ಮೈಸೂರು ದಸರಾ | ಪ್ರವಾಸಿ ವಾಹನಗಳಿಗಿಲ್ಲ ತೆರಿಗೆ ವಿನಾಯಿತಿ

Date:

Advertisements

ದಸರಾ ಮಹೋತ್ಸವಕ್ಕೆ ಮೈಸೂರಿಗೆ ಪ್ರವೇಶಿಸುವ ಪ್ರವಾಸಿ ವಾಹನಗಳಿಗೆ ರಾಜ್ಯ ಸರ್ಕಾರ ಈ ಬಾರಿ ತೆರಿಗೆ ವಿನಾಯಿತಿ ಘೋಷಿಸಿಲ್ಲ. ರಾಜ್ಯದ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಬೊಕ್ಕಸಕ್ಕೆ ಈಗಾಗಲೇ ಹೆಚ್ಚಿನ ಹೊರೆಯಾಗಿರುವುದರಿಂದ ತೆರಿಗೆ ವಿನಾಯಿತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆಯ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

“ತೆರಿಗೆ ವಿನಾಯಿತಿ ನೀಡದಿರುವುದರಿಂದ ರಾಜ್ಯಕ್ಕೆ ಪ್ರವೇಶಿಸುವ ಪ್ರವಾಸಿ ವಾಹನಗಳ ಸಂಖ್ಯೆಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಫೆಡರೇಶನ್ ಆಫ್ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳು ತಿಳಿಸಿವೆ.

“ಗ್ಯಾರಂಟಿ ಯೋಜನೆಗಳನ್ನು ಪ್ರಾರಂಭಿಸಿದ ನಂತರ ರಾಜ್ಯ ಸರ್ಕಾರ ಆದಾಯ ಹೆಚ್ಚಿಸುವ ಗುರಿಯನ್ನು ಹೊಂದಿದೆ. ಆದರೆ ತೆರಿಗೆ ವಿನಾಯಿತಿ ನೀಡುವ ಮೂಲಕ ಪ್ರವಾಸಿಗರ ಒಳಹರಿವು ಹೆಚ್ಚಾಗುತ್ತದೆ. ಇದರಿಂದ ಪರೋಕ್ಷ ತೆರಿಗೆಗಳ ಮೂಲಕ ಆದಾಯ ಗಳಿಸಬಹುದು ಎಂಬುದನ್ನು ಅರಿತುಕೊಳ್ಳಲು ರಾಜ್ಯ ಸರ್ಕಾರ ವಿಫಲವಾಗಿದೆ” ಎಂದು ಆರೋಪಿಸಿದರು.

Advertisements

“ಪ್ರತಿ ವರ್ಷ ದಸರಾಗೆ ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳದಿಂದ ಸುಮಾರು 10,000 ಹಳದಿ ಬೋರ್ಡ್ ಕಾರುಗಳು, 3,000 ಮ್ಯಾಕ್ಸಿ ಕ್ಯಾಬ್‌ಗಳು ಮತ್ತು ಸುಮಾರು 1,000 ಬಸ್‌ಗಳು ಮೈಸೂರಿಗೆ ಬರುತ್ತವೆ. ಸಾವಿರಾರು ಪ್ರಯಾಣಿಕರು ಸಾಂಸ್ಕೃತಿಕ ನಗರಕ್ಕೆ ಬರುತ್ತಾರೆ. ಜತೆಗೆ ಹತ್ತಿರದ ಪ್ರವಾಸಿ ತಾಣಗಳ ಸುತ್ತಲೂ ಹೋಗುತ್ತಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ದಸರಾ ಹಬ್ಬದ ಸಮಯದಲ್ಲಿ 15 ದಿನಗಳ ಅವಧಿಗೆ ತೆರಿಗೆ ವಿನಾಯಿತಿ ನೀಡುತ್ತಿತ್ತು. ಆದರೆ ಈ ವರ್ಷ ವಿನಾಯಿತಿ ನೀಡದಿರಲು ನಿರ್ಧರಿಸಿದೆ. ಇದರಿಂದ ಗ್ಯಾರಂಟಿ ಯೋಜನೆಗಳನ್ನು ನಡೆಸಲು ಸರ್ಕಾರ ಭಾರೀ ಆರ್ಥಿಕ ಹೊರೆಯನ್ನು ಅನುಭವಿಸುತ್ತಿರುವುದು ಕಂಡುಬರುತ್ತಿದೆ” ಎಂದು ಒಕ್ಕೂಟದ ನಾಮನಿರ್ದೇಶಿತ ಅಧ್ಯಕ್ಷ ನಟರಾಜ್ ಶರ್ಮಾ ಅಭಿಪ್ರಾಯ ವ್ಯಕ್ತಪಡಿಸಿದರು.

“ಈ ವರ್ಷ ತೆರಿಗೆ ವಿನಾಯಿತಿ ನೀಡುವ ಮೂಲಕ ಉಂಟಾಗುವ ನಷ್ಟವನ್ನು ಮಾತ್ರ ಸರ್ಕಾರ ಲೆಕ್ಕಹಾಕಿದೆ. ಆದರೆ ಪ್ರವಾಸಿಗರ ಮೂಲಕ ಪಡೆಯಬಹುದಾದ ನೇರ ಮತ್ತು ಪರೋಕ್ಷ ತೆರಿಗೆಗಳನ್ನು ಹಾಗೂ ತಮ್ಮ ಆದಾಯಕ್ಕಾಗಿ ಪ್ರವಾಸಿಗರನ್ನು ಮಾತ್ರ ಅವಲಂಬಿಸಿರುವ ಜನರ ಜೀವನೋಪಾಯವನ್ನು ಪರಿಗಣಿಸಿಲ್ಲ” ಎಂದು ಶರ್ಮಾ ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಮಹಿಷಾ ದಸರಾ ಅಸಂಖ್ಯಾತರಿಗೆ ಶಕ್ತಿ ತುಂಬಿದೆ: ಪಿ.ಎನ್. ರಾಮಯ್ಯ

“55 ಆಸನಗಳಿರುವ ಇತರ ರಾಜ್ಯದ ಬಸ್‌ ಸುಮಾರು 18,000 ರೂ.ಗಳನ್ನು ತೆರಿಗೆಯಾಗಿ ಪಾವತಿಸುತ್ತದೆ. ಜತೆಗೆ ವಾಹನದ ಪ್ರಕಾರ ಮತ್ತು ಆಸನ ಸಾಮರ್ಥ್ಯದ ಮೇಲೆ ತೆರಿಗೆ ಬದಲಾಗುತ್ತದೆ” ಎಂದು ತಿಳಿಸಿದರು.

“ಪ್ರತಿ ವರ್ಷ ದಸರಾ ಉತ್ಸವ ಪ್ರಾರಂಭವಾಗುವ ಒಂದು ದಿನ ಮೊದಲು ವಾಹನಗಳ ತೆರಿಗೆ ವಿನಾಯಿತಿಯನ್ನು ಘೋಷಿಸುತ್ತಿದ್ದರು. ಈ ಬಾರಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆಯದ ಕಾರಣ ತೆರಿಗೆ ವಿನಾಯಿತಿಯನ್ನು ಘೋಷಿಸಿಲ್ಲ” ಎಂದು ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X