ಸುದೀಪ್‌ ಹಾಗೂ ನನ್ನದು ರಾಜಕೀಯ ಮೀರಿದ ಸಂಬಂಧ; ನನ್ನ ಪರ ಪ್ರಚಾರ ಮಾಡುತ್ತಾರೆ : ಸಿಎಂ

Date:

Advertisements
  • ಸುದೀಪ್ ಹಾಗೂ ನನ್ನದು ರಾಜಕೀಯ-ಪಕ್ಷ ಮೀರಿದ ಗೆಳೆತನ
  • ಬೊಮ್ಮಾಯಿ ಮಾಮ ಹಾಗೂ ನನ್ನ ಕೆಲ ಸ್ನೇಹಿತರ ಪರ ಪ್ರಚಾರ

ನಟ ಸುದೀಪ್‌ ಹಾಗೂ ನನ್ನದು ರಾಜಕೀಯವನ್ನೂ ಮೀರಿದ ಸಂಬಂಧ. ಆ ಹಿನ್ನೆಲೆಯಲ್ಲಿ ಅವರು ನನ್ನ ಪರ ಈ ಬಾರಿ ಚುನಾವಣೆಯಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ಮೀರಿದ ಗೆಳೆತನ ಸಂಬಂಧವೂ ಇರುತ್ತದೆ. ಇಂತಹದ್ದೇ ಬಾಂಧವ್ಯ ಕಿಚ್ಚ ಸುದೀಪ್‌ ಹಾಗೂ ನನ್ನ ನಡುವೆ ಇದೆ ಎಂದರು.

ನಾನು ಯಾರ ಪರ ಪ್ರಚಾರ ಮಾಡಲು ಹೇಳುತ್ತೇನೆಯೋ ಅವರ ಪರ ಪ್ರಚಾರ ಮಾಡುತ್ತಾರೆ. ಇದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ. ಇದು ಪೂರ್ಣ ಗೆಳೆತನದ ವಿಚಾರ ಎಂದು ಹೇಳಿದರು.

Advertisements

ನಟ ಸುದೀಪ್‌ ನಮ್ಮ ಪರ ಪ್ರಚಾರಕ್ಕೆ ಬಂದಿರುವುದು ಪಕ್ಷಕ್ಕೆ ಬಲ ತಂದಿದೆ. ಇದು ನಮಗೆ ಹೆಚ್ಚಿನ ಶಕ್ತಿ ನೀಡಿದೆ ಎಂದು ಬೊಮ್ಮಾಯಿ ತಿಳಿಸಿದರು.

ಬಳಿಕ ಮಾತನಾಡಿದ ನಟ ಸುದೀಪ್‌ ನಾನು ಬಿಜೆಪಿ ಸೇರುವುದಿಲ್ಲ, ಆದರೆ ಪಕ್ಷದಲ್ಲಿ ಗೆಳೆಯರಾಗಿರುವ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವೆ ಎಂದರು.

ನಾನು ಚಿತ್ರರಂಗಕ್ಕೆ ಅಡಿ ಇಡುವ ವೇಳೆ ಹಲವರ ಸಹಕಾರ ಪಡೆದಿರುವೆ. ಅವರೆಲ್ಲರ ಋಣ ತೀರಿಸುವ ಕಾರ್ಯ ಮಾಡುವೆ. ಅದಕ್ಕಾಗಿ ಈ ಬಾರಿ ಚುನಾವಣೆಯಲ್ಲಿ ನಾನು ನನ್ನ ಆತ್ಮೀಯರ ಪರ ಮತಯಾಚನೆ ಮಾಡುವೆ ಎಂದು ನಟ ಸುದೀಪ್ ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನನ್ನ ಮಾರ್ಗದರ್ಶಕರು. ಹೀಗಾಗಿ ನಾನು ನನ್ನ ಬೊಮ್ಮಾಯಿ ಮಾಮನನ್ನೂ ಒಳಗೊಂಡಂತೆ ಕೆಲ ಸ್ನೇಹಿತರ ಪರ ನಾನು ಪ್ರಚಾರ ಕೈಗೊಳ್ಳುವೆ ಎಂದು ಕಿಚ್ಚ ಸುದೀಪ್ ಹೇಳಿದರು.

ಸುದೀಪ್

ಈ ಸುದ್ದಿ ಓದಿದ್ದೀರಾ? : ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ: ಪ್ರಕಾಶ್‌ ರಾಜ್‌

ಬಳಿಕ ಮಾತನಾಡಿದ ಸಚಿವ ಸುಧಾಕರ್, ಸುದೀಪ್‌ ನಮ್ಮ ಗೆಳೆಯರು, ಅವರದ್ದೇ ವಿಚಾರ ಧಾರೆ ಮೇಲೆ ನಮ್ಮ ಪರ ಪ್ರಚಾರ ಮಾಡಲು ಬರುತ್ತಿದ್ದಾರೆ. ನಮಗದು ಖುಷಿಯ ವಿಚಾರ ಎಂದರು.

ನಟ ಸುದೀಪ್ ಜೊತೆಗೆ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಬೊಮ್ಮಾಯಿ, ಸಚಿವ ಆರ್ ಅಶೋಕ್, ಡಾ.ಸುಧಾಕರ್ ಉಪಸ್ಥಿತರಿದ್ದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X