ಕೊಪ್ಪಳ | ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ; ಮೂವರು ಪೊಲೀಸರು ಅಮಾನತು

Date:

Advertisements

ಗಣೇಶ ವಿಸರ್ಜನೆ ವೇಳೆ  ಮಸೀದಿ ಮುಂದೆ ಪೂಜೆ ಸಲ್ಲಿಸಿದ್ದನ್ನು ತಡೆಗಟ್ಟುವಲ್ಲಿ ವಿಫಲವಾದ ಪೊಲೀಸ್‌ ಸಿಬ್ಬಂದಿಯನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಗೊಳಿಸಲಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಂಗಳವಾರ ಹಿಂದು ಮಹಾ ಮಂಡಳಿ ಕಾರ್ಯಕರ್ತರು ಗಣೇಶ ವಿಸರ್ಜನೆ ಕಾರ್ಯಕ್ರಮ ನಡೆಸಿದ್ದರು. ಈ ವೇಳೆ, ಜಾಮೀಯ ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡುತ್ತಿದ್ದ ವಾಹನವನ್ನು ನಿಲ್ಲಿಸಿ ಕುಂಬಳಕಾಯಿ ಹೊಡೆದು, ಹೋಮಕುಂಡ ಹಾಕಿ ಪೂಜೆ ಸಲ್ಲಿಸಲಾಗಿತ್ತು. ಇದಕ್ಕೆ ಮುಸ್ಲಿಂ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಮಸೀದಿ ಮುಂದೆ ಪೂಜೆ ಸಲ್ಲಿಸುವುದು ಕೋಮು ಪ್ರಚೋದನೆ ನೀಡುತ್ತದೆ ಎಂದು ಗೊತ್ತಿದ್ದರೂ, ಪೂಜೆ ಮಾಡುವುದನ್ನು ತಡೆಯುವಲ್ಲಿ ಪೊಲೀಸ್‌ ಸಿಬ್ಬಂದಿ ವಿಫಲವಾಗಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ, ಗಂಗಾವತಿ ನಗರ ಠಾಣೆ ಇನ್ಸ್​ಪೆಕ್ಟರ್ ಅಡಿವೇಶ ಗುದಿಗೊಪ್ಪ, ಪಿಎಸ್​ಐ ಕಾಮಣ್ಣ ಹಾಗೂ ಹೆಡ್ ಕಾನ್ಸ್‌ಟೇಬಲ್ ಮರಿಯಪ್ಪ ಹೊಸಮನಿ ಅವರನ್ನು ಸಸ್ಪೆಂಡ್ ಮಾಡಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅದೇಶ‌ ಹೊರಡಿಸಿದ್ದಾರೆ.

Advertisements

ಗಂಗಾವತಿ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾಗಿದೆ. ಆದರೂ, ಪೊಲೀಸರು ಮಸೀದಿ ಮುಂದೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ. ಅಲ್ಲದೆ, ಮಸೀದಿ ಮುಂದೆ ಪೂಜೆ ಮಾಡಲು ಪೊಲೀಸರು ಬಿಟ್ಟಿದ್ದಾರೆ. ಪರಿಣಾಮ ಪ್ರಕ್ಷುಬ್ಧ ವಾತವರಣ ನಿರ್ಮಾಣವಾಗಿತ್ತು ಎಂದು ಹೇಳಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X