ಯಾವುದೇ ಸಂದೇಶ ಕೊಡಲು ದುಬೈ ಪ್ರವಾಸ ಹೊರಟಿಲ್ಲ: ಸತೀಶ್‌ ಜಾರಕಿಹೊಳಿ

Date:

Advertisements
  • ‘ಐಟಿ‌ ದಾಳಿಗೆ ಒಳಗಾದವರು ಮಂತ್ರಿಯೂ ಅಲ್ಲ,‌ ಶಾಸಕರೂ ಅಲ್ಲ’
  • ‘ಬಿಜೆಪಿಯವರು ಮಾಡುವ ಆರೋಪವನ್ನು ತಾವು ಸಾಬೀತು ಮಾಡಲಿ’

ಕಾಂಗ್ರೆಸ್‌ಗೂ ಐಟಿ ದಾಳಿಗೆ ಒಳಗಾದವರಿಗೂ ಯಾವುದೇ ನೇರ ಸಂಪರ್ಕ ಇಲ್ಲ. ಐಟಿ‌ ದಾಳಿಗೆ ಒಳಗಾದವರು ಮಂತ್ರಿಯೂ ಅಲ್ಲ,‌ ಶಾಸಕರೂ ಅಲ್ಲ. ಕಲೆಕ್ಷನ್ ಮಾಡಿ ಎಂದು ಹೈಕಮಾಂಡ್ ನಮಗೆ ಯಾವುದೇ ಸೂಚನೆ ಕೊಟ್ಟಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿಯವರು ಮಾಡುವ ಆರೋಪವನ್ನು ತಾವು ಸಾಬೀತು ಮಾಡಲಿ. ಐಟಿ ಇಲಾಖೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ಐಟಿ ಇಲಾಖೆ ರಾಜ್ಯದ್ದಲ್ಲ” ಎಂದರು.

“ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ದುಡ್ಡು ಬಹಳಷ್ಟಿದೆ. ಎಕರೆಗೆ 10-20-40 ಕೋಟಿ ಇದೆ. ಈಗಾಗಲೇ ಐಟಿ ದಾಳಿಗೆ ಒಳಗಾದವರು ಆ ದುಡ್ಡು ನಮ್ಮದೇ ಅಂತ ಒಪ್ಪಿಕೊಂಡಿದ್ದಾರೆ. ಆರೋಪ ಬಂದ ತಕ್ಷಣ ಉತ್ತರ ಕೊಡಬೇಕಾಗಿಲ್ಲ” ಎಂದು ಹೇಳಿದರು.

Advertisements

“ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಆರೋಪ ಮಾಡುತ್ತಾರೆ. ಈ ಹಿಂದೆ ಡಿಕೆ ರವಿ ಪ್ರಕರಣ ಏನಾಯ್ತು? ಗಣಪತಿ ಕೇಸ್ ಏನಾಯ್ತು? ಪರೇಶ್ ಮೆಸ್ತಾ ಕೇಸ್ ಏನಾಯ್ತು? ಒಂದು ವರ್ಷ ಆ ಎಲ್ಲ ವಿಷಯ ಓಡಿಸಿದ್ರು. ಸಿಬಿಐ ತನಿಖೆ ಆದಮೇಲೆ ವ್ಯತಿರಿಕ್ತವಾದ ರಿಪೋರ್ಟ್ ಬಂತು” ಎಂದರು.

“ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆ.ಸಿ ವೇಣುಗೋಪಾಲ್ ರಾಜ್ಯ ಪ್ರವಾಸದ ಹಿಂದೆ ಬೇರೆ ಯಾವ ಉದ್ದೇಶ ಇಲ್ಲ. ಮಂಡಳಿ, ಬೋರ್ಡ್ ಹಾಗೂ ಕಾರ್ಪೊರೇಷನ್ ಆಯ್ಕೆ ಕುರಿತು ಅವರು ಬಂದಿದ್ದಾರೆ.‌ ಆ ಬಗ್ಗೆ ಸಭೆ ಇತ್ತು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ವ್ಯಾಖ್ಯಾನ ಬದಲಿಸಿದ ಕಾಂಚಾಣ

ಸಿಎಂ ವಿರುದ್ದ ‘ಕಲೆಕ್ಷನ್ ಮಾಸ್ಟರ್’ ಎಂದು ಬಿಜೆಪಿ ಪೋಸ್ಟರ್ ಹಾಕಿದೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಈ ಹಿಂದೆ ಪೋಸ್ಟರ್ ನಾವು ಮಾಡಿದ್ದೆವು. ಈಗ ಬಿಜೆಪಿಯವರೂ ಮಾಡಿದ್ದಾರೆ.‌ ಇದಕ್ಕೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ” ಎಂದರು.

ಕಾಂಗ್ರೆಸ್ಸಿನ ಸುಮಾರು 20 ಶಾಸಕರೊಂದಿಗೆ ಅವರು ದುಬೈ ಪ್ರವಾಸಕ್ಕೆ ಹೊರಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿ, “ಚಿತ್ರದುರ್ಗ, ಬಾಗಲಕೋಟೆ, ಧಾರವಾಡ, ಬೆಳಗಾವಿ ವಲಯದ ಶಾಸಕರೊಂದಿಗೆ ಪ್ರವಾಸ ಹೊರಟಿದ್ದೇವೆ. ತಾವು ಯಾವುದೇ ಸಂದೇಶ ಕೊಡಲು ದುಬೈ ಪ್ರವಾಸ ಹೊರಟಿಲ್ಲ” ಎಂದು ಇದೇ ವೇಳೆ ಸತೀಶ್ ಜಾರಕಿಹೊಳಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X