ಇಸ್ರೇಲ್ | ಯುದ್ಧಪೀಡಿತ ಪ್ರದೇಶದಲ್ಲಿ ಸಿಲುಕಿರುವ ಮೇಘಾಲಯದ ಸಂಸದ

Date:

Advertisements

ಹಮಾಸ್ ಸಂಘಟನೆಯಿಂದ ದಾಳಿಗೊಳಗಾಗಿರುವ ಇಸ್ರೇಲ್‌ನಲ್ಲಿ ಮೇಘಾಲಯದ ರಾಜ್ಯಸಭಾ ಸದಸ್ಯರಾದ ಡಾ. ವಾನ್‌ವೈರೋಯ್ ಖಾರ್ಲುಖಿ, ಅವರ ಪತ್ನಿ ಹಾಗೂ ಪುತ್ರಿ ಕೂಡ ಇದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೇಘಾಲಯದ ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ) ರಾಜ್ಯಸಭಾ ಸದಸ್ಯ ಡಾ ಖಾರ್ಲುಖಿ ಅವರು ತಮ್ಮ ರಾಜ್ಯದ 24 ಸ್ಥಳೀಯರೊಂದಿಗೆ ಜೆರುಸಲೇಂಗೆ ತೆರಳಿದ್ದರು. ಯುದ್ಧದ ವಾತಾವರಣ ನಿರ್ಮಾಣವಾದ ಕಾರಣ ಅವರು ಬೆತ್ಲೆಹೆಮ್‌ನಲ್ಲಿ ಸಿಲುಕಿಕೊಂಡಿದ್ದಾರೆ.

ಮೇಘಾಲಯ ಮುಖ್ಯಮಂತ್ರಿ ಮತ್ತು ಎನ್‌ಪಿಪಿ ಮುಖ್ಯಸ್ಥ ಕಾನ್ರಾಡ್ ಸಂಗ್ಮಾ, ಡಾ ಖಾರ್ಲುಖಿ ಅವರು ಭಾರತಕ್ಕೆ ವಾಪಸ್‌ ಮರಳುವುದನ್ನು ಖಚಿತಪಡಿಸಿಕೊಳ್ಳಲು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ (ಎಂಇಎ) ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಇಸ್ರೇಲ್ | ಭಾರತೀಯ ವಿದ್ಯಾರ್ಥಿಗಳಿಗೆ ರಾಯಭಾರ ಕಚೇರಿಯಿಂದ ಸುರಕ್ಷತಾ ಸೂಚನೆ

ಮೂಲಗಳ ಪ್ರಕಾರ, ಖಾರ್ಲುಖಿ ಅವರನ್ನು ಭಾನುವಾರ ಈಜಿಪ್ಟ್‌ಗೆ ಭಾರತೀಯ ರಾಯಭಾರ ಕಚೇರಿಯು ಸ್ಥಳಾಂತರಿಸುವ ಸಾಧ್ಯತೆಯಿದೆ.

ಹಮಾಸ್ ಮತ್ತು ಇಸ್ರೇಲ್ ನಡುವಿನ ಪೂರ್ಣ ಪ್ರಮಾಣದ ಯುದ್ಧದಿಂದ ಇಲ್ಲಿಯವರೆಗೆ 500 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇಸ್ರೇಲ್ ಮತ್ತು ಪ್ಯಾಲೆಸ್ಟೈನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳು ಭಾರತೀಯ ನಾಗರಿಕರಿಗೆ ಎಚ್ಚರಿಕೆಯನ್ನು ನೀಡುವಂತೆ ಮತ್ತು ಅಗತ್ಯವಿದ್ದರೆ ಕಚೇರಿಯನ್ನು ಸಂಪರ್ಕಿಸುವಂತೆ ಎಚ್ಚರಿಸಿದೆ.

ಏತನ್ಮಧ್ಯೆ, ಯುದ್ಧಪೀಡಿತ ಪ್ರದೇಶದಲ್ಲಿ ಸಿಲುಕಿದ್ದ ಬಾಲಿವುಡ್ ನಟಿ ನುಶ್ರತ್ ಭರುಚ್ಚ ಅವರು ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಭಾರತಕ್ಕೆ ಸುರಕ್ಷಿತವಾಗಿ ಮರಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X