ಕಲಬುರ್ಗಿ ಜಿಲ್ಲೆಯ ಹಿರಿಯ ಪತ್ರಕರ್ತ ಪಿ.ಎಂ ಮಣ್ಣೂರ್ ಅವರು ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ಅವರು ಸತ್ಯಕಾಮ ಕನ್ನಡ ದಿನ ಪತ್ರಿಕೆಯ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು. ಕಲಬುರಗಿ ಜಿಲ್ಲೆಯ ಸಾಹಿತ್ಯ ರಂಗದಲ್ಲೂ ಗುರುತಿಸಿಕೊಂಡಿದ್ದರು.
371(ಜೆ) ಹೋರಾಟದಲ್ಲಿ ಮಾಜಿ ಸಚಿವ ದಿ. ವೈಜನಾಥ್ ಪಾಟೀಲ್ ಅವರೊಂದಿಗೆ ಸಕ್ರೀಯವಾಗಿ ಭಾಗವಹಿಸಿದ್ದರು .ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.
ಮೃತರ ಅಂತ್ಯಕ್ರಿಯೆ ಶನಿವಾರ ಕಲಬುರಗಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.