ಬೆಂಗಳೂರು | ಇನ್ನುಮುಂದೆ ಗಣೇಶ ಮೆರವಣಿಗೆಗೆ ಅನುಮತಿ ಇಲ್ಲ: ಪೊಲೀಸ್ ಕಮಿಷನರ್

Date:

Advertisements

ರಾಜಧಾನಿ ಬೆಂಗಳೂರಿನಲ್ಲಿ ಈ ವರ್ಷ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ, ಹಲ್ಲೆ, ಕೊಲೆ ಮುಂತಾದ ಘಟನೆಗಳು ನಡೆದಿವೆ. ಈ ಹಿನ್ನೆಲೆ, ಇನ್ನುಮುಂದೆ ಗಣೇಶ ಮೂರ್ತಿ ವಿಸರ್ಜನೆ ಸಮಯದಲ್ಲಿ ಮೆರವಣಿಗೆ, ಡಿಜೆ ಸೌಂಡ್‌ಗೆ ಅನುಮತಿ ನೀಡದಂತೆ ನಗರದ ಎಲ್ಲ ಪೊಲೀಸರಿಗೂ ಪೊಲೀಸ್‌ ಕಮಿಷನರ್ ಬಿ.ದಯಾನಂದ ಅವರು ತಿಳಿಸಿದ್ದಾರೆ.

ಗಣೇಶ ಮೂರ್ತಿ ವಿಸರ್ಜನೆ ವೇಳೆ, ಮೆರವಣಿಗೆ ಹೋಗುತ್ತಿದ್ದಾಗ ಡ್ಯಾನ್ಸ್ ಮಾಡುವ ವಿಚಾರಕ್ಕೆ ಗಲಾಟೆ ನಡೆದು ಶ್ರೀನಿವಾಸ್ ಎಂಬ ಕೊರಿಯರ್ ಬಾಯ್‍ಗೆ ಡ್ರ್ಯಾಗರ್‌ನಿಂದ ಹೊಟ್ಟೆಗೆ ಇರಿದು ಕೊಲೆ ಮಾಡಲಾಗಿತ್ತು. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಹಲಸೂರು, ಯಡಿಯೂರು, ಆಡುಗೋಡಿ ಸೇರಿದಂತೆ ನಗರದ ಹಲವು ಕಡೆಗಳಲ್ಲಿ ಮೆರವಣಿಗೆ ವೇಳೆ ಸಾಲು ಸಾಲು ಗಲಾಟೆಗಳು ನಡೆದಿವೆ. ಹಬ್ಬ ಮುಗಿದು ಹಲವಾರು ದಿನ ಕಳೆದ ಬಳಿಕ ಗಣೇಶ ಮೆರವಣಿಗೆಗೆ ಅನುಮತಿ ನೀಡದಂತೆ ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ.

ಪೊಲೀಸ್‌ ಕಮಿಷನರ್ ಈ ಸೂಚನೆಯ ಬಳಿಕ ಮೆರವಣಿಗೆಗೆ ಅನುಮತಿ ಕೋರಿ ಇದೀಗ 200ಕ್ಕೂ ಹೆಚ್ಚು ಮನವಿ ಪತ್ರಗಳು ಬಂದಿವೆ ಎಂದು ತಿಳಿದುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಭಾರೀ ಮಳೆಗೆ ನಲುಗಿದ ನಗರ; ಸಮಸ್ಯೆ ಪರಿಹರಿಸಲು ಬಿಬಿಎಂಪಿ ವಿಫಲ

ಪೊಲೀಸರ ಮಾಹಿತಿ ಪ್ರಕಾರ ನಗರದಲ್ಲಿ ಇನ್ನು 450 ಗಣಪತಿಗಳನ್ನು ಇಟ್ಟಿದ್ದಾರೆ. ಮೆರವಣಿಗೆ ವೇಳೆ ಗಲಾಟೆ, ಕೊಲೆ ನಡೆದಿರುವ ಹಿನ್ನೆಲೆ, ಪೊಲೀಸ್ ಇಲಾಖೆ ಇನ್ನುಮುಂದೆ ಅನುಮತಿ ಕೊಡದಿರಲು ನಿರ್ಧರಿಸಿದೆ.

ಒಂದು ವೇಳೆ, ನಿಯಮ ಮೀರಿ ಗಲಾಟೆ ಅಥವಾ ಇನ್ನಾವುದೇ ಘಟನೆ ನಡೆದರು ಅದಕ್ಕೆ ಠಾಣಾ ಇನ್ಸ್‌ಪೆಕ್ಟರ್ ಹೊಣೆಯಾಗುತ್ತಾರೆ. ಠಾಣೆಯ ಇನ್ಸ್‌ಪೆಕ್ಟರ್ ಮೇಲೆ ಕ್ರಮ ಜರುಗಿಸುವುದಾಗಿ ಪೊಲೀಸ್‌ ಕಮಿಷನರ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X