ಬೀದರ್‌ | ವಾರದೊಳಗೆ ಮನರೇಗಾ ಕೂಲಿ ಹಣ ಪಾವತಿಸಲು ಬಿಎಸ್‌ಪಿ ಆಗ್ರಹ

Date:

Advertisements

ಬಸವಕಲ್ಯಾಣ ತಾಲೂಕಿನಲ್ಲಿ ಮನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸಿದ ಕಾರ್ಮಿಕರ ಕೂಲಿ ಹಣ ಹಾಗೂ ಬಾಕಿ ಉಳಿದ ಸಾಮಗ್ರಿ ಬಿಲ್ ಕೂಡಲೇ ಬಿಡುಗಡೆ ಮಾಡುವಂತೆ ಬಹುಜನ ಸಮಾಜ ಪಕ್ಷ ತಾಲೂಕು ಘಟಕ ಒತ್ತಾಯಿಸಿದೆ.

ಈ ಸಂಬಂಧ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಾಲೂಕು ಪಂಚಾಯಿತಿ ಇಒ ಮಹಾದೇವ ಬಾಬಳಗಿ ಅವರಿಗೆ ಸಲ್ಲಿಸಿದರು.

“ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸಿ ಎರಡು ತಿಂಗಳು ಕಳೆದರೂ ಹಣ ನೀಡಿಲ್ಲ ಹಾಗೂ ಎರಡು ವರ್ಷದಿಂದ ಸಾಮಗ್ರಿ ಬಿಲ್ ಸಹ ನೀಡಿಲ್ಲ. ಆದರೆ, ಬೀದರ ಹಾಗೂ ಭಾಲ್ಕಿ ತಾಲೂಕಿನಲ್ಲಿ ಯಾವುದೇ ತೊಂದರೆಯಾಗದಂತೆ ಮನರೇಗಾ ಕೂಲಿ ಹಣ ಹಾಗೂ ಸಾಮಗ್ರಿ ಬಿಲ್ ಪಾವತಿಸಿದ್ದಾರೆ. ಇನ್ನು ಮುಂದೆ ವಿಳಂಬ ಮಾಡದೆ ತಾಲೂಕಿನ ಮನರೇಗಾ ಬಾಕಿ ಹಣ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

Advertisements

“ರಾಜ್ಯದಲ್ಲಿ ಹಿಂದಿನ ಸರಕಾರದ ಅವಧಿಯಲ್ಲಿ ಮನರೇಗಾ ದಿನಗೂಲಿ ಕಾರ್ಮಿಕರಿಗೆ ಎಮ್‌ಐಎಸ್ ಆದ ವಾರದೊಳಗೆ ಹಣ ಜಮೆ ಆಗುತ್ತಿತ್ತು. ಆದರೆ ಹೊಸ ಸರ್ಕಾರ ಬಂದ ನಂತರ ಎರಡು ತಿಂಗಳಾದರೂ ಕೂಲಿ ಹಣ ಖಾತೆಗೆ ಜಮೆ ಆಗುತ್ತಿಲ್ಲ. ಇದರಿಂದ ದಿನಗೂಲಿ ಕಾರ್ಮಿಕರು ಹಾಗೂ ಸಾಮಗ್ರಿ ನೀಡಿದ ಏಜೆನ್ಸಿಗಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಒಂದು ವಾರದೊಳಗೆ ನರೇಗಾ ಯೋಜನೆಯ ಕಾರ್ಮಿಕರ ಬಾಕಿ ಬಿಲ್ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ತಾಲ್ಲೂಕು ಪಂಚಾಯಿತಿ ಕಛೇರಿ ಮುಂಭಾಗ ಧರಣಿ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರವೇನೋ ಬದಲಾಯಿತು, ಕೋಮುವಾದಿಗಳ ಅಟಾಟೋಪಗಳಿಗೆ  ಅಂಕುಶ ಯಾವಾಗ?

ಈ ಸಂದರ್ಭದಲ್ಲಿ ಬಿಎಸ್ಪಿಯ ತಾಲೂಕಾಧ್ಯಕ್ಷ ಶಂಕರ ಫುಲೆ, ಕಾರ್ಯದರ್ಶಿ ಮಾಹಾದೇವ ಗಾಯಕವಾಡ, ಜಿಲ್ಲಾ ಉಪಾಧ್ಯಕ್ಷ ಅಶೋಕ ಮಂಠಾಳಕರ್‌, ತಾಲ್ಲೂಕು ಉಪಾಧ್ಯಕ್ಷ ಸಚಿನ ಕಾಂಬಳೆ ಹಾಗೂ ಶಿವರಾಜ ಕಾಂಬಳೆ, ಅಶೋಕ ಶಿಂಧೆ, ದಿಲೀಪ ಕಾಂಬಳೆ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X