ಕಲಬುರಗಿ | ತೀವ್ರ ಹದಗೆಟ್ಟ ಶಹಾಬಾದ್‌ – ಜೇವರ್ಗಿ ರಸ್ತೆ; ಅ.9 ರಂದು ರಸ್ತೆ ತಡೆ ಪ್ರತಿಭಟನೆ

Date:

Advertisements

ಸಂಪೂರ್ಣ ಹದಗಟ್ಟಿರುವ ಶಹಾಬಾದ್‌ – ಜೇವರ್ಗಿ ರಸ್ತೆಯ ದುರಸ್ಥಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅ.9ರಂದು ವಾಡಿ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಅನಿರ್ಧಿಷ್ಟಾವಧಿ ಕಾಲ ಧರಣಿ ನಡೆಸಲು ಪ್ರಗತಿಪರ ಸಂಘಟನೆಗಳು ಹಾಗೂ ಪ್ರಗತಿಪರ ಒಕ್ಕೂಟ ನಿರ್ಧರಿಸಿದೆ.

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪಾ ಹಳ್ಳಿ, “ಶಹಾಬಾದ್‌ ತಾಕೂಕು ಕೇಂದ್ರವಾಗಿದ್ದರೂ ಜನಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ತಾಲೂಕಿನ ಪ್ರಗತಿ ಶೂನ್ಯವಾಗಿದೆ. ಹಲವು ಬಾರಿ ಶಹಾಬಾದ್‌ – ಜೇವರ್ಗಿ ನಡುವಿನ ರಸ್ತೆ ನಿರ್ಮಿಸಿದರೂ ಹಾಳಾಗುತ್ತಿದ್ದು, ಹೊಸ ರಸ್ತೆ ನಿರ್ಮಿಸುವಂತೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ” ಎಂದು ಹೇಳಿದರು.

“ವಾಡಿ ಕ್ರಾಸ್‌ನಿಂದ ಮರಗೊಳ ಕ್ರಾಸ್‌, ಜೇವರ್ಗಿ ಕ್ರಾಸ್‌ ವರೆಗೆ 17 ಕಿ.ಮೀ. ರಸ್ತೆ ಸಂಪೂರ್ಣ ಹದಗೆಟ್ಟಿದೆ. ಕಳೆದು ಎರಡ್ಮೂರು ವರ್ಷಗಳಿಂದ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದ್ದಾರೆ.

Advertisements

“ಅ.9 ರಂದು ನಡೆಯುವ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ತಾಲ್ಲೂಕಿನ ಸುಮಾರು ಎರಡು ಸಾವಿರ ಜನರು ಭಾಗವಹಿಸಲಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬರುವವರೆಗೂ ಪ್ರತಿಭಟನೆ ಮುಂದುವರೆಯುತ್ತದೆ” ಎಂದು ತೀಳಿಸಿದ್ದಾರೆ.

“ಜಿಲ್ಲೆಯಲ್ಲಿ ತಹಸೀಲ್ದಾರ್ ಕಚೇರಿ, ನಗರಸಭೆ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಎಗ್ಗಿಲ್ಲದೆ ಭ್ರಷ್ಟಾಚಾರ ನಡೆಯುತ್ತಿದೆ. ಹಣ ಕೊಡದೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಇದರಿಂದ ಸಾರ್ವಜನಿಕರು ಅಲೆದಾಡುವಂತಾಗಿದೆ. ಇನ್ನು ಹಣ ನೀಡಿದರೆ ಮಾತ್ರ ಸಾಮಾನ್ಯ ಸಭೆಗೆ ಹಾಜರಾಗುತ್ತೇವೆಂದು ಜನಪ್ರತಿನಿಧಿಗಳು ರಾಜಾರೋಷವಾಗಿ ಹೇಳುತ್ತಾರೆ” ಎಂದು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿವಾಹೇತರ ಸಂಬಂಧ ಹೊಂದಿರುವ ಪತ್ನಿಯು ಪತಿಯಿಂದ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್‌

ಪತ್ರಿಕಾಗೋಷ್ಠಿಯಲ್ಲಿ ಎಸ್.‌ ಎಚ್.‌ ರಾಘವೇಂದ್ರ,  ಪೂಜಪ್ಪಾ ಮೇತ್ರಿ, ವಿಶ್ವನಾಥ ಫಿರೋಜಾಬಾದ್, ಮಲ್ಲಣ್ಣ ಮಸ್ಕಿ, ಕಿರಣ, ಯಲ್ಲಾಲಿಂಗ, ಗಣಪತರಾವ ಮಾನೆ ಸೇರಿದಂತೆ ಇತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X