ರಾಮನಗರ | ಮೈತ್ರಿ ಸರ್ಕಾರ ಪತನಕ್ಕೆ ಡಿಕೆ ಶಿವಕುಮಾರ್​​​ ಕಾರಣ: ಎಚ್‌ಡಿಕೆ ಆರೋಪ

Date:

Advertisements

ಮೈತ್ರಿ ಸರ್ಕಾರ ಪತನವಾಗಿದ್ದೇ ಡಿ.ಕೆ ಶಿವಕುಮಾರ್ ಅವರಿಂದ. ನನ್ನ ಕೈಯನ್ನು ಮೇಲೆ ಎತ್ತಿ ಜೋಡೆತ್ತು ಎಂದಿದ್ದನ್ನು ಕೇಳಿ ಮೋಸ ಹೋದೆ. ನನ್ನನ್ನು ನಡುರಸ್ತೆಯಲ್ಲಿ ಕೈಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ರಾಮನಗರದಲ್ಲಿ ನಡೆದ ಜೆಡಿಎಸ್‌ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು,. “ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಪತನವಾಗುತ್ತದೆ. 2024ರಲ್ಲಿ ಮತ್ತೆ ವಿಧಾನಸಭಾ ಚುನಾವಣೆ ನಡೆಯುತ್ತದೆ” ಎಂದು ರಾಜ್ಯದ ಜನರಲ್ಲಿ ಗೊಂದಲ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ.

“ಡಿ.ಕೆ ಶಿವಕುಮಾರ್‌ ತಿಹಾರ್ ಜೈಲಿಗೆ ಹೋಗುವುದು ಗ್ಯಾರಂಟಿ. ಅವರು ಶಾಶ್ವತವಾಗಿ ತಿಹಾರ್ ಜೈಲಿಗೆ ಹೋದರೂ ಅಚ್ಚರಿ ಇಲ್ಲ. 2024ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಆ ವ್ಯಕ್ತಿ (ಡಿ.ಕೆ ಶಿವಕುಮಾರ್) ಅಭ್ಯರ್ಥಿ ಆಗುವುದೇ ಅನುಮಾನ” ಎಂದು ಹೇಳಿದ್ದಾರೆ.

Advertisements

“ನನ್ನ ಕೈಹಿಡಿದು ಜೋಡೆತ್ತು ಎಂದವರು ನಡುರಸ್ತೆಯಲ್ಲಿ ಕೈ ಬಿಟ್ಟರು. ಅವರ ಮಾತುಗಳನ್ನು ನಂಬಿ ನಾನು ಮೋಸ ಹೋದೆ. 2019ರಲ್ಲಿ ಸರ್ಕಾರ ಹೋಗಿದ್ದು ಡಿ.ಕೆ.ಶಿವಕುಮಾರ್ ಅವರಿಂದಲೇ ಹೊರತು ನನ್ನಿಂದ ಅಲ್ಲ” ಎಂದು ಆರೋಪಿಸಿದ್ದಾರೆ.

“ಮಂಡ್ಯ ಚುನಾವಣೆಯಲ್ಲಿ ನಿಖಿಲ್‌ಗೆ ಮೋಸ ಮಾಡಿದ ಹಾಗೆ, ಇಲ್ಲಿಯೂ (ರಾಮನಗರ) ನಾವು ಮಾಡಿದ್ದರೆ ಆ ವ್ಯಕ್ತಿ (ಡಿ.ಕೆ.ಸುರೇಶ್) ಕಥೆ ಅಂದೇ ಮುಗಿದು ಹೋಗುತ್ತಿತ್ತು. ಆದರೆ, ನಾವು ಮೈತ್ರಿ ಧರ್ಮ ಪಾಲಿಸಿದೆವು. ಅವರು ನಮಗೆ ಕೇಡು ಬಗೆದರು” ಎಂದು ಡಿಕೆ ಸಹೋದರರ ವಿರುದ್ಧ ಕಡಿಕಾರಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X