ಬೆಂಗಳೂರು | ರಾತ್ರಿ ವೇಳೆ ಹಾಡಿನ ಶಬ್ದ ಕಡಿಮೆ ಮಾಡಿ ಎಂದ ನೆರೆಯವರು; ಥಳಿತಕ್ಕೊಳಗಾದ ವ್ಯಕ್ತಿ ಸಾವು

Date:

Advertisements
  • ಥಳಿತಕ್ಕೊಳಗಾದ ವ್ಯಕ್ತಿ ಎರಡು ದಿನಗಳ ನಂತರ ಸಾವು
  • ಘಟನೆಯನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ ಲಾಯ್ಡ್ ಮನೆಯವರು

ರಾತ್ರಿ ವೇಳೆ ಹೆಚ್ಚು ಶಬ್ದದೊಂದಿಗೆ ಹಾಡು ಹಾಕುತ್ತಿದ್ದಾರೆಂದು ಕೇಳಿದ್ದಕ್ಕಾಗಿ 54 ವರ್ಷದ ವ್ಯಕ್ತಿಯೊಬ್ಬರನ್ನು ನೆರೆಹೊರೆಯವರು ಮಾರಣಾಂತಿಕವಾಗಿ ಥಳಿಸಿದ್ದ ಘಟನೆ ಬೆಂಗಳೂರಿನ ವಿಜ್ಞಾನ ನಗರದಲ್ಲಿ ನಡೆದಿತ್ತು. ಥಳಿತಕ್ಕೊಳಗಾದ ವ್ಯಕ್ತಿ ಎರಡು ದಿನಗಳ ನಂತರ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ರಾಮ್ ಸಮಂತ್ ರೈ, ಬಸುದೇವ್ ಸಮಂತ್ ರೈ ಹಾಗೂ ಅಭಿಷೇಕ್ ಸಿಂಗ್ ಹಲ್ಲೆ ಮಾಡಿದ ಆರೋಪಿಗಳು. ಇವರು 26 ರಿಂದ 30 ವರ್ಷ ವಯಸ್ಸಿನವರು. ಅದೇ ಬಡಾವಣೆಯಲ್ಲಿ ವಾಸಿಸುತ್ತಿದ್ದಾರೆ.

ವಿಜ್ಞಾನ ನಗರದಲ್ಲಿ ಏಪ್ರಿಲ್ 2ರಂದು ಬೆಳಗಿನ ಜಾವ 4.30ರ ಸುಮಾರಿಗೆ ನೆರೆಯ ಮನೆಯವರು ರಾತ್ರಿ ವೇಳೆ ಹೆಚ್ಚು ಶಬ್ಧದೊಂದಿಗೆ ಹಾಡು ಹಾಕಿದ್ದರು. ‘ತಮ್ಮ ಮನೆಯಲ್ಲಿ ವಯಸ್ಸಾದ ತಾಯಿ ಇದ್ದಾರೆ. ಅವರಿಗೆ ತೊಂದರೆಯಾಗುತ್ತದೆ. ಶಬ್ದವನ್ನು ಕಡಿಮೆ ಮಾಡಿ’ ಎಂದು ಲಾಯ್ಡ್ ಮನವಿ ಮಾಡಿದ್ದರು. ಆದರೆ, ಆರೋಪಿಗಳು ಲಾಯ್ಡ್ ಅವರಿಗೆ ಬೈದು ಕಳುಹಿಸಿದ್ದರು ಎನ್ನಲಾಗಿದೆ.

Advertisements

ಹೆಚ್ಚು ಶಬ್ದದಿಂದ ಕಿರಿಕಿರಿಗೊಂಡಿದ್ದ ಲಾಯ್ಡ್ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಇದರಿಂದ ಕೋಪಗೊಂಡ ಮೂವರು ಆರೋಪಿಗಳು ಏ. 2ರಂದು ಲಾಯ್ಡ್ ಅವರನ್ನು ಥಳಿಸಿದ್ದಾರೆ. ಈ ವೇಳೆ, ಲಾಯ್ಡ್ ಅವರನ್ನು ರಕ್ಷಿಸಲು ಹೋದ ಲಾಯ್ಡ್ ಕುಟುಂಬಸ್ಥರು ಮತ್ತು ನೆರೆಹೊರೆಯವರ ಮೇಲೂ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಘಟನೆಯನ್ನು ಲಾಯ್ಡ್ ಮನೆಯವರು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಪೊಲೀಸರಿಗೆ ಕರೆ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಹೊಯ್ಸಳ ಗಸ್ತು ಪೊಲೀಸರು ಬಂದು ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋದರು. ಕುಡಿದ ಅಮಲಿನಲ್ಲಿದ್ದ ಆರೋಪಿಗಳನ್ನು ಬೇರೆಡೆಗೆ ಕಳಿಸಿದ್ದಾರೆ ಎಂದು ತಿಳಿದುಬಂದಿದೆ.

“ಏಪ್ರಿಲ್ 2ರ ಮುಂಜಾನೆ ಮೂವರು ಸಾಫ್ಟ್‌ವೇರ್ ಇಂಜಿನಿಯರ್‌ಗಳ ಲಾಯ್ಡ್ ನೆಹೆಮಿಯಾ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಅವರು ಮಂಗಳವಾರ ರಾತ್ರಿ 10.30 ರ ಸುಮಾರಿಗೆ ನಿಧನರಾದರು” ಎಂದು ಲಾಯ್ಡ್ ಅವರ ಕಿರಿಯ ಸಹೋದರ ಡೇವಿಡ್ ನೆಹೆಮಿಯಾ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದರೋಡೆ ಮಾಡಲು ವಿಮಾನದಲ್ಲಿ ತೆರಳಿದ್ದ ಇಬ್ಬರ ಬಂಧನ, ₹67 ಲಕ್ಷ ಮೌಲ್ಯದ ವಸ್ತುಗಳು ವಶ

“ಈ ಘಟನೆ ನಡೆದ ಬಳಿಕ ಲಾಯ್ಡ್‌ ಅವರ ತಾಯಿಯನ್ನು ಐಸಿಯುನಲ್ಲಿ ಸೇರಿಸಲಾಗಿದೆ. ಅವರಿಗೆ ಲಾಯ್ಡ್ ಅವರ ಸಾವಿನ ಬಗ್ಗೆ ಗೊತ್ತಿಲ್ಲ. ಈ ಸುದ್ದಿಯನ್ನು ಹೇಗೆ ತೆಗೆದುಕೊಳ್ಳುತ್ತಾರೆ ಎಂಬ ಬಗ್ಗೆ ಆತಂಕವಿದೆ” ಎಂದು ಡೇವಿಡ್ ತಿಳಿಸಿದರು.

“ಪೊಲೀಸರು ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬಂದಿಲ್ಲ. ಶಂಕಿತರಲ್ಲಿ ಒಬ್ಬರನ್ನು ದೆಹಲಿಗೆ ಪ್ರಯಾಣಿಸಲು ಪೊಲೀಸರು ಅವಕಾಶ ನೀಡಿದ್ದಾರೆ. ಯಾರನ್ನೂ ಬಂಧಿಸಿಲ್ಲ. ಪೊಲೀಸ್ ಠಾಣೆಯಲ್ಲಿ ಕೊಲೆ ದೂರು ದಾಖಲಿಸಲಾಗುವುದು” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X