ಖರ್ಗೆ, ವೇಣು, ಡಿಕೆ ರಹಸ್ಯ ಮಾತುಕತೆ : ಯಾರಿಗೆ ಏನು ಉತ್ತರ ಕೊಡಬೇಕೋ ಖಂಡಿತ ಕೊಡುವೆ ಎಂದ ಡಿಕೆ

Date:

Advertisements
  • ಖರ್ಗೆ ಅವರ ಸದಾಶಿವನಗರ ನಿವಾಸಕ್ಕೆ ಬೆಳಗ್ಗೆ ತೆರಳಿ ಸಮಾಲೋಚನೆ
  • ಐಟಿ ದಾಳಿ, ವಿರೋಧ ಪಕ್ಷಗಳ ಕಮಿಷನ್ ಆರೋಪ ಕುರಿತು ಚರ್ಚೆ!

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆದ  ಡಿಸಿಎಂ ಡಿಕೆ ಶಿವಕುಮಾರ್ ಅವರು ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಬೆಳಗ್ಗೆ ತೆರಳಿ ಸಮಾಲೋಚನೆ ನಡೆಸಿದ್ದಾರೆ.

ಭಾನುವಾರ ತಡರಾತ್ರಿ ಬೆಂಗಳೂರಿಗೆ ಬಂದಿರುವ ವೇಣುಗೋಪಾಲ್ ಅವರು ಬೆಳಗಿನ ಉಪಾಹಾರ ನೆಪದಲ್ಲಿ ಎಐಸಿಸಿ ಅಧ್ಯಕ್ಷರ ಮನೆಗೆ ತೆರಳಿ ರಾಜಕೀಯ ಚರ್ಚೆ ನಡೆಸಿದರು. ಈ ಚರ್ಚೆಯಲ್ಲಿ ರಾಜ್ಯದಲ್ಲಿ ಆಗಿರುವ ಬಿಜೆಪಿ- ಜೆಡಿಎಸ್ ಮೈತ್ರಿಯ ಪರಿಣಾಮಗಳು ಹಾಗೂ ಪಂಚರಾಜ್ಯಗಳ ಚುನಾವಣೆ ಸುತ್ತ ಚರ್ಚೆ ನಡೆದಿದೆ ಎನ್ನಲಾಗಿದೆ.

ರಾಜಕೀಯವಾಗಿ ಈ ಮೂವರೂ ನಾಯಕರು ಕೆಲಹೊತ್ತು ರಹಸ್ಯವಾಗಿ ಮಾತುಕತೆ ನಡೆಸಿರುವುದು ಈಗ ಕುತೂಹಲ ಮೂಡಿಸಿದೆ. ಮೂವರು ನಾಯಕರು ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಐಟಿ ದಾಳಿ, ವಿರೋಧ ಪಕ್ಷಗಳ ಕಮಿಷನ್ ಆರೋಪ ಸೇರಿದಂತೆ ಹಲವು ವಿಚಾರಗಳ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ರಾಜೀವ ತಾರಾನಾಥ್ ‘ಕಮಿಷನ್’ ಪ್ರಕರಣ; ಕನ್ನಡ-ಸಂಸ್ಕೃತಿ ಇಲಾಖೆ ಸರ್ಜರಿಗೆ ಸಕಾಲ

ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, “ಯಾರಿಗೆ ಏನು ಉತ್ತರ ಕೊಡಬೇಕೋ ಖಂಡಿತ ಕೊಡುವೆ. ಹೈ ವೋಲ್ಟೇಜ್‌ಗೂ ಕೊಡ್ತೀನಿ, ಲೋ ವೋಲ್ಟೇಜ್‌ಗೂ ಕೊಡ್ತೀನಿ. ನಕಲಿಗಳಿಗೂ ಕೊಡ್ತೀನಿ, ಲೂಟಿಗಳಿಗೂ ಕೊಡ್ತೀನಿ, ಎಲ್ಲರಿಗೂ ಕೊಡ್ತೀನಿ. ಸ್ವಲ್ಪ ಕಾಯಿರಿ” ಎಂದು ಸೂಚ್ಯವಾಗಿ ಹೇಳಿದರು.

ಬಿಜೆಪಿಯವರು ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, “ಬಿಜೆಪಿಯವರು ಪ್ರತಿಭಟನೆ ಮಾಡಲಿ. ಅವರು ಪ್ರತಿಭಟನೆ ಮಾಡಿದರೆ ಮಾತ್ರ ಅವರ ಲೂಟಿ ಜನರಿಗೆ ತಿಳಿಯುವುದು. ಎಲ್ಲ ಬಿಚ್ಚಿಡುತ್ತೇನೆ” ಎಂದು ಹೇಳಿ ವೇಣುಗೋಪಾಲ್ ಜೊತೆ ಮುಂದೆ ಸಾಗಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X