ಉಡುಪಿ | ಕ್ರೈಸ್ತ ವಿದ್ಯಾರ್ಥಿಗಳು ಸರ್ಕಾರಿ ಸೇವೆಯತ್ತ ಆಸಕ್ತಿ ಹೊಂದಬೇಕು: ಬಿಷಪ್ ಜೆರಾಲ್ಡ್ ಲೋಬೊ

Date:

Advertisements

ವಿದ್ಯಾರ್ಥಿ ಜೀವನದಲ್ಲಿ ಅತೀ ಹೆಚ್ಚಿನ ಪರಿಶ್ರಮ ಪಟ್ಟು ಶಿಕ್ಷಣದಲ್ಲಿ ಸಾಧನೆ ತೋರಿದ್ದಲ್ಲಿ, ಮುಂದಿನ ಜೀವನದಲ್ಲಿ ಉನ್ನತ ಸ್ಥಾನ ಗಳಿಸಬಹುದು ಎಂದು ಉಡುಪಿ ಕ್ರೈಸ್ತ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.

ಉಡುಪಿತ ಅಂಬಾಗಿಲಿನಲ್ಲಿರುವ ಧರ್ಮಪ್ರಾಂತ್ಯದ ಪಾಲನಾ ಕೇಂದ್ರದಲ್ಲಿ  ಕಥೊಲಿಕ್ ಸಭಾ ಉಡುಪಿ ಪ್ರದೇಶ್ ಹಾಗೂ ಮುಂಬೈ ಜಾನ್ ಡಿಸಿಲ್ವಾ ಫೌಂಡೇಶನ್ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಶಿಕ್ಷಣ ಕ್ಷೇತ್ರ ವಿಸ್ತಾರವಾಗಿದ್ದು, ಹೊಸ ಹೊಸ ಪ್ರಯೋಗಗಳಿಗೆ ಇಂದಿನ ವಿದ್ಯಾರ್ಥಿ ಸಮುದಾಯ ಆಸಕ್ತಿ ತೋರಿದಾಗ ಉನ್ನತ ಸ್ಥಾನ ಲಭಿಸಲು ಸಾಧ್ಯವಿದೆ. ಸಮುದಾಯದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಸೇವೆಯತ್ತ ಆಸಕ್ತಿ ತೋರಬೇಕು. ಸಮಾಜದಲ್ಲಿ ಹಲವಾರು ಅವಕಾಶಗಳಿವೆ. ಅವುಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಇಂದಿನ ಮಕ್ಕಳು ಹೆಚ್ಚು ಹೆಚ್ಚು ಎದುರಿಸುವತ್ತ ಗಮನ ಹರಿಸಬೇಕು” ಎಂದರು.

Advertisements

ಭಾರತೀಯ ಅಂಚೆ ಸೇವೆಗಳ ನಿವೃತ್ತ ಸದಸ್ಯ ಡಾ. ಚಾರ್ಲ್ಸ್ ಲೋಬೊ ಮಾತನಾಡಿ, “ಕ್ರೈಸ್ತ ಸಮುದಾಯ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸರ್ಕಾರಿ ಹುದ್ದೆಗಳತ್ತ ಆಸಕ್ತಿ ತೋರಬೇಕು. ಇದಕ್ಕಾಗಿ ಪ್ರಾಥಮಿಕ ಹಂತದಲ್ಲಿಯೇ ಪ್ರಯತ್ನ ಮಾಡಿದಾಗ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಿದೆ” ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಅಲ್ಲದೆ, ಪಿಎಚ್‌ಡಿ ಪದವಿ ಪಡೆದ ಡಾ.ಸಿಂಡ್ರೆಲ್ಲಾ ಗೊನ್ಸಾಲ್ವಿಸ್ ಮತ್ತು ಸಿಎ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿನಲ್ ಜೋಸೇಫ್ ಡಿಕೊಸ್ತಾ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಸಂತೋಷ್ ಕರ್ನೆಲಿಯೋ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಾನ್ ಡಿಸಿಲ್ವಾ ಫೌಂಡೇಶನ್ ಅಧ್ಯಕ್ಷ ಜಾನ್ ಗ್ಲ್ಯಾಡಿಸ್ ಡಿಸಿಲ್ವಾ, ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಆಧ್ಯಾತ್ಮಿಕ ನಿರ್ದೇಶಕ, ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಷಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ನಿಯೋಜಿತ ಅಧ್ಯಕ್ಷರಾದ ರೊನಾಲ್ಡ್ ಆಲ್ಮೇಡಾ, ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್, ಮಾಜಿ ಅಧ್ಯಕ್ಷರಾದ ವಲೇರಿಯನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಂಚಾಲಕರಾದ ಡಾ. ಜೆರಾಲ್ಡ್ ಪಿಂಟೊ ಸ್ವಾಗತಿಸಿ, ಕಾರ್ಯದರ್ಶಿ ಒಲಿವೀಯಾ ಡಿಮೆಲ್ಲೊ ವಂದಿಸಿದರು. ಲೆರಿಸ್ಸಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X