ಉತ್ತರ ಕನ್ನಡ | ಜಿಲ್ಲೆಯಲ್ಲಿ ಹೆಚ್ಚುತ್ತಿವೆ ಡೆಂಘಿ ಪ್ರಕರಣಗಳು

Date:

Advertisements

ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಘಿ ಜ್ವರದ ಹಾವಳಿ ಹೆಚ್ಚಾಗಿದೆ. ಕಳೆದ ಮೂರು ತಿಂಗಳಲ್ಲಿ ಜಿಲ್ಲೆಯಲ್ಲಿ 42 ಮಂದಿ ಡೆಂಘಿ ಜ್ವರಕ್ಕೆ ತುತ್ತಾಗಿದ್ದಾರೆ. ಜಿಲ್ಲೆಯ ಜನರು ಭಯಭೀತರಾಗಿದ್ದಾರೆ.

ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜ್ವರಕ್ಕೆ ತುತ್ತಾಗುತ್ತಿದ್ದಾರೆ. ಅವರಲ್ಲಿ ಡೆಂಘಿ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ ತಿಂಗಳು 467 ಮಂದಿಯನ್ನು ಡೆಂಘಿ ಪರೀಕ್ಷೆಗೆ ಒಳಪಡಿಲಾಗಿದೆ. ಹಲವರಲ್ಲಿ ಡೆಂಘಿ ಸೋಂಕು ಪತ್ತೆಯಾಗಿಲ್ಲ. ಆದರೂ, ತಿಂಗಳಿಂದ ತಿಂಗಳಿಗೆ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ತಿಳಿದುಬಂದಿದೆ.

ಡೆಂಘಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಕಾರವಾರದ ಕ್ರೀಮ್ಸ್ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಗಳನ್ನು ಮೀಸಲಿಡಲಾಗಿದೆ. ಡೆಂಘಿ ಹರಡುವಿಕೆಯನ್ನು ತಡೆಯಲು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಕೊಳಚೆ ಮತ್ತು ನೀರು ನಿಲ್ಲುವ ತಗ್ಗು ಪ್ರದೇಶದಲ್ಲಿ ಫಾಗಿಂಗ್ ಮಾಡಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತೆಯರು ಜಾಗೃತಿ ಮೂಡಿಸುವ ಕೆಲಸದಲ್ಲಿ ತೊಡಗಿದ್ದಾರೆ. ಸ್ವಚ್ಚತೆ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

“ಡೆಂಘಿ ತಡೆಯಲು ಸೊಳ್ಳೆಗಳು ಉತ್ಪತ್ತಿಯಾಗುವದನ್ನು ತಡೆಯಲು ನೀರು ನೀಲ್ಲದಂತೆ ನೋಡಿಕೊಳ್ಳಬೇಕು. ಮನೆಯ ಒಳಗೆ ಹಾಗೂ ಹೊರಗೆ ಸ್ವಚ್ಛತೆಯನ್ನು ಕಾಪಾಡಬೇಕು. ಬೆಚ್ಚಗಿನ ನೀರು ಕುಡಿಯಬೇಕು. ಕಸ ಮತ್ತು ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X