ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಮಾತನಾಡಿದರು.

ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್‌ಗಳಿಗೆ ಅನುಮತಿ ಪತ್ರ ದೊರೆಯುತ್ತದೆ.  ತಿಂಗಳಿಗೊಮ್ಮೆ ಪ್ರಾಧಿಕಾರದ ಸಭೆ ನಡೆಯುವುದರಿಂದ ವಿಳಂಬವಾಗುತ್ತಿದೆ. ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಮುಖ್ಯಮಂತ್ರಿಗಳು ಪ್ರಾಧಿಕಾರದ ಆಯುಕ್ತರಿಗೆ ಸಿದ್ದರಾಮಯ್ಯ ಸೂಚಿಸಿದರು.

Advertisements

ಹೊಸ ಮರಳು ನೀತಿ 2020ನ್ನು 1.12.2021 ರಂದು ಜಾರಿಗೆ ತಂದಿದ್ದು, ಸಣ್ಣ ಬ್ಲಾಕ್‌ಗಳಿವೆ. ಕಟ್ಟಡ ನಿರ್ಮಾಣ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಸಾಂಪ್ರದಾಯಿಕವಾಗಿ ಮರಳು ತೆಗೆಯುವವರ ಹಿತಾಸಕ್ತಿ ಯನ್ನೂ ಕಾಪಾಡಬೇಕಿದೆ. ಕಾರ್ಮಿಕರಿಗೆ ಸಮಸ್ಯೆಯಾಗದಂತೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದರು.

ನಾನ್ ಸಿಆರ್‌ ಝೆಡ್‌ ಪ್ರದೇಶದಲ್ಲಿ ಟೆಂಡರ್ ಕಂ ಹರಾಜು ಮೂಲಕ ಗುತ್ತಿಗೆ ಮಂಜೂರು ಮಾಡಲು 39 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಈ ಪೈಕಿ 9 ಬ್ಲಾಕ್‌ಗಳ ಟೆಂಡರ್ ಪ್ರಕ್ರಿಯೆ ಯಶಸ್ವಿಯಾಗಿದ್ದು, 30 ಮರಳು ಬ್ಲಾಕ್‌ಗಳಿಗೆ ಮರು ಹರಾಜು ಪ್ರಕ್ರಿಯೆ ಶೀಘ್ರ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಭೆಗೆ ಮಾಹಿತಿ ಒದಗಿಸಿದರು.

8 ಲಕ್ಷ ಟನ್ ಮರಳು ಅಗತ್ಯವಿದೆ. ಜೆಲ್ಲಿ, ಕೆಂಪುಕಲ್ಲಿನ ಸಮಸ್ಯೆ ಇದೆ. ಮಂಗಳೂರು, ಉಡುಪಿಯಲ್ಲಿನ ಹವಾಗುಣಕ್ಕಾಗಿ ಗೃಹನಿರ್ಮಾಣಕ್ಕೆ ಬಳಕೆಯಾಗುತ್ತದೆ. ಇದರಲ್ಲಿ ಬಾಕ್ಸೈಟ್ ಇದೆ ಎಂಬ ಕಾರಣಕ್ಕೆ ಕೈಗಾರಿಕೆಗಳು ಇದನ್ನು ಬಳಸುತ್ತವೆ. ಜಿಲ್ಲೆಯಿಂದ ಹೊರಗೆ ಕಳಿಸುವುದು ಬೇಡ ಎಂಬ ಅಭಿಪ್ರಾಯ ಜನರಲ್ಲಿದೆ.

ಮರಳು ಗಣಿಗಾರಿಕೆಗೆ ಪರವಾನಗಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಪರವಾನಗಿ ನೀಡಲಿ. ಮನೆ ಕಟ್ಟಲು ಅಗತ್ಯವಿರುವ ಸೈಜುಗಲ್ಲುಗಳಿಗೆ ಗಣಿಗಾರಿಕೆ ಮಾಡಲು ಕಾಯ್ದೆಯ ಸರಳೀಕರಣ ಮಾಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಬೇಕು ಎಂದು ಸಭೆಯಲ್ಲಿ ಮನವಿ ಮಾಡಲಾಯಿತು.

ಕೆಂಪುಕಲ್ಲಿನ (Laterite) ಗಣಿಗಾರಿಕೆ ಗೆ 71 ಕಾರ್ಯಾದೇಶಗಳನ್ನು ಒಂದು ವರ್ಷದ ಅವಧಿಗೆ ನೀಡಲಾಗಿದೆ. ಖನಿಜವನ್ನು ಬಾಕ್ಸೈಟ್‌ಆಗಿ ವಿಂಗಡಿಸಿರುವುದರಿಂದ 17.03.2023 ರಂದು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994ಗೆ ತಿದ್ದುಪಡಿ ತಂದು ತಿದ್ದುಪಡಿ ನಿಯಮ 2023 ಜಾರಿಗೊಳಿಸಲಾಗಿದೆ. ಹೀಗಾಗಿ ಲ್ಯಾಟರೈಟ್ ಖನಿಜಕ್ಕೆ ಕಾರ್ಯಾದೇಶ ನೀಡುವುದನ್ನು ಕೈಬಿಡಲಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು.

ಸ್ಥಳೀಯ ಜಿಲ್ಲೆಗೆ ಅಗತ್ಯವಿರುವಂತೆ ಕಾಯ್ದೆಗೆ ತಿದ್ದುಪಡಿ ಮಾಡಬಹುದು. ಕೆಂಪುಕಲ್ಲಿಗೆ ಸಂಬಂಧಿಸಿದಂತೆ ಹಿಂದಿನ ಸರ್ಕಾರ ಮಾಡಲಾಗಿರುವ ತಿದ್ದುಪಡಿಯನ್ನು ಪುನಃ ತಿದ್ದುಪಡಿ ಮಾಡಿ ವಾಹನಗಳಿಗೆ ಅನುಮತಿ ನೀಡಬಹುದು. ಕ್ರಶಿಂಗ್ ಮಾಡಲಾದ ಮಣ್ಣನ್ನು ಜಿಲ್ಲೆಯೊಳಗಿನ ಬಳಕೆಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.

ಜಿಲ್ಲಾ ಆಸ್ಪತ್ರೆಯಲ್ಲಿ 9 ಡಯಾಲಿಸಿಸ್ ಯಂತ್ರಗಳು ಕೆಟ್ಟಿದೆ. ಒಂದೇ ಯಂತ್ರ ಕಾರ್ಯನಿರ್ವಹಿಸುತ್ತಿದೆ. ಅಲ್ಲಿನ ಸಿಬ್ಬಂದಿಗೆ 6 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಕೂಡಲೇ ವೇತನ ನೀಡುವಂತೆ ಸಿಎಂ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X