ಒಲಿಂಪಿಕ್ಸ್‌: ಟಿ20 ಸೇರ್ಪಡೆಗೆ ಅನುಮತಿ ನೀಡಿದ ಐಒಸಿ

Date:

Advertisements

ಇನ್ನು ಮುಂದೆ  ವಿಶ್ವದ ಕ್ರೀಡಾ ಹಬ್ಬವಾದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಎರಡು ಚಿನ್ನ ಗೆಲ್ಲಲು ಭಾರತಕ್ಕೆ ಮತ್ತೊಂದು ಅವಕಾಶ ದೊರೆಯುವ ಸಾಧ್ಯತೆಯಿದೆ.

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಟಿ20 ಕ್ರಿಕೆಟ್ ಆಟವನ್ನು ಸೇರ್ಪಡೆ ಮಾಡಬೇಕು ಎಂಬ ಸಲಹೆಯನ್ನು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ(ಐಒಸಿ) ಸ್ವೀಕರಿಸಿದೆ. ಈ ಮೂಲಕ ಕ್ರಿಕೆಟ್ ಆಟವು ವಿಶ್ವದ ಅತಿದೊಡ್ಡ ಕ್ರೀಡಾಕೂಟದಲ್ಲಿ ಭಾಗಿಯಾಗಲು ವೇದಿಕೆ ಸಜ್ಜಾಗಿದೆ.

ಪುರುಷರ ಹಾಗೂ ಮಹಿಳೆಯರ ಟಿ20 ಕ್ರಿಕೆಟ್ ಸೇರ್ಪಡೆಗೊಳಿಸಲು ಅಕ್ಟೋಬರ್ 15 ರಂದು ನಿಗದಿಯಾಗಿರುವ ತನ್ನ ಅಧಿವೇಶನದಲ್ಲಿ ಐಒಸಿ ಕಾರ್ಯಕಾರಿ ಮಂಡಳಿಯು ತನ್ನ ಮತಗಳನ್ನು ಚಲಾಯಿಸಲಿದ್ದು, ಕ್ರಿಕೆಟ್ ಬಹುತೇಕ ಸೇರ್ಪಡೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಪಾಕ್ ಪಂದ್ಯದಲ್ಲಿ ಶುಭಮನ್ ಆಡುವ ಬಗ್ಗೆ ಲೇಟೆಸ್ಟ್ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

ಕ್ರಿಕೆಟ್ ಹೊರತಾಗಿ ಬೇಸ್‌ಬಾಲ್, ಫ್ಲ್ಯಾಗ್ ಫುಟ್‌ಬಾಲ್, ಲ್ಯಾಕ್ರೋಸ್ ಮತ್ತು ಸ್ಕ್ವಾಷ್ ಕ್ರೀಡೆಗಳನ್ನು ಸೇರ್ಪಡೆಗೊಳಿಸಲು ಐಒಸಿ ಅನುಮತಿ ನೀಡಿದೆ. ಇವೆಲ್ಲ ಕ್ರೀಡೆಗಳ ಸೇರ್ಪಡೆಯ ತೀರ್ಮಾನ ಅಕ್ಟೋಬರ್‌ 16ರಂದು ಪ್ರಕಟಗೊಳ್ಳಲಿದೆ.

“ಕ್ರಿಕೆಟ್‌ನ ಜನಪ್ರಿಯತೆಯನ್ನು ನಾವು ನೋಡಿದ್ದೇವೆ. ಟಿ20 ಹಾಗೂ ಏಕದಿನ ವಿಶ್ವಕಪ್ ಈಗಾಗಲೇ ದೊಡ್ಡ ಯಶಸ್ಸನ್ನು ಹೊಂದಿದೆ. ಮೊದಲ ಐದು ಹೊಸ ಕ್ರೀಡೆಗಳನ್ನು ಪರಿಚಯಿಸಲು ಲಾಸ್ ಏಂಜಲೀಸ್ ಸಂಘಟನಾ ಸಮಿತಿ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ” ಎಂದು ಐಒಸಿಯ ಕ್ರೀಡಾ ನಿರ್ದೇಶಕ ಕಿಟ್ ಮೆಕ್‌ಕಾನ್ನೆಲ್ ಎರಡು ದಿನಗಳ ಕಾರ್ಯಕಾರಿ ಮಂಡಳಿಯ ಸಭೆಯ ಮುಕ್ತಾಯದ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X