ಗಾಝಾ ಮೇಲೆ ಇಸ್ರೇಲ್ ಬಾಂಬ್ ದಾಳಿ: ವರದಿ ಮಾಡುತ್ತಿದ್ದ ಮೂವರು ಪತ್ರಕರ್ತರು ಬಲಿ

Date:

Advertisements

ಹಮಾಸ್ ಇಸ್ರೇಲ್ ಮೇಲೆ ಅನಿರೀಕ್ಷಿತ ರಾಕೆಟ್ ದಾಳಿ ನಡೆಸಿದ ಬಳಿಕ ಯುದ್ಧ ಘೋಷಿಸಿರುವ ಇಸ್ರೇಲ್, ಗಾಝಾ ಪಟ್ಟಿ ಮೇಲೆ ನಿರಂತರವಾಗಿ ಬಾಂಬ್ ಸುರಿಯುತ್ತಿದೆ. ಇದರ ಪರಿಣಾಮ ಗಾಝಾದಲ್ಲಿ ಮೂವರು ಪತ್ರಕರ್ತರು ಬಲಿಯಾಗಿರುವುದಾಗಿ ವರದಿಯಾಗಿದೆ.

ಇಸ್ರೇಲ್ ಗಾಝಾ ಮೇಲೆ ನಿರಂತರವಾಗಿ ಬಾಂಬ್ ಹಾಕುತ್ತಿರುವುದು ನಾಲ್ಕನೇ ದಿನಕ್ಕೆ ಮುಂದುವರಿದಿದೆ. ಈ ಸಂಘರ್ಷದಲ್ಲಿ ಕೊಲ್ಲಲ್ಪಟ್ಟ, ಗಾಯಗೊಂಡ ಅಥವಾ ಕಾಣೆಯಾದ ನಾಗರಿಕರಲ್ಲಿ ಪತ್ರಕರ್ತರೂ ಇದ್ದಾರೆ. ಬಾಂಬ್ ದಾಳಿಗೆ ಸ್ಥಳದಲ್ಲಿ ವರದಿ ಮಾಡುತ್ತಿದ್ದ ಮೂವರು ಪತ್ರಕರ್ತರು ಕೂಡ ಮೃತಪಟ್ಟಿರುವುದಾಗಿ ಅಲ್ ಜಝೀರಾ ವರದಿ ಮಾಡಿದೆ.

ಮೃತಪಟ್ಟವರಲ್ಲಿ ಐನ್ ಮೀಡಿಯಾದ ಛಾಯಾಗ್ರಾಹಕ ಇಬ್ರಾಹಿಂ ಮೊಹಮ್ಮದ್ ಲಾಫಿ, ಸ್ಮಾರ್ಟ್‌ ಮೀಡಿಯಾದ ವರದಿಗಾರ ಮೊಹಮ್ಮದ್ ಜರ್ಘೌನ್ ಹಾಗೂ ಸ್ವತಂತ್ರ ಪತ್ರಕರ್ತ ಮೊಹಮ್ಮದ್ ಎಲ್-ಸಾಲ್ಹಿ ಅವರನ್ನು ಸೆಂಟ್ರಲ್ ಗಾಝಾ ಪಟ್ಟಿಯಲ್ಲಿ ಇಸ್ರೇಲಿ ಸೇನೆಯು ಗುಂಡಿಕ್ಕಿ ಕೊಂದಿದೆ ಎಂದು ವರದಿಯಾಗಿದೆ.

Advertisements

gaza media

ಅಲ್ಲದೇ, ನಿರಂತರ ಬಾಂಬ್ ದಾಳಿಯ ಬಳಿಕ ಕೆಲವು ಪತ್ರಕರ್ತರು ಗಾಯಗೊಂಡಿದ್ದರೆ, ಕೆಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

‘ಪತ್ರಕರ್ತರು, ನಾಗರಿಕರನ್ನು ಗುರಿಯಾಗಿಸಿ ದಾಳಿ ನಡೆಸಬಾರದು ಎಂದು ಎರಡೂ ಕಡೆಯವರಿಗೆ ಕರೆ ನೀಡಿದ್ದೇವೆ. ಬಿಕ್ಕಟ್ಟಿನ ಸಮಯದಲ್ಲಿ ನಿಖರವಾದ ವರದಿಯು ನಿರ್ಣಾಯಕವಾಗಿದೆ. ಗಾಝಾ ಮತ್ತು ಇಸ್ರೇಲ್‌ನ ನಡುವೆ ನಡೆಯುತ್ತಿರುವ ಸಂಘರ್ಷದ ಪರಿಣಾಮವನ್ನು ಜಗತ್ತಿಗೆ ತೋರಿಸುವುದರಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಾಗಾಗಿ, ಈ ಬಗ್ಗೆ ಎಚ್ಚರ ವಹಿಸಬೇಕು’ ಎಂದು ಸಿಪಿಜೆಯ ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾ ಕಾರ್ಯಕ್ರಮ ಸಂಯೋಜಕ ಶೆರಿಫ್ ಮನ್ಸೂರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X