ಗದಗ | ಸಂವಿಧಾನ ನಮ್ಮ ಬದುಕು, ಹಕ್ಕು, ಬಲ ನೀಡುವ ಮಹಾನ ಶಕ್ತಿ: ಸಚಿವ ಎಚ್.ಕೆ ಪಾಟೀಲ

Date:

Advertisements

ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠವಾದದ್ದು. ರಾಷ್ಟ್ರದ ಬದುಕು ಹೇಗಿರಬೇಕು, ಜನಸೇವೆ, ನಮ್ಮ ಹಕ್ಕುಗಳ ಕುರಿತು ನಮ್ಮ ಸಂವಿಧಾನದ ಪೀಠಿಕೆ ಹೇಳುತ್ತದೆ. ಅದನ್ನು ಅರಿತುಕೊಂಡು ಸಂವಿಧಾನದ ಸದಾಶಯಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳ ಸಚಿವ ಡಾ.ಎಚ್.ಕೆ ಪಾಟೀಲ ಹೇಳಿದರು.

ಗದಗ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ಸಂವಿಧಾನದ ಪೀಠಿಕೆ ಮತ್ತು ಕಾರ್ಯಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಸಂವಿಧಾನವು ಕಥೆ ಪುಸ್ತಕವಲ್ಲ. ಅದು ನಮ್ಮ ಬದುಕು, ನಮ್ಮ ಹಕ್ಕುಗಳನ್ನು ತಿಳಿಸುವ, ಬಲನೀಡುವ ಮಹಾನ್ ಶಕ್ತಿಯಾಗಿದೆ” ಎಂದರು.

“ಸಾಮಾಜಿಕ ನ್ಯಾಯದ ಜೊತೆಗೆ ಪ್ರತಿಯೊಬ್ಬರಿಗೂ ತಮ್ಮದೇ ಆದ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. 12ನೇ ಶತಮಾನದಲ್ಲಿ ಬಸವಣ್ಣನವರು ಸ್ತ್ರೀ ಸ್ವಾತಂತ್ರ್ಯ ಕುರಿತು ತಿಳಿಸಿದ್ದರು. ಆದರೂ ಮನೆಯ ಹೆಣ್ಣುಮಕ್ಕಳನ್ನು ಮನೆಯಿಂದ ಆಚೆ ಕಳುಹಿಸುತ್ತಿರಲಿಲ್ಲ. ಸಂವಿಧಾನದಲ್ಲಿ ತಿದ್ದುಪಡಿ ತರುವ ಮೂಲಕ ಮೀಸಲಾತಿಯನ್ನು ಜಾರಿಗೊಳಿಸಿ ಮಹಿಳೆಯರ ಕೈಗೆ ಅಧಿಕಾರ ನೀಡಲಾಗಿದೆ” ಎಂದು ತಿಳಿಸಿದರು.

Advertisements

“ಸಂವಿಧಾನ ಶ್ರೇಷ್ಠ ಹಾಗೂ ಶಕ್ತಿಯುತವಾಗಿದೆ. ಜಾತಿ ವ್ಯವಸ್ಥೆಯಿಂದ ಗಲೀಜು ಆಗಿರುವ ಸಮಾಜವನ್ನು ತಿದ್ದುವ ಕಾರ್ಯ ಆಗಬೇಕಾಗಿದೆ. ಸಮಾಜದಲ್ಲಿ ಇನ್ನೂ ಕೂಡ ಅಸ್ಪಶ್ಯತೆ ಜೀವಂತವಾಗಿದ್ದು ಇದನ್ನು ತೊಡೆದು ಹಾಕುವ ಕಾರ್ಯವಾಗಬೇಕಾಗಿದೆ. ಸಮಾಜದಲ್ಲಿ ಸಮಾನತೆ ಬರಲು ಮನಸ್ಸುಗಳು ಕೂಡಬೇಕು. ಈ ಕುರಿತು ಸಂವಿಧಾನದಲ್ಲಿ ಸ್ಪಷ್ಟಪಡಿಸಲಾಗಿದೆ. ಅಸ್ಪೃಶ್ಯತೆ ನಿವಾರಣೆಗಾಗಿ ಪಂಚಾಯತಿಗಳಿಗೆ ಹೆಚ್ಚಿನ ಜವಾಬ್ದಾರಿಗಳನ್ನು ನೀಡಲಾಗಿದೆ” ಎಂದರು.

“ಸಂವಿಧಾನದ ತಿಳುವಳಿಕೆ ಕೊರತೆಯಿಂದಾಗಿ ಸಮಾಜದಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಪ್ರತಿಯೊಬ್ಬರು ಸಂವಿಧಾನದ ಕುರಿತು ಅರಿತುಕೊಳ್ಳುವುದು ಮುಖ್ಯವಾಗಿದೆ. ಸಂವಿಧಾನದಲ್ಲಿ ನೀಡಿರುವ ಹಕ್ಕನ್ನು ಪ್ರತಿಯೊಬ್ಬರು ಪಡೆದುಕೊಳ್ಳುತ್ತಾರೆಯೇ ಹೊರತು ಸಂವಿಧಾನದಲ್ಲಿ ತಿಳಿಸಿರುವ ಕರ್ತವ್ಯಗಳನ್ನು ಪಾಲಿಸಲಾಗುತ್ತಿಲ್ಲ. ಈ ಕುರಿತು ಪ್ರತಿಯೊಬ್ಬರು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ” ಎಂದರು.

ರೋಣ ಶಾಸಕ ಜಿ.ಎಸ್ ಪಾಟೀಲ ಮಾತನಾಡಿ, “ದೇಶಕ್ಕೆ ಸ್ವಾತಂತ್ರ್ಯ ದೊರೆತು ಎಪ್ಪತ್ತೈದು ವರ್ಷಗಳು ಗತಿಸಿದ್ದರೂ ಕೂಡ ದೇಶದಲ್ಲಿ ಅಷ್ಟೊಂದು ಸಾಧನೆ ಆಗಿಲ್ಲ. ದೇಶದ ಏಕತೆಯನ್ನು ಸಂವಿಧಾನ ಕರೆದೊಯ್ಯುತ್ತಿದೆ. ಸಮಾಜ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ಅತೀ ಪ್ರಮುಖವಾಗಿದ್ದು, ಗಾಂಧೀಜಿ ಅವರ ಗ್ರಾಮ ಸ್ವರಾಜದ ಕನಸನ್ನು ನನಸಾಗಿಸಲು ಪ್ರತಿಯೊಬ್ಬರು ಸಂವಿಧಾನವನ್ನು ಅರಿತು ಅದರಂತೆ ನಡೆದುಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ?: ಪ್ರಧಾನಿ ಮೋದಿ ಹೇಳಿದರೂ ಈ ಸಿನಿಮಾವನ್ನು ನೋಡುವವರೇ ಇಲ್ಲ!

ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, “ನ್ಯಾಯಾಂಗ, ಕಾರ್ಯಾಂಗ ಹಾಗೂ ಶಾಸಕಾಂಗವು ಸಂವಿಧಾನದ ಅಡಿಯಲ್ಲಿಯೇ ಕಾರ್ಯನಿರ್ವಹಿಸುತ್ತವೆ. ನಮ್ಮ ದೇಶದ ಪವಿತ್ರ ಸಂವಿಧಾನವನ್ನು ಅರಿತು ಸಧೃಢ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬರು ಮುಂದಾಗಬೇಕು. ಸಂವಿಧಾನದಲ್ಲಿನ ತಿದ್ದುಪಡಿಯ ಮೂಲಕ ಮಹಿಳೆಯರು ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದ್ದು ಸಂವಿಧಾನ ನೀಡಿದ ಹಕ್ಕು ಹಾಗೂ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವದರ ಮೂಲಕ ಸುಂದರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು” ಎಂದರು.

ಕಾರ್ಯಕ್ರಮದಲ್ಲಿ ಕೇರಳದ ಲೋಕಲ್ ಸೆಲ್ಫ ಗವರ್ನಮೆಂಟ್ ಜಂಟಿ ನಿರ್ದೇಶಕ ಸುದೇಶನ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಮಾಜಿ ಶಾಸಕ ಡಿ.ಆರ್.ಪಾಟೀಲ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ವಾಸಣ್ಣ ಕುರಡಗಿ, ಚುನಾಯಿತ ಜನಪತ್ರಿನಿಧಿಗಳು, ಮಹಿಳಾ ಚುನಾಯಿತ ಜನಪತ್ರಿನಿಧಿಗಳು, ಗಣ್ಯರು, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X