ಜಾತಿ ದೌರ್ಜನ್ಯ | ದೇವಸ್ಥಾನದ ಬಳಿ ನೀರು ತುಂಬಲು ಹೋದ ದಲಿತ ಬಾಲಕಿ; ಪೂಜಾರಿಯಿಂದ ನಿಂದನೆ

Date:

Advertisements

ದೇವಸ್ಥಾನದ ಬಳಿಯಿದ್ದ ನಲ್ಲಿಯಲ್ಲಿ ನೀರು ತುಂಬಲು ಹೋಗಿದ್ದ ದಲಿತ ಬಾಲಕಿಗೆ ಆಕೆಯ ಜಾತಿ ಹೆಸರಿಡಿದು ಪೂಜಾರಿ ಮತ್ತು ಆತನ ಸಹೋದರಿ ನಿಂದಿಸಿರುವ ಘಟನೆ ರಾಮನಗರ ಜಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಚನ್ನಮಾನಹಳ್ಳಿಯಲ್ಲಿ ಜಾತಿ ದೌರ್ಜನ್ಯದ ಘಟನೆ ನಡೆದಿದೆ. 13 ವರ್ಷದ ಬಾಲಕಿಯನ್ನು ಪೂಜಾರಿ ಜಾತಿ ಹೆಸರಿನಲ್ಲಿ ನಿಂದಿಸಿದ್ದಾನೆ.

ಬಾಲಕಿ ತನ್ನ ಮನೆಯ ಸಮೀಪವೇ ಇದ್ದ ಮಾರಮ್ಮ ದೇವಸ್ಥಾನದ ಬಳಿಯ ನಲ್ಲಿಯಲ್ಲಿ ನೀರು ತುಂಬಿಸಲು ಬಿಂದಿಗೆ ತೆಗೆದುಕೊಂಡು ಹೋಗಿದ್ದಾಳೆ. ಈ ವೇಳೆ, ಪೂಜಾರಿ ಕುಮಾರ್ ಮತ್ತು ಆತನ ಸಹೋದರಿ ಯಶೋಧಾ – ಇಬ್ಬರೂ ಸೇರಿ ಬಾಲಕಿಗೆ ನಿಂದಿಸಿದ್ದಾರೆ.

Advertisements

ಅದನ್ನು ಪ್ರಶ್ನಿಸಿದ ಬಾಲಕಿಯ ಚಿಕ್ಕಪ್ಪ ಪ್ರಸನ್ನಕುಮಾರ್ ಮತ್ತು ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಪ್ರಸನ್ನ ಕುಮಾರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಪೂಜಾರಿ ಮತ್ತು ಆತನ ಸಹೋದರಿ ನನ್ನ ಕೆನ್ನೆಗೆ ಹೊಡೆದು, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ” ಎಂದು ಪ್ರಸನ್ನ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅವರ ದೂರನ್ನು ಆಧರಿಸಿ ಐಜೂರು ಪೊಲೀಸರು ಪೂಜಾರಿ ಮತ್ತು ಆತನ ಸಹೋದರಿ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಸ್‌ಸಿ ಮತ್ತು ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ 323, 324, 504, 506 ಹಾಗೂ 34ರ ಅಡಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X