ಒಂದೇ ಮಳೆಗೆ ಹೊಂಡವಾದ ನಲ್ಲೂರಳ್ಳಿ ಮೆಟ್ರೋ ನಿಲ್ದಾಣ

Date:

Advertisements
  • ಅವೈಜ್ಞಾನಿಕ ಕಾಮಗಾರಿಯಲ್ಲ ಎಂದ ಅಧಿಕಾರಿಗಳು
  • ಮಳೆಯ ನೀರು ಹೊರಗೆ ಚೆಲ್ಲಲು ಸಿಬ್ಬಂದಿ ಹರಸಾಹಸ

ಕಾಮಗಾರಿ ಪೂರ್ಣವಾಗದಿದ್ದರೂ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದ ತರಾತುರಿಯಲ್ಲಿ ಉದ್ಘಾಟನೆಯಾದ ವೈಟ್ ಫೀಲ್ಡ್ ಹಾಗೂ ಕೆ ಆರ್ ಪುರಂ ಮಾರ್ಗದ ನಲ್ಲೂರಳ್ಳಿ ಮೆಟ್ರೋ ನಿಲ್ದಾಣದಲ್ಲಿ ಅವೈಜ್ಞಾನಿಕ ಕಾಮಗಾರಿ ಬೆಳಕಿಗೆ ಬಂದಿದೆ.

ಮಾರ್ಚ್‌ 25ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಯಾಗಿದ್ದ ನೇರಳೆ ಮಾರ್ಗದ ನಲ್ಲೂರಳ್ಳಿ ಮೆಟ್ರೋ ನಿಲ್ದಾಣದಲ್ಲಿ ಏ.3ರ ರಾತ್ರಿ ಸುರಿದ ಮಳೆಗೆ, ಟಿಕೆಟ್‌ ನೀಡುವ ಸ್ಥಳ ಮತ್ತು ರೈಲಿಗಾಗಿ ಪ್ರಯಾಣಿಕರು ಕಾಯುವ ಸ್ಥಳದಲ್ಲಿ ನೀರು ತುಂಬಿಕೊಂಡಿತ್ತು. ಇದರಿಂದ ಪ್ರಯಾಣಿಕರು ಭಾರೀ ಸಮಸ್ಯೆ ಅನುಭವಿಸಬೇಕಾಯಿತು.

ನಲ್ಲೂರಳ್ಳಿ ಮೆಟ್ರೋ ನಿಲ್ದಾಣದ ಅವ್ಯವಸ್ಥೆಯ ಫೋಟೊ ಮತ್ತು ವಿಡಿಯೋಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ನೆಟ್ಟಿಗರು, ಮೆಟ್ರೋ ನಿಲ್ದಾಣದ ಅವೈಜ್ಞಾನಿಕ ಕಾಮಗಾರಿಯ ಬಗ್ಗೆ ವ್ಯಾಪಕ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಗೀಳಿಗಾಗಿ ಇನ್ನೂ ಕಾಮಗಾರಿಯೇ ಪೂರ್ಣವಾಗದ ಮೆಟ್ರೋ ಮಾರ್ಗವನ್ನು ಉದ್ಘಾಟನೆ ಮಾಡಲಾಗಿದೆ ಎಂದು ಟೀಕಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ನೀತಿ ಸಂಹಿತೆ ಜಾರಿಯಾದರೂ ರಾರಾಜಿಸುತ್ತಿವೆ ಫೋಟೊ-ಬ್ಯಾನರ್ ಗಳು: ದಂಡದ ಎಚ್ಚರಿಕೆ

ಕೆಲವು ದಿನಗಳ ಹಿಂದೆ ಕೆ ಆರ್‌ ಪುರಂ ಮೆಟ್ರೋ ಕಾಮಗಾರಿಯಿಂದ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಇದೀಗ ಮಳೆ ನೀರು ತುಂಬಿಕೊಂಡಿದೆ. ಅದಲ್ಲದೆ ಮೆಟ್ರೋ ರೈಲಿಗಾಗಿ ಕಾಯುವ ನಿಲ್ದಾಣದಲ್ಲಿ ನಿಲ್ಲಲು ಸಹ ವ್ಯವಸ್ಥಿತವಾದ ಜಾಗ ಇಲ್ಲ. ಅಲ್ಲಿಯೂ ಮಳೆ ಧಾರಕಾರವಾಗಿ ಸುರಿಯುತ್ತಿದೆ. ಇದು 40% ಸರ್ಕಾರದ ಭ್ರಷ್ಟಚಾರ ಎಂದು ನೆಟ್ಟಿಗರು ಲೇವಡಿ ಮಾಡಿದ್ದಾರೆ.

ಕಾಮಗಾರಿ ಅವೈಜ್ಞಾನಿಕವಾಗಿಲ್ಲ: ಸ್ಪಷ್ಟನೆ

ಈ ಕುರಿತು ಬಿಎಂಆರ್‌ಸಿಎಲ್‌ ನ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀವಾಸ್‌, ಈದಿನ.ಕಾಮ್‌ ಜೊತೆಗೆ ಮಾತನಾಡಿ, “ಇದು ಅವೈಜ್ಞಾನಿಕ ಕಾಮಗಾರಿಯಲ್ಲ. ಮಳೆ ಜೋರಾಗಿ ಬಂದಿರುವುದೇ ಇದಕ್ಕೆ ಕಾರಣ. ಮಳೆಯ ನೀರು ಹೊರಗಿನಿಂದ ಮೆಟ್ರೋ ನಿಲ್ದಾಣದ ಒಳಕ್ಕೆ ಹರಿದು ಬಂದಿದೆ. ಮಳೆ ನೀರನ್ನು ಹೊರಗೆ ಹಾಕಿ, ಈಗ ಅಲ್ಲಿ ಸ್ವಚ್ಛ ಮಾಡಲಾಗಿದೆ” ಎಂದು ಸ್ಪಷ್ಟನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X