ಬಿಲ್ಕಿಸ್ ಬಾನೊ ಪ್ರಕರಣ | ಗುಜರಾತ್, ಕೇಂದ್ರಕ್ಕೆ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

Date:

Advertisements

ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮೊದಲೇ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ನಡೆಸಿದ ನ್ಯಾ ಬಿ ವಿ ನಾಗರತ್ನ ಹಾಗೂ ನ್ಯಾ. ಉಜ್ವಲ್ ಭುಯಾನ್‌ ಅವರಿದ್ದ ವಿಭಾಗೀಯ ಪೀಠ ಆದೇಶವನ್ನು ಕಾಯ್ದಿರಿಸಿದೆ.

ಆಗಸ್ಟ್‌ನಲ್ಲಿ ಆರಂಭವಾದ 11 ದಿನಗಳ ಸುದೀರ್ಘ ವಿಚಾರಣೆಯ ನಂತರ ನ್ಯಾಯಮೂರ್ತಿಗಳು ಆದೇಶವನ್ನು ಕಾಯ್ದಿರಿಸಿದರು.

ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಹಾಗೂ ಆಕೆಯ ಕುಟುಂಬದ ಏಳು ಸದಸ್ಯರ ಹತ್ಯೆಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಅಕ್ಟೋಬರ್ 16 ರೊಳಗೆ ಸಲ್ಲಿಸುವಂತೆ ಕೇಂದ್ರ ಮತ್ತು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

Advertisements

“ನಾವು ಪ್ರತಿವಾದಿಗಳಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳನ್ನು ಸಲ್ಲಿಸಲು ಗುಜರಾತ್ ರಾಜ್ಯದ ವಕೀಲರನ್ನು ಕೇಳಿದ್ದೇವೆ. ಮೂಲ ದಾಖಲೆಗಳು ಗುಜರಾತಿಯಲ್ಲಿವೆ ಎಂದು ಸಲ್ಲಿಸಲಾಗಿದೆ. ಆದ್ದರಿಂದ ಇಂಗ್ಲಿಷ್ ಭಾಷಾಂತರಗಳು ಸೋಮವಾರದೊಳಗೆ ಮೂಲ ದಾಖಲೆಗಳೊಂದಿಗೆ ಸಹ ಒದಗಿಸಬೇಕು. ಕೇಂದ್ರ ಸರ್ಕಾರವು ಕೂಡ ಮೂಲ ದಾಖಲೆಗಳನ್ನು ಒದಗಿಸಬೇಕು” ಎಂದು ನ್ಯಾಯಾಧೀಶರು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಇಸ್ರೇಲ್ ಮೇಲೇಕೆ ಮೋದಿ ಪ್ರೀತಿ: ಸುಬ್ರಹ್ಮಣ್ಯನ್ ಸ್ವಾಮಿ ಪ್ರಶ್ನೆ

ಬಿಲ್ಕಿಸ್‌ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ 11 ಅಪರಾಧಿಗಳನ್ನು ಅವರು ನಡೆಸಿದ ಅಮಾನುಷ ಅಪರಾಧಕ್ಕಾಗಿ ಮರಳಿ ಜೈಲಿಗೆ ಕಳುಹಿಸಬೇಕು ಎಂದು ಬಿಲ್ಕಿಸ್‌ ಪರ ವಕೀಲೆ ಶೋಭಾ ಗುಪ್ತಾ ಸುಪ್ರೀಂ ಕೋರ್ಟಿನ ಮುಂದೆ ತಮ್ಮ ವಾದ ಮಂಡಿಸಿದರು.

ಅವರನ್ನು ಬಿಡುಗಡೆಗೊಳಿಸುವ ಮುನ್ನ ಅಪರಾಧದ ಸ್ವರೂಪವನ್ನು, ಅದು ಸಮಾಜದ ಮೇಲೆ ಬೀರುವ ಪರಿಣಾಮವನ್ನು ಸರ್ಕಾರ ಪರಿಗಣಿಸಬೇಕಿತ್ತು ಎಂದು ಬಿಲ್ಕಿಸ್‌ ಬಾನೊ ಅವರ ವಕೀಲೆ ಹೇಳಿದರು.

ಸರ್ಕಾರದ ಕ್ರಮವನ್ನು ವಿರೋಧಿಸಿ ಬಿಲ್ಕಿಸ್ ಬಾನೊ ಮಾತ್ರವಲ್ಲದೆ, ಸಿಪಿಎಂ ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್ ಮತ್ತು ಲಖನೌ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ರೂಪ್ ರೇ ವರ್ಮಾ ಸೇರಿದಂತೆ ಹಲವರು ಪಿಐಎಲ್ ಸಲ್ಲಿಸಿದ್ದಾರೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರೂ ಅಪರಾಧಿಗಳಿಗೆ ನೀಡಲಾದ ವಿನಾಯಿತಿ ಮತ್ತು ಅವರ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಪಿಐಎಲ್ ಸಲ್ಲಿಸಿದ್ದಾರೆ.

2002ರಲ್ಲಿ ಸಂಭವಿಸಿದ ಗೋಧ್ರಾ ರೈಲು ದುರಂತದ ಬಳಿಕ ಗುಜರಾತ್‌ನಲ್ಲಿ ಭುಗಿಲೆದ್ದ ಕೋಮುಗಲಭೆಯಿಂದ ತಪ್ಪಿಸಿಕೊಳ್ಳಲು ಪಲಾಯನ ಮಾಡುತ್ತಿದ್ದ ಬಿಲ್ಕಿಸ್ ಬಾನೊ ಅವರ ಕುಟುಂಬದ ಮೇಲೆ ದಾಳಿ ನಡೆದಿತ್ತು. ಆ ಸಮಯದಲ್ಲಿ ಐದು ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಜೊತೆಗೆ ಬಾನೊ ಕುಟುಂಬದ ಏಳು ಜನರನ್ನು ಹತ್ಯೆ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X