಶೇಖರ್‌ನನ್ನು ವಿಚಾರಣೆ ಒಳಪಡಿಸಿದ್ದಾರೆ. ಈ ಇಬ್ಬರೂ ಸೇರಿ, ಮದ್ಯದಲ್ಲಿ ನಿದ್ರೆ ಮಾತ್ರೆ ಬೆರೆಸಿ, ಆತನಿಗೆ ಕುಡಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್‌ ರೆಕಾರ್ಡ್‌ನಲ್ಲಿ ಯಾವುದೇ ವ್ಯಕ್ತಿಯ ಹೆಸರು ಮತ್ತು ವಿಳಾಸ ನಮೂದಾಗಿದ್ದರೆ ಮಾತ್ರವೇ ಈ ಆ್ಯಪ್‌ನಲ್ಲಿ ಅವರ ಗುರುತನ್ನು ಪತ್ತೆ ಹಚ್ಚಬಹುದು ಎನ್ನಲಾಗಿದೆ. ಈ ಆ್ಯಪ್‌ಅನ್ನು ರಾತ್ರಿ ಗಸ್ತಿನ ಸಮಯದಲ್ಲಿ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳನ್ನು ಪರಿಶೀಲಿಸಲು ಬಳಸಲಾಗುತ್ತದೆ ಎಂದು ತಿಳಿದುಬಂದಿದೆ. ಇದೇ ಮೊದಲ ಬಾರಿಗೆ, ರಾಜ್ಯದಲ್ಲಿ ಈ ಆ್ಯಪ್‌ ಬಳಸಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X