ಬೆಂ.ಗ್ರಾ | ಮದ್ಯ ವ್ಯಸನಿಗಳ ತಾಣವಾದ ಕಾಲೇಜು ಮೈದಾನ

Date:

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನ ಮದ್ಯ ವ್ಯಸನಿಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕಾಲೇಜಿನ ಮೈದಾನಕ್ಕೆ ಸೂಕ್ತ ಕಾವಲು ಹಾಗೂ ತಡೆಗೋಡೆ ಇಲ್ಲದ ಕಾರಣ ಮದ್ಯ ವ್ಯಸನಿಗಳು ರಾತ್ರಿ‌ಯಾದರೆ ಇಲ್ಲಿಯೇ ಮದ್ಯಪಾನ ಕೂಟ ನಡೆಸುತ್ತಾರೆ. ಅಲ್ಲದೆ ಮದ್ಯ ಸೇವಿಸಿ, ಬಾಟಲಿಗಳನ್ನು ಮೈದಾನದಲ್ಲಿಯೇ ಬಿಸಾಡಿ ಹೋಗಿರುತ್ತಾರೆ. ಇಲ್ಲವೇ ಒಡೆದು ಹಾಕಿರುತ್ತಾರೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಕಾಲೇಜು ಮೈದಾನದಲ್ಲಿ ವಾಯುವಿಹಾರ ಮಾಡುವವರ ಕಾಲಿಗೆ ಗಾಜು ಚುಚ್ಚಿಕೊಂಡು ಗಾಯವಾಗಿತ್ತು. ಮದ್ಯ ವ್ಯಸನಿಗಳ ಕಾಟದಿಂದ ಮಹಿಳೆಯರು, ಹಿರಿಯರು ಇಲ್ಲಿ ಸಂಜೆ ವೇಳೆ ವಾಯುವಿಹಾರಕ್ಕೆ ಬರುವುದನ್ನೇ ನಿಲ್ಲಿಸಿದ್ದಾರೆ” ಎಂದು ದೂರಿದ್ದಾರೆ.

“ಕಾಲೇಜಿನ ಮೈದಾನ ಸ್ವಚ್ಛತೆ ಪೌರಕಾರ್ಮಿಕರಿಗೆ ಸವಾಲಾಗಿದ್ದು, ನಿತ್ಯ ಬಾಟಲಿ ಚೂರುಗಳನ್ನು ಎತ್ತುವ ಪೌರಕಾರ್ಮಿರಿಗೆ ಗಾಜು ಚುಚ್ಚಿಕೊಂಡು ಗಾಯಗೊಂಡಿದ್ದಾರೆ. ಹಾಗಾಗಿ ಮೈದಾನದ ಸುತ್ತಲೂ ವಿದ್ಯುತ್ ದೀಪ ಅಳವಡಿಸಬಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವವರ ಮೇಲೆ ಪ್ರಕರಣ ದಾಖಲಿಸಬೇಕು. ಸಂಜೆ 7 ಗಂಟೆಯ ನಂತರ ಇಲ್ಲಿಗೆ ಬೀಟ್ ವ್ಯವಸ್ಥೆ ಹೆಚ್ಚಿಸಬೇಕು” ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

“ಪಟ್ಟಣದಲ್ಲಿರುವ ಏಕೈಕ ಮೈದಾನ ಇದಾಗಿದೆ. ಈ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳನ್ನೂ ಆಚರಿಸಲಾಗುತ್ತದೆ. ನಮ್ಮ ಕಾರ್ಮಿಕರು ಸ್ವಚ್ಚತೆ ಮಾಡುವಾಗ ಹಲವರು ಗಾಯಗೊಂಡಿರುವ ಉದಾಹರಣೆಗಳೂ ಇವೆ. ಮೈದಾನಕ್ಕೆ ವಿದ್ಯುತ್ ದೀಪಗಳನ್ನು ಅಳವಡಿಸುವ ವಿಚಾರವನ್ನು ಸಭೆಯಲ್ಲಿ ಮಂಡನೆ ಮಾಡಿ ಅನುದಾನ ಕ್ರೋಢೀಕರಣ ಮಾಡಿಕೊಂಡು ಕ್ರಮಕೈಗೊಳ್ಳಲಾಗುತ್ತದೆ” ಪುರಸಭೆ ಮುಖ್ಯಾಧಿಕಾರಿ ಸಂತೋಷ್ ಹೇಳಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X