ಬೆಳಗಾವಿ | ಬಿಲ್‌ ಮಂಜೂರು ಮಾಡಿಲ್ಲವೆಂದು ವಿಷ ಕುಡಿದ ಗುತ್ತಿಗೆದಾರ

Date:

Advertisements

ಕೆಲಸದ ಆದೇಶ ಪಡೆದು ಕಾಮಗಾರಿ ಮುಗಿಸಿದರೂ ಗುತ್ತಿಗೆ ಹಣ ಪಾವತಿಯಾಗಿಲ್ಲ. ಒಂದು ವರ್ಷದಿಂದ ಮನೆಗೂ ಕಚೇರಿಗೂ ಅಲೆದಾಡಿ ಬೇಸತ್ತಿವೆಂದು ಗುತ್ತಿಗೆದಾರರೊಬ್ಬರು ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಗುತ್ತಿಗೆದಾರ ನಾಗಪ್ಪ ಬಂಗಿ ಎಂಬವರು ಬೆಳಗಾವಿಯ ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ಎಕ್ಸಿಕೆಟಿವ್ ಎಂಜಿನಿಯರ್‌ ಎದುರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

2022ರಲ್ಲಿ ಹಲಗಾ ಗ್ರಾಮ ಮತ್ತು ತಿಗಡಿ ಗ್ರಾಮದ ನಡುವೆ ರಸ್ತೆ ನಿರ್ಮಾಣ ಕಾಮಗಾರಿಯ ಗುತ್ತಿಗೆಯನ್ನು ನಾಗಪ್ಪ ಪಡೆದುಕೊಂಡಿದ್ದರು. ಕಾಮಗಾರಿ ಮುಗಿದ್ದಿದ್ದರೂ ಗುತ್ತಿಗೆಯ ಹಣ ಮಂಜೂರು ಮಾಡಿರಲಿಲ್ಲ. ಹೀಗಾಗಿ, ವಿಷದ ಬಾಟಲಿಯೊಂದಿಗೆ ಲೋಕೋಪಯೋಗಿ ಇಲಾಖೆಯ ಕಚೇರಿಗೆ ನಾಗಪ್ಪ ಬಂದಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಒತ್ತಾಯಿಸಿ ಕುಟುಂಬಸ್ಥರೊಂದಿಗೆ ಧರಣಿ ಕುಳಿತಿದ್ದರು. ಆದರೆ, ಅಧಿಕಾರಿಗಳು ಸರಿಯಾಗಿ ಸ್ಪಂದಿಸದ ಕಾರಣ ವಿಷ ಕುಡಿದಿದ್ದಾರೆ ಎಂದು ತಿಳಿದುಬಂದಿದೆ.

Advertisements

ಈ ಹಿಂದೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಲ್ ಮಂಜೂರಾಗದ ಕಾರಣದಿಂದಾಗಿ ಗುತ್ತಿಗೆದಾರ ಸಂತೋಷ ಪಾಟೀಲ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದರು. ಹೀಗಾಗಿ, ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ, ಗುತ್ತಿಗೆದಾರರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಸರ್ಕಾರವು ಪ್ರತಿ ಕಾಮಗಾರಿಯಲ್ಲೂ 40% ಕಮಿಷನ್ ಪಡೆಯುತ್ತಿದೆ ಎಂದು ಆರೋಪಿಸಿದ್ದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, 91529 87821, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X