ಎನ್‌ಇಪಿ ಬದಲಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿದ ಸರ್ಕಾರ

Date:

Advertisements

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ‘ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ಧಿಕ್ಕರಿಸಿದ್ದ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರವು, ‘ರಾಜ್ಯ ಶಿಕ್ಷಣ ನೀತಿ’ ರೂಪಿಸಲು ಸಮಿತಿ ರಚಿಸಿ ಅ.11ರಂದು ಆದೇಶ ಹೊರಡಿಸಿದೆ.

ಶಿಕ್ಷಣ ತಜ್ಞ ಹಾಗೂ ಯುಜಿಸಿಯ ಮಾಜಿ ಅಧ್ಯಕ್ಷ ಪ್ರೊ.ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ 15 ಮಂದಿಯನ್ನೊಳಗೊಂಡ ಸಮಿತಿಯನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಎಂಟು ಮಂದಿ ವಿಷಯ ತಜ್ಞರ ಹೆಸರನ್ನೂ ಕೂಡ ಸರ್ಕಾರ ಪ್ರಕಟಿಸಿದೆ.

ಈಗ ನೇಮಿಸಿರುವ ಸಮಿತಿಯು 2024ರ ಫೆಬ್ರವರಿ 28ರೊಳಗೆ ರಾಜ್ಯ ಸರ್ಕಾರಕ್ಕೆ ವರದಿಯನ್ನು ಒಪ್ಪಿಸುವಂತೆ ನಿರ್ದೇಶನ ನೀಡಿದೆ.

Advertisements

doc

15 ಮಂದಿಯ ಸದಸ್ಯರ ಪಟ್ಟಿ ಹೀಗಿದೆ.

  1. ಪ್ರೊ.ಸಂಜಯ್ ಕೌಲ್(ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಮಾಜಿ ಕಾರ್ಯದರ್ಶಿ, ಕೇಂದ್ರ ಶಾಲಾ ಶಿಕ್ಷಣ)
  2. ಪ್ರೊಫೆಸರ್ ಎಸ್ ಜಾಫೆಟ್(ನಿವೃತ್ತ ಉಪಕುಲಪತಿ, ಬೆಂಗಳೂರು ನಗರ ವಿಶ್ವವಿದ್ಯಾನಿಲಯ)
  3. ಪ್ರೊಫೆಸರ್ ಜೋಗನ್ ಶಂಕರ್(ನಿವೃತ್ತ ಉಪಕುಲಪತಿ, ಕುವೆಂಪು ವಿಶ್ವವಿದ್ಯಾನಿಲಯ)
  4. ಡಾ. ಸುಧೀರ್ ಕೃಷ್ಣಸ್ವಾಮಿ(ಉಪಕುಲಪತಿ, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ, ಬೆಂಗಳೂರು)
  5. ಪ್ರೊಫೆಸರ್ ರಾಜೇಂದ್ರ ಚನ್ನಿ(ನಿವೃತ್ತ ಪ್ರಾಧ್ಯಾಪಕರು, ಕುವೆಂಪು ವಿಶ್ವವಿದ್ಯಾನಿಲಯ))
  6. ಡಾ. ನಟರಾಜ್ ಬೂದಾಳು(ನಿವೃತ್ತ ಪ್ರಾಧ್ಯಾಪಕರು)
  7. ಪ್ರೊಫೆಸರ್ ಸುಧಾಂಶು ಭೂಷಣ್(ವಿಭಾಗ ಮುಖ್ಯಸ್ಥರು, ರಾಷ್ಟ್ರೀಯ ವೃತ್ತಿಪರ ಶಿಕ್ಷಣ, ಯೋಜನೆ ಮತ್ತು ಆಡಳಿತ (NIEPA), ನವದೆಹಲಿ)
  8. ಪ್ರೊಫೆಸರ್ ಪ್ರಣತಿ ಪಾಂಡಾ(ವಿಭಾಗ ಮುಖ್ಯಸ್ಥರು, ರಾಷ್ಟ್ರೀಯ ಔಪಚಾರಿಕವಲ್ಲದ ಶಿಕ್ಷಣ, ಯೋಜನೆ ಮತ್ತು ಆಡಳಿತ (NIEPA), ನವದೆಹಲಿ)
  9. ಡಾ. ಡಾ. ಫುರ್ಕಾನ್ ಕಮರ್(ಪ್ರಾಧ್ಯಾಪಕರು, ಜಾಮಿಯಾ ಮಿಲ್ಲೀಯಾ ವಿಶ್ವವಿದ್ಯಾನಿಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್, ನವದೆಹಲಿ)
  10. ಡಾ. ಶರತ್ ಅನಂತಮೂರ್ತಿ(ಪ್ರಾಧ್ಯಾಪಕರು, ಸ್ಕೂಲ್ ಆಫ್ ಫಿಸಿಕ್ಸ್, ಹೈದರಾಬಾದ್ ವಿಶ್ವವಿದ್ಯಾಲಯ)
  11. ಪ್ರೊಫೆಸರ್ ಎ ನಾರಾಯಣ(ಪ್ರಾಧ್ಯಾಪಕರು, ಅಝೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯ, ಬೆಂಗಳೂರು)
  12. ಡಾ. .ವಿ.ಪಿ. ನಿರಂಜನಾರಾಧ್ಯ(ಶಿಕ್ಷಣ ತಜ್ಞ ಹಾಗೂ ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿವಿಯ(ಎನ್‌ಎಲ್‌ಎಸ್‌ಐಯು) ಸಾರ್ವತ್ರೀಕರಣ ಶಿಕ್ಷಣ ವಿಭಾಗದ ಮುಖ್ಯಸ್ಥರು, ಬೆಂಗಳೂರು)
  13. ಡಾ.ಎಂ.ಎಸ್.ತಳವಾರ(ನಿವೃತ್ತ ಪ್ರಾಧ್ಯಾಪಕರು)
  14. ಡಾ.ಸಂತೋಷ್ ನಾಯ್ಕ್.ಆರ್.(ಪ್ರಾಧ್ಯಾಪಕರು, ಸಮಾಜಶಾಸ್ತ್ರ ವಿಭಾಗ, ಕರ್ನಾಟಕ ಮುಕ್ತ ವಿವಿ)
  15. ಡಾ.ವಿನಯ ಒಕ್ಕುಂದ(ಸಹ ಪ್ರಾಧ್ಯಾಪಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾಂಡೇಲಿ, ಉ.ಕನ್ನಡ)

ಇವರುಗಳಲ್ಲದೇ, ಎಂಟು ಮಂದಿ ವಿಷಯ ತಜ್ಞರ ಹೆಸರನ್ನೂ ಕೂಡ ಸರ್ಕಾರ ಆದೇಶದಲ್ಲಿ ಉಲ್ಲೇಖಿಸಿದ್ದು, ಸಮಿತಿಯು ಅವರನ್ನು ಸಂದರ್ಭಕ್ಕೆ ತಕ್ಕಂತೆ ಅವರ ಸಲಹೆಗಳನ್ನು ಬಳಸಿಕೊಳ್ಳಲು ಸೂಚನೆ ನೀಡಿದೆ.

ಎಂಟು ಮಂದಿ ವಿಷಯ ತಜ್ಞರು

  1. ಯೋಗೇಂದ್ರ ಯಾದವ್
  2. ಪ್ರೊಫೆಸರ್ ರಹಮತ್ ತರೀಕೆರೆ
  3. ಜಾನಕಿ ನಾಯರ್
  4. ಡಾ.ಎಸ್.ಚಂದ್ರಶೇಖರ ಶೆಟ್ಟಿ
  5. ಸೋನಮ್ ವಾಂಗ್ಚುಕ್
  6. ಪ್ರೊಫೆಸರ್ ವಲೇರಿಯನ್ ರೋಡ್ರಿಗಸ್
  7. ಪ್ರೊಫೆಸರ್ ಸಬೀಹಾ ಭೂಮಿಗೌಡ
  8. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪದನಿಮಿತ್ತ ನಿರ್ದೇಶಕರು(ಹಾಲಿ ಈ ಸ್ಥಾನದಲ್ಲಿ ನಿವೃತ್ತ ಪ್ರೊಫೆಸರ್ ಚಂದ್ರ ಪೂಜಾರಿ ಇದ್ದಾರೆ)

ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ. ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

02 1 01 2

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X