ಮೈಸೂರು | ಮಹಿಷ ದಸರಾ; ವಿಜೃಂಭಣೆಯ ಆಚರಣೆ

Date:

Advertisements

ವಿವಿಧ ಸಂಘಟನೆಗಳು ಒಗ್ಗೂಡಿ ನಡೆಸುತ್ತಿರುವ ‘ಮಹಿಷ ದಸರಾ’ ಉತ್ಸವ ವಿಜೃಂಭಣೆಯಿಂದ ಆಚರಣೆಯಾಗುತ್ತಿದೆ. ಪರ-ವಿರೋಧ ಚರ್ಚೆಗಳು, ಬಿಗಿ ಕಟ್ಟುಪಾಡುಗಳ ನಡುವೆಯೂ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ.

ಮಹಿಷ ದಸರಾ ಆಚರಣೆಗೆ ಬಿಡುವುದಿಲ್ಲ. ಮಹಿಷ ದಸರಾ ನಡೆದಲ್ಲಿ ಚಾಮುಂಡಿ ಬೆಟ್ಟ ಚಲೋ ನಡೆಸುತ್ತೇವೆ. ಘರ್ಷಣೆ ಮಾಡುತ್ತೇವೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಬೆದರಿಕೆಯೊಡ್ಡಿದ್ದರು. ಪೊಲೀಸರು ಕೂಡ ಮಹಿಷ ದಸರಾಗೆ ಅನುಮತಿಯಿಲ್ಲವೆಂದು ಹೇಳಿದ್ದರು. ಆ ಬಳಿಕ ಸಾರ್ವಜನಿಕ ಒತ್ತಡಕ್ಕೆ ಮಣಿದು ಷರತ್ತುಗಳೊಂದಿಗೆ ಮಹಿಷ ದಸರಾಗೆ ಪೊಲೀಸರು ಸಮ್ಮತಿ ನೀಡಿದ್ದರು.

ಮೈಸೂರಿನ ಪುರಭವನದಲ್ಲಿ ಅದ್ದೂರಿಯಾಗಿ ಮಹಿಷ ದಸರಾ ನಡೆಯುತ್ತಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಬೆಂಗಳೂರು ಜಿಲ್ಲೆಗಳಿಂದ ನೂರಾರು ಜನರು ಉತ್ಸವದಲ್ಲಿ ಭಾಗಿಯಾಗಿದ್ದಾರೆ. ಮೈಸೂರಿನ ಅಶೋಕಪುರಂನಿಂದ ನೂರಾರು ಯುವಕರು ನೀಲಿ ಬಾವುಟ ಹಿಡಿದು ಜಾಥಾ ನಡೆಸಿದ್ದಾರೆ.

Advertisements

ಕಾರ್ಯಕ್ರಮ ಆರಂಭಕ್ಕೂ ಮುನ್ನ ಖ್ಯಾತ ಗಾಯಕ ಅಮ್ಮಾ ರಾಮಚಂದ್ರ ಮತ್ತು ತಂಡದವರು ಹೋರಾಟದ ಹಾಡುಗಳನ್ನು ಹಾಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X