ರಾಜ್ಯದಲ್ಲಿ ಇಂದು ಪ್ರಾಕೃತಿಕ ದುರಂತದ ಮಾಹಿತಿ ನೀಡುವ ‘ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್’ ಪರೀಕ್ಷೆ

Date:

Advertisements
  • ‘ಪ್ರಾಕೃತಿಕ ದುರಂತದ ಸಮಯದಲ್ಲಿ ಸಾರ್ವಜನಿಕರಿಗೆ ತುರ್ತು ಮಾಹಿತಿ ನೀಡಲಿದೆ’
  • ದೂರ ಸಂಪರ್ಕ ಇಲಾಖೆಯ ಜೊತೆಗೂಡಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾ

ಸುನಾಮಿ, ಫ್ಲ್ಯಾಶ್ ಫ್ಲಡ್, ಭೂಕಂಪದಂತಹ ಪ್ರಾಕೃತಿಕ ದುರಂತದ ಸಮಯದಲ್ಲಿ ಸಾರ್ವಜನಿಕರಿಗೆ ಪರಿಣಾಮಕಾರಿ ತುರ್ತು ಸಂವಹನ ನೀಡುವ ಸಲುವಾಗಿ ದೂರ ಸಂಪರ್ಕ ಇಲಾಖೆಯ ಜೊತೆಗೂಡಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್ ಪ್ರಯೋಗಾರ್ಥ ಪರೀಕ್ಷೆ ನಡೆಸುತ್ತಿದೆ.

ಸೆಲ್ ಬ್ರಾಡ್‌ಕಾಸ್ಟ್ ಎಚ್ಚರಿಕೆ ವ್ಯವಸ್ಥೆಯು ಅತ್ಯಾಧುನಿಕ ತಂತ್ರಜ್ಞಾನವಾಗಿದ್ದು, ಗೊತ್ತುಪಡಿಸಿದ ಭೌಗೋಳಿಕ ಪ್ರದೇಶದ ಎಲ್ಲ ನಿವಾಸಿಗಳ ಮೊಬೈಲ್ ಸಾಧನಗಳಿಗೆ ವಿಪತ್ತಿಗೆ ಸಂಬಂಧಿಸಿದಂತೆ ನಿರ್ಣಾಯಕ ಮತ್ತು ಸೂಕ್ಷ್ಮ ಸಂದೇಶಗಳ ಜೊತೆಗೆ ನಿಗದಿತ ಸಮಯವನ್ನೂ ಕಳುಹಿಸಲು ಸಹಾಯವಾಗಿದೆ.

ಪ್ರಮುಖ ತುರ್ತು ಮಾಹಿತಿಯು ಸಕಾಲಿಕವಾಗಿ ಸಾಧ್ಯವಾದಷ್ಟು ಜನರನ್ನು ತಲುಪುತ್ತದೆ ಎಂಬುದನ್ನು ಇದು ಖಚಿತಪಡಿಸುತ್ತದೆ. ಸಂಭಾವ್ಯ ವಿಪತ್ತು ಮಾಹಿತಿ ತುರ್ತು ಎಚ್ಚರಿಕೆಯನ್ನು ಸಾರ್ವಜನಿಕರಿಗೆ ತಿಳಿಸಲು ಮತ್ತು ನಿರ್ಣಾಯಕ ಸಂದರ್ಭಗಳಲ್ಲಿ ಅವರಿಗೆ ಸರ್ಕಾರಿ ಸಂಸ್ಥೆಗಳ ಮೂಲಕ ತುರ್ತು ಸೇವೆಯನ್ನೂ ನೀಡಲೂ ಸಹ ಇದು ಸೆಲ್ ಬ್ರಾಡ್‌ಕಾಸ್ಟ್ ಸಹಕಾರಿಯಾಗಲಿದೆ.

Advertisements

ಸಾರ್ವಜನಿಕ ಸುರಕ್ಷತಾ ಸಂದೇಶಗಳು, ಸ್ಥಳಾಂತರಿಸುವ ಸೂಚನೆಗಳು ಮತ್ತು ಇತರ ನಿರ್ಣಾಯಕ ಸೆಲ್ ಬ್ರಾಡ್‌ಕಾಸ್ಟ್ ಸಂದೇಶಗಳು ಮೊಬೈಲ್‌ ಬಳಕೆದಾರರ ಗಮನವನ್ನು ಸೆಳೆಯಬಲ್ಲವು, ಪಾಪ್-ಅಪ್ ಅಧಿಸೂಚನೆಗಳನ್ನೂ ಇವು ನೀಡುತ್ತವೆ. ವಿಭಿನ್ನ ಎಚ್ಚರಿಕೆಯ ಶಬ್ದಗಳೂ ಇರಲಿದ್ದು, ಬೆಂಬಲಿತ ಹ್ಯಾಂಡ್‌ಸೆಟ್‌ಗಳಲ್ಲಿ ಎಚ್ಚರಿಕೆಯ ಸಂದೇಶಗಳನ್ನು ಸ್ವಯಂ ಓದಬಹುದಾಗಿದೆ.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪಟಾಕಿ ಎಂಬ ‘ಸಾವಿನ ಫ್ಯಾಕ್ಟರಿ’ಗಳಲ್ಲಿ ಬಡವರ ನಿತ್ಯ ದಹನ

ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್‌ನ ಪರೀಕ್ಷೆಗಳನ್ನು ಪ್ರತಿ ಟೆಲಿಕಾಂ ಸೇವಾ ಪೂರೈಕೆದಾರರ ಮೇಲೆ ನಡೆಸಲಾಗುತ್ತಿದೆ. ವಿವಿಧ ಮೊಬೈಲ್ ಆಪರೇಟರ್‌ಗಳು ಮತ್ತು ಸೆಲ್ ಬ್ರಾಡ್‌ಕಾಸ್ಟ್ ಸಿಸ್ಟಮ್‌ಗಳ ತುರ್ತು ಎಚ್ಚರಿಕೆಯ ಪ್ರಸಾರ ಸಾಮರ್ಥ್ಯಗಳ ದಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಅಳೆಯಲು ಈ ಪರೀಕ್ಷೆಗಳನ್ನು ಕಾಲಕಾಲಕ್ಕೆ ದೇಶದಾದ್ಯಂತ ವಿವಿಧ ಪ್ರದೇಶಗಳಲ್ಲಿ ನಡೆಸಲಾಗುತ್ತದೆ. ಈ ಪ್ರಯತ್ನದ ಭಾಗವಾಗಿ, ಕರ್ನಾಟಕದಲ್ಲಿ ಅಕ್ಟೋಬರ್ 12 ರಂದು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಮೊಬೈಲ್‌ಗೆ ಬರುವ ಸಂದೇಶ ಹೀಗಿರುತ್ತದೆ

“ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್‌ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ”

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X