ಕಲಬುರಗಿ | ಕೀಟನಾಶಕದಿಂದ ರೈತರು ಅಸ್ವಸ್ಥ; ನೆರವಿಗೆ ಎಐಕೆಕೆಎಂ ಆಗ್ರಹ

Date:

Advertisements

ಚಿತ್ತಾಪುರ ತಾಲೂಕಿನ ಗುರೂಜಿ ನಾಯಕ ತಾಂಡಾದಲ್ಲಿ ಬೆಳೆಗೆ ಕ್ರಿಮಿನಾಶಕ ಸಿಂಪಡಿಸುವಾಗ ನಾಲ್ವರು ರೈತರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಅವರ ಚಿಕಿತ್ಸೆ ಭಾರೀ ಹಣ ಕರ್ಚಾಗುತ್ತಿದ್ದು, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಅವರಿಗೆ ಆರ್ಥಿಕ ನೆರವು ನೀಡಬೇಕೆಂದು ಎಐಕೆಕೆಎಂ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಎಸ್‌.ಬಿ ಮಹೇಶ್ ಹೇಳಿದ್ದಾರೆ.

“ತಾಂಡಾದ ರೈತ ಸುನೀಲ್ ಜಾಧವ್ (32), ಅನೀಲ್ ಜಾಧವ್ (26), ಕುಮಾರ್ ಜಾಧವ (24) ಹಾಗೂ ಖೇಮು ರಾಠೋಡ್ (35) ಅವರು ಕೀಟನಾಶಕ ಸಿಂಪಡಿಸುವ ವೇಳೆಯಲ್ಲಿ ಕೀಟನಾಶಕ ದೇಹ ಸೇರಿದ್ದು ತೀವ್ರ ಅಸ್ವಸ್ಥರಾಗಿದ್ದಾರೆ. ಕಳೆದ ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಸಂಸದರು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ಮಾಡಿದ್ದಾರೆ. ಆದರೆ, ಅವರಿಗೆ ಸಹಾಯ ಮಾಡುವುದಾಗಿ ಹೇಳಿಲ್ಲ. ಅವರಿಗೆ ಸಹಕಾರ ನೀಡದೇ ಇರುವುದು ದುರಂತ ಸಂಗತಿ” ಎಂದು ಮಹೇಶ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ರೈತರ ಚಿಕಿತ್ಸೆಗೆ ದಿನನಿತ್ಯ 2 ಲಕ್ಷ ರೂ. ವೆಚ್ಚವಾಗುತ್ತಿದೆ. ರೋಗಿಗಳು ಇನ್ನೂ ಯಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಬಾರಿ ದರವನ್ನು ಕುಟುಂಬದವರು ಭರಿಸಲು ಪಡಬಾರದ ಕಷ್ಟ ಪಡುತ್ತಿದ್ದಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ಬಂದು ಕೇವಲ ಮಾತನಾಡಿ ಹೋದರು. ಅವರುಗೆ ಯಾವುದೇ ರೀತಿಯ ನೆರವು ನೀಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisements

“ಇನ್ನೂ ನೋವಿನ ವಿಷಯವೇನೆಂದರೆ ಈ ಭಾಗದ ಶಾಸಕರು ಸಂತ್ರಸ್ತ ಕುಟುಂಬವನ್ನು ಸಂಪರ್ಕಿಸಿಯೇ ಇಲ್ಲ. ಜವಬ್ದಾರಿ ಸ್ಥಾನದಲ್ಲಿರುವವರು ರೈತರ ಪರಿಸ್ಥಿತಿಯನ್ನು ಗಮನಿಸದೇ ಇರುವುದು ಖಂಡನೀಯ. ರೈತರ ತಾಯಂದಿರು ನೊಂದಿದ್ದಾರೆ. ಅವರಿಗೆ ಇಂತಹ ಸಂದರ್ಭದಲ್ಲಿ ಸರಿಯಾದ ಬೆಂಬಲ, ಸಹಕಾರ ಮತ್ತು ಸಹಾಯ ಸಿಗದೇ ಹೋದರೆ ಅವರ ಇಡೀ ಕುಟುಂಬವು ಸರ್ವಸ್ವವನ್ನು ಕಳೆದುಕೊಳ್ಳಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ರೈತರ ಚಿಕಿತ್ಸೆಯ ಜವಬ್ದಾರಿಯನ್ನು ಸರ್ಕಾರವೇ ತೆಗೆದುಕೊಳ್ಳಬೇಕು. ಜಿಲ್ಲಾಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಹತ್ತಿಗೆ ಔಷಧಿ ಸಿಂಪಡಿಸಲು ಬಳಸಲಾದ ಮೋನೋಕ್ರಾಟ್ ಕಂಪನಿಯಿಂದ ರೈತರ ಆಸ್ಪತ್ರೆಯ ಖರ್ಚನ್ನು ಕೊಡಿಸಬೇಕು. ಅವರ ಜೀವನಾಧಾರಕ್ಕೆ ಸೂಕ್ತವಾದ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X