ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಪಟಾಕಿ ಜಪ್ತಿ

Date:

Advertisements

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿ 14 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಘಟನೆ ಬಳಿಕ ಎಚ್ಚೆತ್ತ ಅಧಿಕಾರಿಗಳು ದೇವನಹಳ್ಳಿ, ಚಿಕ್ಕಮಗಳೂರು ಸೇರಿದಂತೆ ಕೆಲ ಕಡೆ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಪಟಾಕಿಯನ್ನು ಬುಧವಾರ ಜಪ್ತಿ ಮಾಡಿದ್ದಾರೆ.

ಅಗ್ನಿ ದುರಂತದ ಬಳಿಕ ಮುಖ್ಯಮಂತ್ರಿ ಅವರು ಸಭೆ ನಡೆಸಿ ಅಧಿಕಾರಿಗಳು ಪಟಾಕಿ ಮಳಿಗೆಗಳ ಮೇಲೆ ಕಣ್ಣಿಡಲು ಸೂಚನೆ ನೀಡಿದ್ದರು. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಲ್ಲಿ ಅಧಿಕಾರಿಗಳು ಪಟಾಕಿ ಮಳಿಗೆಗಳ ಮೇಲೆ ದಾಳಿ ಮಾಡಿದ್ದಾರೆ.

ದೇವನಹಳ್ಳಿ ತಹಶೀಲ್ದಾರ್, ವಿಜಯಪುರ ಪೊಲೀಸರು ಕಾರ್ಯಾಚರಣೆ ನಡೆಸಿ ದೇವನಹಳ್ಳಿ ಪಟ್ಟಣ, ಚನ್ನರಾಯಪಟ್ಟಣ ಮತ್ತು ವಿಜಯಪುರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಪಟಾಕಿ ಜಪ್ತಿ ಮಾಡಿದ್ದಾರೆ.

Advertisements

ವಿಜಯಪುರದಲ್ಲಿ ಎಂಟಿಆರ್ ರಮೇಶ್ ಎಂಬುವವನಿಗೆ ಸೇರಿದ ಪಟಾಕಿ ಗೋದಾಮಿನಮೇಲೆ ತಹಶಿಲ್ದಾರ್ ಶಿವರಾಜ್, ಇನ್ಸ್ಪೆಕ್ಟರ್​​ ಪ್ರಶಾಂತ್ ನೇತೃತ್ವದ ತಂಡ ದಾಳಿ ನಡೆಸಿ ದೀಪಾವಳಿ ಹಬ್ಬಕ್ಕೆ ಮಾರಾಟ ಮಾಡಲು ಅಕ್ರಮವಾಗಿ ಗೋದಾಮಿನಲ್ಲಿ ದಾಸ್ತಾನು ಮಾಡಲಾಗಿದ್ದ ಸುಮಾರು ₹25 ಲಕ್ಷ ಮೌಲ್ಯದ ಪಟಾಕಿ ವಶಕ್ಕೆ ಪಡೆಯಲಾಗಿದೆ. ಪೊಲೀಸರು ದಾಳಿ ಮಾಡುತ್ತಿದ್ದಂತೆ ಗೋದಾಮಿನ​​ ಮಾಲೀಕ ಪರಾರಿಯಾಗಿದ್ದಾನೆ.

ಚಿಕ್ಕಮಗಳೂರು ನಗರದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಟಾಕಿಗಳನ್ನು ಜಪ್ತಿ ಮಾಡಿದ್ದಾರೆ. ಚಿಕ್ಕಮಗಳೂರು ನಗರ, ಬಸವನಹಳ್ಳಿ ಠಾಣೆಯ ಪೊಲೀಸರು ದಾಳಿ ನಡೆಸಿ ಪರವಾನಗಿ ಪಡೆಯದೆ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ₹7 ಲಕ್ಷದ 60 ಸಾವಿರ ಮೌಲ್ಯದ ಪಟಾಕಿ ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮ್ಟೆ ಸೂಚನೆ ಮೇರೆಗೆ ಶರೀಫ್ ಗಲ್ಲಿ, ಬಿ.ಎಮ್ ರಸ್ತೆ, ಹಾಲೆನಹಳ್ಳಿ ಬಳಿ ಇರುವ ಗೋದಾಮಗಳ ಮೇಲೆ ದಾಳಿ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 18 ಮಾದರಿಯಲ್ಲಿ ​​​ಸೈಬರ್​​ ಕ್ರೈಂ; ಬರೋಬ್ಬರಿ ₹470 ಕೋಟಿ ವಂಚನೆ

ರಾಜಕೀಯ ಕಾರ್ಯಕ್ರಮ, ಮೆರವಣಿಗೆ, ಮದುವೆ, ಗಣೇಶ ಹಬ್ಬ, ಸೇರಿದಂತೆ ಇತರೆ ಕಾರ್ಯಕ್ರಮಗಳಲ್ಲಿ ಯಾವುದೇ ರೀತಿಯ ಪಟಾಕಿ ಬಳಕೆಮಾಡದಂತೆ ಸರ್ಕಾರ ಆದೇಶ ಹೊರಡಿಸಿದೆ. ದೀಪಾವಳಿ ಹಬ್ಬದಂದು ಕೇವಲ ಹಸಿರು ಪಟಾಕಿಯನ್ನಷ್ಟೇ ಸಿಡಿಸಿ ಹಬ್ಬ ಆಚರಿಸಲು ಸರ್ಕಾರ ಸಲಹೆ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X