ಕಲಬುರಗಿ | ಕ್ರಿಮಿನಾಶಕ ದೇಹಕ್ಕೆ ಸೇರಿ ಒಂದೇ ಕುಟುಂಬದ ನಾಲ್ವರು ರೈತರು ಅಸ್ವಸ್ಥ

Date:

Advertisements

ಬೆಳೆಗಳ ರಕ್ಷಣೆಗೆ ಕ್ರಿಮಿನಾಶಕ ಔಷಧಿ ಸಿಂಪಡಣೆ ಮಾಡುವಾಗ ರೈತನ ದೇಹಕ್ಕೆ ಸೇರಿದ್ದು, ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟ ಘಟನೆ ಇತ್ತೀಚೆಗಷ್ಟೇ ನಡೆದಿತ್ತು. ಈ ಬೆನ್ನಲ್ಲೇ, ಮತ್ತೆ ನಾಲ್ವರು ರೈತರ ದೇಹಕ್ಕೆ ಕ್ರಿಮಿನಾಶಕ ಸೇರಿ, ಆ ರೈತರು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಆರ್.ಬಿ ನಗರ ತಾಂಡಾದ ಒಂದೇ ಕುಟುಂಬದ ಸುನೀಲ್ ಜಾಧವ್(34), ಅನೀಲ್ ಜಾಧವ್(22), ಕುಮಾರ್(30) ಮತ್ತು ಖೇಮು ರಾಠೋಡ್(32) ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾಲ್ವರು ರೈತರು ಕಳೆದ ಗುರುವಾರ ತಮ್ಮ ಜಮೀನಿನಲ್ಲಿ ಬೆಳದಿದ್ದ ಹತ್ತಿ ಬೆಳೆಗೆ ಕ್ರಿಮಿನಾಶಕ ಸಿಂಪಡಣೆ ಮಾಡಲು ಹೋಗಿದ್ದರು. ಹತ್ತಿ ಎಲೆಗಳಿಗೆ ಬರುವ ಎಲೆ ಚುಕ್ಕಿ ರೋಗ ಸೇರಿದಂತೆ ಇನ್ನಿತರ ಸಮಸ್ಯೆಗಳ ನಿವಾರಣೆಗೆ ಮೋನೋಕ್ರೋಟಾಪಸ್ ಸಿಂಪಡಣೆ ಮಾಡಿದ್ದರು.

Advertisements

ಕ್ರಿಮಿನಾಶಕ ಸಿಂಪಡಣೆ ಮಾಡುವಾಗ ಯಾವುದೇ ಸಮಸ್ಯೆ ಆಗಿರಲಿಲ್ಲ. ಆದರೆ ಮಾರನೇ ದಿನದಿಂದ ಈ ನಾಲ್ವರಿಗೂ ಕೂಡ ವಾಂತಿ ಭೇದಿ, ತಲೆಸುತ್ತು ಆರಂಭವಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಆರೋಗ್ಯ ಸುಧಾರಿಸಿಲ್ಲ. ಹೀಗಾಗಿ, ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೈತರು ಯಾವುದೇ ಸುರಕ್ಷಿತ ಕ್ರಮ ಕೈಗೊಳ್ಳದೇ ಇರುವುದರಿಂದ ಬಾಯಿ ಮತ್ತು ಮೂಗಿನ ಮೂಲಕ ಕೀಟನಾಶಕ ದೇಹಕ್ಕೆ ಸೇರಿದೆ. ನಾಲ್ವರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

“ಕಳೆದ ವಾರದ ಹಿಂದೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತರ್ಕಸಪೇಟ್ ಗ್ರಾಮದ ಅಂಬರೀಶ್(26) ಎಂಬ ಯುವರೈತ ತನ್ನ ಜಮೀನಿನಲ್ಲಿ ಬೆಳೆದಿದ್ದ ಹತ್ತಿ ಬೆಳೆಗೆ ಕ್ರಿಮಿನಾಶಕ ಸಿಂಪಡಣೆ ಮಾಡಿ ಮನೆಗೆ ಬಂದ ಬಳಿಕ ವಾಂತಿಭೇದಿ ಆರಂಭವಾಗಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ರೈತ ಅಂಬರೀಶ್ ಮೃತಪಟ್ಟಿದ್ದರು” ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಮದ್‌ ಪಟೇಲ್‌ ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಾವಿನಕೆರೆ ಸಂರಕ್ಷಣೆಗೆ ಆದೇಶ

“ಮದುವೆಯಾಗಿ ಒಂದು ವರ್ಷ ಮಾತ್ರವಾಗಿತ್ತು. ಆದರೆ, ಹತ್ತಿ ಬೆಳೆ ರಕ್ಷಿಸಿಕೊಳ್ಳಲು ಹೋಗಿ ತನ್ನ ಜೀವವನ್ನೇ ಕಳೆದುಕೊಂಡಿದ್ದರು. ಇದೀಗ ಮತ್ತೆ ನಾಲ್ವರು ರೈತರು ಕ್ರಿಮಿನಾಶಕ ಸಿಂಪಡಣೆ ಮಾಡುವಾಗ ದೇಹಕ್ಕೆ ಸೇರಿ ಅಸ್ವಸ್ಥಗೊಂಡು ಜೀವನ್ಮರಣದೊಂದಿಗೆ ಹೋರಾಟ ನಡೆಸುತ್ತಿದ್ದಾರೆ. ರೈತರು ಕ್ರಿಮಿನಾಶಕ ಸಿಂಪಡಿಸುವ ಸಂದರ್ಭದಲ್ಲಿ ತುಂಬಾ ಎಚ್ಚರಿಕೆ ವಹಿಸಬೇಕು ಮತ್ತು ಮುಂಜಾಗ್ರತಕ್ರಮವಾಗಿ ದೇಹಕ್ಕೆ ಹೋಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಕ್ರಿಮಿನಾಶಕ ದೇಹಕ್ಕೆ ಸೇರಿದರೆ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆಯಬೇಕು. ವಿಳಂಬವಾದರೆ ಸಾವು ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ ರೈತರು ತಮ್ಮ ಬೆಳೆ ರಕ್ಷಣೆಗೆ ಹೋಗಿ ಅಪಾಯ ತಂದುಕೊಳ್ಳಬಾರದು” ಎಂದು ರೈತರಿಗೆ ಸಲಹೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X