ಏಕದಿನ ವಿಶ್ವಕಪ್ 2023 | ಭಾರತ – ಪಾಕ್ ಪಂದ್ಯಕ್ಕೂ ಶುಭಮನ್‌ ಗಿಲ್ ಅಲಭ್ಯ ಸಾಧ್ಯತೆ

Date:

Advertisements

ಡೆಂಗ್ಯೂವಿನಿಂದ ಬಳಲುತ್ತಿದ್ದ ಭಾರತದ ಆರಂಭಿಕ ಆಟಗಾರ ಶುಭಮನ್‌ ಗಿಲ್ ಚೆನ್ನೈನ ಆಸ್ಪತ್ರೆಯಿಂದ ಇಂದು(ಅಕ್ಟೋಬರ್ 10) ಬಿಡುಗಡೆಯಾಗಿದ್ದಾರೆ. ಹೆಚ್ಚಿನ ವಿಶ್ರಾಂತಿ ಅಗತ್ಯವಿರುವ ಕಾರಣ ಅಕ್ಟೋಬರ್‌ 11ರ ಅಫ್ಘಾನಿಸ್ತಾನ ಪಂದ್ಯದ ಜೊತೆಗೆ ಅಕ್ಟೋಬರ್ 14ರಂದು ನಡೆಯುವ ಪಾಕಿಸ್ತಾನ ಪದ್ಯಕ್ಕೂ ಅಲಭ್ಯರಾಗುವ ಸಾಧ್ಯತೆಯಿದೆ.

ಮಂಗಳವಾರ ಬೆಳಗ್ಗೆ ಚೆನ್ನೈನ ಆಸ್ಪತ್ರೆಯಿಂದ ಶುಭಮನ್‌ ಗಿಲ್ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದೆ.

ಯುವ ಬ್ಯಾಟರ್ ಆಸ್ಪತ್ರೆಯಿಂದ ತಂಡದ ಹೋಟೆಲ್‌ಗೆ ಮರಳಿದರು. ಶುಭಮನ್ ಗಿಲ್‌ ಅವರ ರಕ್ತದಲ್ಲಿ ಪ್ಲೇಟ್‌ಲೆಟ್ಸ್‌ ತೀರಾ ಕುಸಿದಿದೆ. ಅಲ್ಲಿ ಅವರನ್ನು ಬಿಸಿಸಿಐ ವೈದ್ಯಕೀಯ ತಂಡವು ಮೇಲ್ವಿಚಾರಣೆ ಮಾಡುತ್ತದೆ.

Advertisements

ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಭಾರತದ ಆರಂಭಿಕ ಪಂದ್ಯವನ್ನು ಶುಭಮನ್ ಗಿಲ್ ತಪ್ಪಿಸಿಕೊಂಡಿದ್ದರು. ಈಗ ಮತ್ತೆರಡು ಪಂದ್ಯಗಳಿಗೂ ಗಿಲ್ ಅವರು ಆಡುತ್ತಿಲ್ಲದಿರುವುದು ಟೀಂ ಇಂಡಿಯಾ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಸ್ಟಾರ್ ಆಟಗಾರ ಶುಭಮನ್ ಗಿಲ್‌ಗೆ ಡೆಂಗ್ಯೂ; ಆಸಿಸ್ ವಿರುದ್ಧ ಅಶ್ವಿನ್ ಕಣಕ್ಕೆ!

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ (ಅಕ್ಟೋಬರ್ 9) ಬಿಡುಗಡೆ ಮಾಡಿದ್ದ ಅಧಿಕೃತ ಹೇಳಿಕೆಯಲ್ಲಿ ಶುಭಮನ್ ಗಿಲ್‌ ನವದೆಹಲಿಗೆ ಪ್ರಯಾಣ ಬೆಳೆಸುವುದಿಲ್ಲ ಎಂಬುದನ್ನು ಖಾತ್ರಿಯಾಗಿತ್ತು. ಜೊತೆಗೆ ವೈದ್ಯಕೀಯ ತಂಡ ಗಿಲ್ ಜೊತೆಗೆ ಇರುವುದಾಗಿ ಬಿಸಿಸಿಐ ತಿಳಿಸಿತ್ತು.

2023ರಲ್ಲಿ ಏಕದಿನ ಕ್ರಿಕೆಟ್‌ ಒಂದರಲ್ಲೇ 1200ಕ್ಕೂ ಹೆಚ್ಚು ರನ್‌ ಬಾರಿಸಿರುವ ಶುಭಮನ್ ಗಿಲ್‌ ಶ್ರೇಷ್ಠ ಲಯದಲ್ಲಿದ್ದರು.

ಹೀಗಾಗಿ ಅವರ ಅಲಭ್ಯತೆ ಟೀಮ್ ಇಂಡಿಯಾಗೆ ಬಹುದೊಡ್ಡ ಹಿನ್ನಡೆಯಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಗಿಲ್‌ ಸ್ಥಾನದಲ್ಲಿ ಇನಿಂಗ್ಸ್‌ ಆರಂಭಿಸಿದ್ದ ಎಡಗೈ ಬ್ಯಾಟರ್‌ ಇಶಾನ್‌ ಕಿಶನ್‌ ಮೊದಲ ಓವರ್‌ನಲ್ಲೇ ಡಕ್‌ಔಟ್‌ ಆಗಿದ್ದರು.

ಗಿಲ್ ಅನುಪಸ್ಥಿತಿಯಲ್ಲಿ, ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನ ವಿರುದ್ಧದ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಅವರೊಂದಿಗೆ ಇಶಾನ್ ಕಿಶನ್ ಮತ್ತೊಮ್ಮೆ ಇನ್ನಿಂಗ್ಸ್ ಆರಂಭಿಸುವ ನಿರೀಕ್ಷೆಯಿದೆ.

ಚೆನ್ನೈನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಇಬ್ಬರೂ ಆರಂಭಿಕರು ವಿಫಲರಾದ ನಂತರ 200 ರನ್‌ಗಳ ಬೆನ್ನಟ್ಟಿದ ವಿರಾಟ್ ಕೊಹ್ಲಿ ಮತ್ತು ಕೆ ಎಲ್ ರಾಹುಲ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ಈ ಸುದ್ದಿ ಓದಿದ್ದೀರಾ? ವಿಶ್ವಕಪ್ | ಆಘಾತ ಕಂಡಿದ್ದ ತಂಡಕ್ಕೆ ಕೊಹ್ಲಿ-ರಾಹುಲ್ ಜೋಡಿಯಿಂದ ಜಯ: ಟೀಮ್ ಇಂಡಿಯಾ ಶುಭಾರಂಭ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X