ಮೈಸೂರು | ದಸರಾದಲ್ಲಿ ಕರೋಕೆ ಹಾಡು ನಿಷೇಧಿಸಲು ಆರ್ಟಿಸ್ಟ್ ಅಸೋಸಿಯೇಷನ್ ಆಗ್ರಹ

Date:

Advertisements

ದಸರಾ ಉತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸುವ ಸಂಗೀತ ಕಾರ್ಯಕ್ರಮಗಳಲ್ಲಿ ಕರೋಕೆಯನ್ನು ನಿಷೇಧಿಸಬೇಕು ಎಂದು ಮೈಸೂರು ಆರ್ಟಿಸ್ಟ್ ಅಸೋಸಿಯೇಷನ್ ಹಾಗೂ ನಗರದ ಎಲ್ಲ ಕಲಾ ಬಳಗಗಳ ಒಕ್ಕೂಟದ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮೈಸೂರು ಆರ್ಟಿಸ್ಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗುರುದತ್ ಮಾತನಾಡಿ, “ಮೈಸೂರು ದಸರಾ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದ್ದು, ಈ ದಸರಾ ಸಂದರ್ಭದಲ್ಲಿ ಅನೇಕ ವೇದಿಕೆಗಳಲ್ಲಿ ಕರೋಕೆಯನ್ನು ಬಳಸುತ್ತಿದ್ದಾರೆ. ಯುವ ದಸರಾ ಯುವ ಸಂಭ್ರಮ ಅರಮನೆ ವೇದಿಕೆ ಮತ್ತು ಇತರ ಮುಖ್ಯ ವೇದಿಕೆಗಳಲ್ಲಿಯೇ ಕರೋಕೆ ಬಳಸುತ್ತಿರುವುದು ಖಂಡನೀಯವಾಗಿದೆ. ಈ ಕರೋಕೆ ಬಳಕೆಯಿಂದ ಮೈಸೂರಿನ ಪಾರಂಪರಿಕ ಇತಿಹಾಸವನ್ನು ಹಾಳುಮಾಡುತ್ತಿದೆ” ಎಂದರು.

“ಸಾಂಸ್ಕೃತಿಕ ನಗರ ಮೈಸೂರಿಗೆ ಹಾಗೂ ನಾಡಹಬ್ಬ ದಸರಾಕ್ಕೆ ಮಾಡುವ ಅತಿ ದೊಡ್ಡ ಅನ್ಯಾಯವಾಗಿದು, ಕಳಂಕ ತಂದೊಡ್ಡಿದೆ. ಇದರೊಂದಿಗೆ ನೈಜ ಕಲಾವಿದರಿಗೆ ಅನ್ಯಾಯ ಮಾಡಿದಂತಾಗುತ್ತಿದೆ. ದಸರಾ ಕಾರ್ಯಕ್ರಮಗಳಲ್ಲಿ ಮೈಸೂರಿನ ಪ್ರತಿಭೆಗಳಿಗೆ ಹಾಗೂ ಕಲಾವಿದರಿಗೆ ಅವಕಾಶ ನೀಡದೇ ಇರುವುದು ಖಂಡನೀಯ” ಎಂದರು.

Advertisements

ಅಧ್ಯಕ್ಷ ರಘುನಾಥ್ ಮಾತನಾಡಿ, “ನೂರಾರು ವರ್ಷಗಳಿಂದ ನಡೆಯುತ್ತಾ ಬಂದಿರುವ ದಸರಾ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡದೆ ಇರುವುದು ಮೈಸೂರಿನ ಕಲಾವಿದರಿಗೆ ಮಾಡುತ್ತಿರುವ ಅತಿ ದೊಡ್ಡ ಅನ್ಯಾಯವಾಗಿದೆ. ಮೈಸೂರಿನ ಉನ್ನತ ವೇದಿಕೆಗಳಲ್ಲಿ ಕರೋಕೆ ಬಳಸಿ ಕಾರ್ಯಕ್ರಮ ಮಾಡುತ್ತಿರುವುದು, ಕರೋಕೆ ಬಳಸಲು ಅವಕಾಶ ನೀಡುತ್ತಿರುವುದು ಎಷ್ಟರಮಟ್ಟಿಗೆ ಸರಿ” ಎಂದು ಪ್ರಶ್ನಿಸಿದರು.

ಸರ್ಕಾರದ ವತಿಯಿಂದಲೇ ಕರೋಕೆಯನ್ನು ರದ್ದು ಮಾಡಬೇಕಾಗಿದೆ. ದಸರಾ ಕಾರ್ಯಕ್ರಮಗಳನ್ನು ಈವೆಂಟ್ ಮ್ಯಾನೇಜ್‌ಮೆಂಟ್‌ಗೆ ವಹಿಸುತ್ತಿರುವುದು ತಪ್ಪು. ಇದರಿಂದ ಎಲ್ಲ ಕಲಾವಿದರಿಗೆ ಹಾಗೂ ಮೈಸೂರಿನ ಧ್ವನಿವರ್ಧಕದವರಿಗೆ, ವೇದಿಕೆ ಸಿದ್ಧಪಡಿಸುವವರಿಗೆ ಹಾಗೂ ಅನೇಕ ಜನರಿಗೆ ಇದು ಮಾರಕವಾಗಿದ್ದು, ಅನ್ಯಾಯವಾಗುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಹಾರಾಜ ಕಾಲೇಜಿನಲ್ಲಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿಲ್ಲ; ಎಐಡಿಎಸ್‌ಒ ಆರೋಪ

ದಸರಾ ಸಂಗೀತ ಕಾರ್ಯಕ್ರಮದಲ್ಲಿ ಹಾಗೂ ಸಂಸ್ಕೃತಿ ಇಲಾಖೆ ನಡೆಸುವ ಸಂಗೀತ ಕಾರ್ಯಕ್ರಮದಲ್ಲಿ ಕರೋಕೆಯನ್ನು ನಿಷೇಧಿಸಿ ಎಂದು ಮೈಸೂರಿನ ಎಲ್ಲ ಕಲಾ ಬಳಗದ ಒಕ್ಕೂಟದ ಎಲ್ಲ ಕಲಾವಿದರೂ ಕೂಡ ಒಮ್ಮತದಿಂದ ಕೂಗಿದರು.

ಈ ವೇಳೆ ರಘುನಾಥ್, ಗುರುದತ್, ಷಣ್ಮುಗ ಸಜ್ಜಾ, ರೋಶನ್ ಸೂರ್ಯ, ರಾಜೇಶ್ ಪಡಿಯಾರ್, ರವಿಕಿರಣ್, ಬಾಲಣ್ಣ, ಸೌಭಾಗ್ಯ ಪ್ರಭು, ವಿನ್ಸೆಂಟ್, ಪ್ರದೀಪ್ ಗಾಂಧಿನಗರ, ಪ್ರದೀಲ್ ಕಿಗ್ಗಾಲ್, ರಾಮಚಂದ್ರು, ಸಂತೋಷ್, ಜಗದೀಶ್, ನಾಗಲಿಂಗೇಶ್, ಪೃಥ್ವಿ, ರವಿಕುಮಾರ್ ಸಾಕ್ಸೊಪೋನ, ಬಾಬು ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X