ಏಕದಿನ ವಿಶ್ವಕಪ್ 2023 | ಕೇನ್ – ಡೇರಿಲ್ ಭರ್ಜರಿ ಆಟ: ನ್ಯೂಜಿಲೆಂಡ್‌ಗೆ ಹ್ಯಾಟ್ರಿಕ್ ಗೆಲುವು

Date:

Advertisements

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯ 11ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಜಯದ ಓಟವನ್ನು ಮುಂದುವರಿಸಿದ್ದು, ಬಾಂಗ್ಲಾದೇಶವನ್ನು 8 ವಿಕೆಟ್‌ಗಳಿಂದ ಮಣಿಸಿತು.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾ ನೀಡಿದ 246 ರನ್‌ಗಳ ಸವಾಲನ್ನು ಬೆನ್ನಟ್ಟಿದ ನ್ಯೂಜಿಲೆಂಡ್, ಕೇನ್‌ ವಿಲಿಯಮ್ಸ್‌ನ್ ಹಾಗೂ ಡೇರಿಲ್‌ ಮಿಚೆಲ್ ಅವರ ಭರ್ಜರಿ ಆಟದಿಂದ 43 ಎಸೆತಗಳು (42.5 ಓವರ್) ಬಾಕಿಯಿರುವಂತೆಯೆ 2 ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ಮುಟ್ಟಿತು.

ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಜಯ ದಾಖಲಿಸಿದೆ. ಈ ಮೊದಲು ತನ್ನ ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್‌ ಹಾಗೂ ನೆದರ್‌ಲ್ಯಾಂಡ್ಸ್‌ ತಂಡಗಳನ್ನು ಸೋಲಿಸಿತ್ತು.

Advertisements

ಸ್ಫೋಟಕ ಆಟಗಾರ ಡೇರಿಲ್‌ ಮಿಚೆಲ್ 67 ಚೆಂಡುಗಳಲ್ಲಿ 4 ಸಿಕ್ಸರ್‌ ಹಾಗೂ 6 ಬೌಂಡರಿಯೊಂದಿಗೆ ಅಜೇಯ 89 ರನ್‌ ಗಳಿಸಿದರೆ, ನಾಯಕ ಕೇನ್‌ ವಿಲಿಯಮ್ಸ್‌ನ್ 107 ಎಸೆತಗಳಲ್ಲಿ 8 ಬೌಂಡರಿ ಹಾಗೂ 1 ಸಿಕ್ಸರ್‌ನೊಂದಿಗೆ 78 ರನ್‌ ಗಳಿಸಿ ಗೆಲುವಿನ ರೂವಾರಿಗಳಾದರು. ಆರಂಭಿಕ ಆಟಗಾರ ಡೆವೊನ್ ಕಾನ್ವೇ ಕೂಡ 45 ರನ್‌ ಕಲೆ ಹಾಕಿದರು.

ಈ ಸುದ್ದಿ ಓದಿದ್ದೀರಾ? ಒಲಿಂಪಿಕ್ಸ್‌: ಟಿ20 ಸೇರ್ಪಡೆಗೆ ಅನುಮತಿ ನೀಡಿದ ಐಒಸಿ

ಈ ಮೊದಲು ಟಾಸ್‌ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್‌ ವಿಲಿಯಮ್ಸ್‌ನ್ ಬಾಂಗ್ಲಾದೇಶ ತಂಡವನ್ನು ಬ್ಯಾಟಿಂಗ್‌ ಆಹ್ವಾನಿಸಿದರು.

ಮೊದಲು ಬ್ಯಾಟಿಂಗ್‌ ಮಾಡಿದ ಶಕೀಬ್‌ ಅಲ್‌ ಹಸನ್‌ ಪಡೆ, 9 ವಿಕೆಟ್‌ ಕಳೆದುಕೊಂಡು 245 ರನ್‌ ಕಲೆ ಹಾಕಿತು.

ನಾಯಕ ಶಕೀಬ್‌ ಅಲ್‌ ಹಸನ್‌ (40), ಮುಶ್ಫಿಕರ್‌ ರೆಹಮಾನ್ (66) ಹಾಗೂ ಮಹಮದುಲ್ಲಾ(41) ರನ್‌ ಗಳಿಸುವುದರೊಂದಿಗೆ ಬಾಂಗ್ಲಾದೇಶ ಗೌರಾವಾನ್ವಿತ ಮೊತ್ತ ಕಲೆ ಹಾಕಲು ಕಾರಣರಾದರು.

ನ್ಯೂಜಿಲೆಂಡ್‌ ಪರ ಲಾಕಿ ಫರ್ಗ್ಯುಸನ್‌ 3 ವಿಕೆಟ್‌ ಪಡೆದರೆ, ಟ್ರೆಂಟ್‌ ಬೋಲ್ಟ್‌ ಮತ್ತು ಮ್ಯಾಟ್‌ ಹೆನ್ರಿ ತಲಾ 2 ವಿಕೆಟ್‌ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X