ಸಿದ್ದರಾಮಯ್ಯನವರೇ, ನಿಮ್ಮ ಮೈಯಲ್ಲಿ ಹಸಿರು ರಕ್ತ ಹರಿಯುತ್ತಿದೆಯಾ: ಕೆ ಎಸ್ ಈಶ್ವರಪ್ಪ ಪ್ರಶ್ನೆ

Date:

Advertisements
  • ನಾವು ಸಹ ಲಾಂಗು ಮಚ್ಚು ಹಿಡಿದಿದ್ದರೆ ಕುರಿ ಕಡಿದು ಹಾಕುವಂತೆ ಕಡಿಯುತ್ತಿದ್ದೆವು
  • ‘ದೇಶದ್ರೋಹಿ ಮುಸಲ್ಮಾನರು ಭಾರತದ ಭೂಪಟಕ್ಕೆ ಹಸಿರು ಬಣ್ಣ ಬಳಿದಿದ್ದಾರೆ’

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ಮೈಯಲ್ಲಿ ಹಸಿರು ರಕ್ತ ಹರಿಯುತ್ತಿದೆಯಾ? ಅಥವಾ ಹಿಂದೂ ರಕ್ತ ಹರಿಯುತ್ತಿದೆಯಾ? ಈ ದೇಶದ ದೇಶದ್ರೋಹಿ ಮುಸಲ್ಮಾನರು ಅಖಂಡ ಭಾರತದ ಭೂಪಟಕ್ಕೆ ಹಸಿರು ಬಣ್ಣ ಬಳಿದಿದ್ದಾರೆ. ನಿಮಗೆ ತಾಕತ್ತಿದ್ದರೆ ಹಸಿರು ಬಣ್ಣ ಆರಿಸಿಕೊಳ್ಳಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, “ಮುಸ್ಲಿಮರಿಗೆ ಸಿದ್ದರಾಮಯ್ಯನವರ ರಕ್ಷಣೆಯಿದೆ. ಡಿಸಿ, ಎಸ್ಪಿ ಅವರೇ ಎಷ್ಟು ದಿನ ಕಾಂಗ್ರೆಸ್ ನ ಗುಲಾಮರಾಗುತ್ತೀರಿ? ಹರ್ಷನ ಕೊಲೆಯಾದಾಗ ನಾವು ಸಹ ಲಾಂಗು ಮಚ್ಚು ಹಿಡಿದಿದ್ದರೆ ಮಾರಿ ಜಾತ್ರೆಯಲ್ಲಿ ಕುರಿ ಕಡಿದು ಹಾಕುವಂತೆ ಹಾಕುತ್ತಿದ್ದೆವು. ಆದರೆ ನಾವು ಅದನ್ನು ಮಾಡಲಿಲ್ಲ. ಓಂ ಚಿತ್ರವನ್ನು ಸಿದ್ದರಾಮಯ್ಯನವರಿಗೆ ತೋರಿಸಬೇಕು. ನಾವು ಈಗ ಶಾಂತಿಯಿಂದ ಸಭೆ ಮಾಡುತ್ತಿದ್ದೇವೆ” ಎಂದರು.

“ಹೇಡಿ ಸಿದ್ದರಾಮಯ್ಯನವರಿಗೆ ರಾಷ್ಟ್ರ ಭಕ್ತ ಹಿಂದೂಗಳ ರಕ್ಷಣೆ ಮಾಡಲಾಗುವುದಿಲ್ಲ. ಏಕರೂಪ ನಾಗರಿಕ ಸಂಹಿತೆ ಜಾರಿ ತರಲು ಹೊರಟರೆ ಕಾಂಗ್ರೆಸ್ ಒಪ್ಪುವುದಿಲ್ಲವಂತೆ. ಈ ಕಾನೂನು ಒಪ್ಪುವುದಾದರೇ ಇಲ್ಲಿ ಇರಿ, ಇಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.‌

Advertisements

“ಕೆಂಪುಕೋಟೆ ಮೇಲೆ ಮುಂದೊಂದು ದಿನ ಭಗವಾಧ್ವಜ ಹಾರಿಸುತ್ತೇವೆ ಎಂದಿದ್ದೆ. ಆಗ ಡಿ.ಕೆ ಶಿವಕುಮಾರ್ ಗೆ ಸಿಟ್ಟು ಬಂದಿತ್ತು. ಡಿಕೆ ಶಿವಕುಮಾರ್ ನೀನು ಈಗ ಡಿಸಿಎಂ ಆಗಿರುವುದು. ನಾನು ಆವಾಗಲೇ ಡಿಸಿಎಂ ಆಗಿದ್ದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪಟಾಕಿ ಎಂಬ ‘ಸಾವಿನ ಫ್ಯಾಕ್ಟರಿ’ಗಳಲ್ಲಿ ಬಡವರ ನಿತ್ಯ ದಹನ

ಆಯುಧದಿಂದ ಉತ್ತರ ಕೊಡೋಣ

ನಮ್ಮ ಸಮಾಜದವರನ್ನು ಮುಟ್ಟಿದರೆ ಅದೇ ಆಯುಧದಿಂದ ಉತ್ತರ ಕೊಡೋಣ. ಮುಸ್ಲಿಂ ಗೂಂಡಾಗಳು ಹರ್ಷನ ಕೊಲೆ ಮಾಡಿದ್ದಾರೆ. ನಿಮ್ಮ ಮಗ ಯತೀಂದ್ರನಿಗೆ ಕೊಲೆ ಮಾಡಿದ್ದರೆ ನಿಮಗೆ ಏನು ಅನಿಸುತ್ತಿತ್ತು? ಡಿಕೆ ಶಿವಕುಮಾರ್ ನಿಮ್ಮ ತಮ್ಮನನ್ನು ಮುಸ್ಲಿಮರು ಕೊಲೆ ಮಾಡಿದ್ದರೆ ಏನು ಅನಿಸುತ್ತಿತ್ತು” ಎಂದು ಖಾರವಾಗಿ ಪ್ರಶ್ನಿಸಿದರು.

ಕನಿಷ್ಠ ಐದು ಮಕ್ಕಳಾದರೂ ಮಾಡಿಕೊಳ್ಳಿ

“ಕನಿಷ್ಠ ಐದು ಮಕ್ಕಳಾದರೂ ಮಾಡಿಕೊಳ್ಳಿ. ನನಗೆ ಐದು ಮಕ್ಕಳು, ಎಂಟು ಮೊಮ್ಮಕ್ಕಳು. ನೀವು ಅಷ್ಟಾದರೂ ಮಾಡಿಕೊಳ್ಳಿ. ಮತ್ತೊಮ್ಮೆ ರಾಘಣ್ಣ ಸಂಸದರಾಗುತ್ತಾರೆ. ನರೇಂದ್ರ ಮೋದಿ ಪ್ರಧಾನಿಯಾಗುತ್ತಾರೆ. ಹಿಂದೂ ಸಮಾಜ ರಕ್ಷಣೆ ಮಾಡುವ ಸರ್ಕಾರ ಬರುತ್ತದೆ. ಪ್ರತಿಬೂತ್ ನಲ್ಲಿ ಪ್ರಧಾನಿ ನೆನಪು ಮಾಡಬೇಕು” ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X