ಬೆಂಗಳೂರು | ಅತ್ತಿಬೆಲೆಯಲ್ಲಿ ಹೊತ್ತಿ ಉರಿದ ಪಟಾಕಿ ಅಂಗಡಿ: 12 ಮಂದಿ ಮೃತ್ಯು

Date:

Advertisements

ಪಟಾಕಿ ಅನ್‌ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, 12 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.

ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ.

ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ ಪರಿಣಾಮ, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisements

ಪ್ರತಿ ವರ್ಷದಂತೆ ದೀಪಾವಳಿಗಾಗಿ ವಿಶೇಷ ಪಟಾಕಿ ಲೋಡ್ ಲಾರಿಯಿಂದ ಇಳಿಸುವ ಸಂದರ್ಭದಲ್ಲಿ ಈ ಅಚಾತುರ್ಯ ಸಂಭವಿಸಿದೆ. ಅಲ್ಲದೆ ಇನ್ನೂ ಕೆಲವರಿಗೆ ಗಾಯಗಳಾಗಿವೆ. ಘಟನೆ ಬಗ್ಗೆ ಮಾಹಿತಿ ತಿಳಿದ ಅತ್ತಿಬೆಲೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸ್ಥಳೀಯರೂ ಕೂಡ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದು, ಅಂಗಡಿ ಸುಟ್ಟು ಕರಕಲಾಗಿದೆ.

ದುರಂತದಲ್ಲಿ ಕೋಟ್ಯಂತರ ಮೌಲ್ಯದ ಪಟಾಕಿ ಅಗ್ನಿಗಾಹುತಿ ಆಗುವುದರೊಂದಿಗೆ 1 ಕ್ಯಾಂಟರ್, 2 ಬೊಲೆರೋ, 4 ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ದೊಡ್ಡ ಮಳಿಗೆ ಆಗಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೂ ಪಟಾಕಿ ಅಂಗಡಿ ದುರಂತ ಎಫೆಕ್ಟ್ ತಟ್ಟಿದ್ದು, ಅತ್ತಿಬೆಲೆ ಕಡೆ ತೆರಳುವ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ಘಟನೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ‘ಬಾಲಾಜಿ ಕ್ರಾಕರ್ಸ್ ದಾಸ್ತಾನು ಮಳಿಗೆಗೆ ಕ್ಯಾಂಟರ್ ವಾಹನದಿಂದ ಪಟಾಕಿ ಇಳಿಸುವಾಗ ಅವಘಡ ಸಂಭವಿಸಿದೆ. ಕೂಡಲೇ ಮಳಿಗೆ ಮತ್ತು ಗೋದಾಮಿಗೆ ಬೆಂಕಿಯ ಜ್ವಾಲೆ ಆವರಿಸಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆ” ಎಂದು ತಿಳಿಸಿದರು.

‘ಸದ್ಯ ಶೇ. 80ರಷ್ಟು ಬೆಂಕಿ ನಿಯಂತ್ರಣ ಮಾಡಲಾಗಿದೆ. ಘಟನೆಯಲ್ಲಿ ಮಳಿಗೆಯ ಮಾಲೀಕ ನವೀನ್‌ಗೂ ಸುಟ್ಟ ಗಾಯಗಳಾಗಿದೆ. ಬೆಂಕಿ ಸಂಪೂರ್ಣ ನಂದಿಸಿದ ಬಳಿಕ ಮಳಿಗೆ ಒಳಗೆ ಎಷ್ಟು ಜನ ಕಾರ್ಮಿಕರು ಸಿಲುಕಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಗಲಿದೆ. ಪರಿಶೀಲನೆಗಾಗಿ ಎಫ್.ಎಸ್.ಎಲ್ ಟೀಮ್ ಆಗಮಿಸಲಿದೆ. ಮಳಿಗೆ ಪರವಾನಗಿ ಬಗ್ಗೆಯೂ ಪರಿಶೀಲನೆ ಮಾಡಲಿದ್ದೇವೆ’ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X