ಬಿಜೆಪಿಯವರು ಆಧಾರ ರಹಿತವಾಗಿ ಆರೋಪ ಮಾಡುತ್ತಾರೆ: ಸಿಎಂ ಸಿದ್ದರಾಮಯ್ಯ

Date:

Advertisements
  • ತೆರಿಗೆ ಅಧಿಕಾರಿಗಳು ಅವರ ಕೆಲಸ ಮಾಡಿದ್ದಾರೆ: ಸಿಎಂ
  • ಬಿಜೆಪಿಯವರ ಪ್ರತಿಭಟನೆಯನ್ನು ಜನ ನಂಬುವುದಿಲ್ಲ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಮ್ಮ ಕೆಲಸ ಮಾಡಿದ್ದಾರೆ. ಎಲ್ಲೋ ಹಣ ಸಿಕ್ಕಿದೆ ಎಂದ ಮಾತ್ರಕ್ಕೆ ರಾಜಕೀಯವಾಗಿ ತಳಕು ಹಾಕುವುದು ಸರಿಯಲ್ಲ. ಬಿಜೆಪಿಯವರು ಆಧಾರ ರಹಿತವಾಗಿ ಸುಮ್ಮನೇ ಆರೋಪ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದರು.

ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿಯವರ ಪ್ರತಿಭಟನೆಯನ್ನು ಜನ ನಂಬುವುದಿಲ್ಲ. ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ” ಎಂದರು.

ಕಾಂಗ್ರೆಸ್‌ ಗುತ್ತಿಗೆದಾರರು ಎಂದು ಬಿಜೆಪಿಯವರು ಆರೋಪಿಸುತ್ತಿದ್ದಾರಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಗುತ್ತಿಗೆದಾರರಲ್ಲಿ ಕಾಂಗ್ರೆಸ್‌ ಗುತ್ತಿಗೆದಾರರು, ಬಿಜೆಪಿ ಗುತ್ತಿಗೆದಾರರು ಇರುತ್ತಾರಾ? ಹಾಗಾದರೆ ನಾನು ಹಣ ಸಿಕ್ಕವರನ್ನು ಬಿಜೆಪಿ ಗುತ್ತಿಗೆದಾರ ಎನ್ನುತ್ತೇನೆ. ಯಾವುದಾದರೂ ಆಧಾರ ಇದೆಯಾ” ಎಂದು ಪ್ರಶ್ನಿಸಿದರು.

Advertisements

ತನಿಖೆ ಮಾಡಿಸುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿ, “ಯಾಕ್ರಿ ಬೇಕು ತನಿಖೆ? ತೆರಿಗೆ ಇಲಾಖೆ ದಾಳಿ ಮಾಡಿದೆ. ಅವರು ತನಿಖೆ ಮಾಡುತ್ತಾರೆ. ಸರ್ಕಾರ ಯಾಕೆ ಇದರಲ್ಲಿ ಮೂಗು ತೂರಿಸಬೇಕು? ಪಂಚರಾಜ್ಯಗಳ ಚುನಾವಣೆಗೂ ನಮಗೂ ಸಂಬಂಧವಿಲ್ಲ. ಸಿ ಟಿ ರವಿ ಬರೀ ಸುಳ್ಳು ಹೇಳುತ್ತಾನೆ. ಅವನಿಗೆ ಪ್ರತಿಕ್ರಿಯೆ ಕೊಡಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ರಾಜೀವ ತಾರಾನಾಥ್ ‘ಕಮಿಷನ್’ ಪ್ರಕರಣ; ಕನ್ನಡ-ಸಂಸ್ಕೃತಿ ಇಲಾಖೆ ಸರ್ಜರಿಗೆ ಸಕಾಲ

“ಐದು ವರ್ಷ ಬಿಜೆಪಿ ಸರ್ಕಾರ ವಿದ್ಯುತ್‌ ಉತ್ಪಾದನೆ ಮಾಡಲಿಲ್ಲ. ಈಗ ಮಳೆ ಇಲ್ಲ. ವಿದ್ಯುತ್‌ ಕೊರತೆಯಾಗಿದೆ. 16 ಸಾವಿರ ಮೆಗಾ ವ್ಯಾಟ್‌ ವಿದ್ಯುತ್‌ ಖರ್ಚು ಆಗುತ್ತಿದೆ. ರೈತರಿಗೆ 5 ತಾಸು ವಿದ್ಯುತ್‌ ಕೊಡಬೇಕು ಎಂದು ಹೇಳಿದ್ದೇನೆ. ಹಾಗೆಯೇ ವಿದ್ಯುತ್‌ ಕೊಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದರು.

“ನಾಲ್ಕು ತಾಸು ವಿದ್ಯುತ್ ಕೊಡಿ ‌ರೈತರೇ ಆಗ್ರಹಿಸಿದ್ದಾರೆ. ನಾವು ಐದು ತಾಸು ಕೊಡುತ್ತೇವೆ. 2000 ಮೆಗಾ ವ್ಯಾಟ್‌ ವಿದ್ಯುತ್‌ ಕೊರತೆ ಇದೆ. ಮೇವಿನ ಕೊರತೆ ರಾಜ್ಯದಲ್ಲಿ ಇಲ್ಲ. ಮೇವು ಬೆಳೆಯಬೇಕು ಮತ್ತು ಮೇವು ಶೇಖರಣೆ ಮಾಡಲು ಸೂಚಿಸಿದ್ದೇವೆ. 30 ಸಾವಿರಕ್ಕೂ ಹೆಚ್ಚು ಕೋಟಿ ಹಾನಿಯಾಗಿದೆ. ಕೇಂದ್ರದ ಬಳಿ ಪರಿಹಾರಕ್ಕೆ ಮನವಿ ಮಾಡಿದ್ದೇನೆ” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X