ಗದಗ | ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ

Date:

Advertisements

ಹಿರಿಯರನ್ನು ಗೌರವಯುತವಾಗಿ ಕಾಣಬೇಕು. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಅವರಿಗೆ ದೊರಕಿಸುವಂತೆ ಸ್ನೇಹ ಸಂಜೀವಿನಿ ವಿವಿಧೋದ್ದೇಶಗಳು ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆ ಮಾಡಬೇಕು. ಜತೆಗೆ ನಾವೆಲ್ಲರೂ ಸೇರಿ ಅವರ ರಕ್ಷಣೆ ಮಾಡಬೇಕು ಎಂದು ವಿಕಲಚೇತನರ ಮತ್ತು ಹಿರಿಯ ನಾಗರಿಕ ಕಲ್ಯಾಣ ಅಧಿಕಾರಿ ಮಹಾಂತೇಶ್ ಕುರಿ ಸಲಹೆ ನೀಡಿದರು.

ಗದಗ ಜಿಲ್ಲೆ ನರಗುಂದ ನಗರದ ಸ್ನೇಹ ಸಂಜೀವಿನಿ ವಿವಿಧೋದ್ದೇಶಗಳು ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆಯು ವೈಭವ ನಿರ್ಗತಿಕರ ಆಶ್ರಮದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅಥಿತಿಗಳಾಗಿ ಮಾತನಾಡಿದರು.

ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಅರಳಿ ನಾಗರಾಜ ಅವರು ಹಿರಿಯ ನಾಗರಿಕರಿಗೆ ಪುಸ್ತಕ ನೀಡುವ ಮೂಲಕ ಅವರಲ್ಲಿ ಕಾನೂನು ಅರಿವು ಮೂಡಿಸಿದರು. ಬಳಿಕ ಮಾತನಾಡಿದ ಅವರು, “ಸಮಾಜದಲ್ಲಿರುವ ಯುವ ಮಿತ್ರರು ಕಾನೂನಿನ ಮಹತ್ವವನ್ನು ಅರಿತು ಸಮಾಜದ ಬದಲಾವಣೆಗೆ ಬದ್ಧರಾಗಬೇಕು” ಎಂದರು.

Advertisements

ಅತಿಥಿ ಮಂಜುಳಾ ಮಾತನಾಡಿ, “ಈ ಸ್ನೇಹ ಸಂಜೀವಿನಿ ಸಂಸ್ಥೆ ಇನ್ನೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉನ್ನತಿಯವಾಗಿ ಬೆಳೆಯಲಿ ಮತ್ತು ಸಮಾಜದಿಂದ ಅವರಿಗೆ ದೊರೆಯಬೇಕಾದ ಗೌರವವನ್ನು ದೊರಕಿಸುವಲ್ಲಿ ನಿಮ್ಮ ಕಾರ್ಯ ಶ್ಲಾಘನೀಯ” ಎಂದು ಸಂಸ್ಥಯನ್ನು ಹೊಗಳಿದರು.

ಈ ಸುದ್ದಿ ಓದಿದ್ದೀರಾ? ಮರ್ಯಾದೆಗೇಡು ಹತ್ಯೆ | ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ದುರುಳ ತಂದೆ

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಆಸ್ಪತ್ರೆ ಮೂಲಕ ನಾಗರಿಕರಿಗೆ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಹನಮಂತ ದೇಸಾಯಿ, ಸ್ನೇಹ ಸಂಜೀವಿನ ಸಂಸ್ಥೆಯ ಅಧ್ಯಕ್ಷ ಶಶಿಕುಮಾರ್, ಸಂಸ್ಥೆ ಉಪಾಧ್ಯಕ್ಷ ಬಸವರಾಜ್ ಹವಳ,  ಕಾಲೇಜು ವಿದ್ಯಾರ್ಥಿಗಳು ಮತ್ತು ಸಂಸ್ಥೆ ಹಿರಿಯ ನಾಗರಿಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X