ಪ್ರಶ್ನೆಗೆ ಲಂಚ: ಸಿಬಿಐಗೆ ಸ್ವಾಗತ ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

Date:

Advertisements

ತಮ್ಮ ವಿರುದ್ಧ ಕೇಳಿಬಂದಿರುವ ಪ್ರಶ್ನೆಗಾಗಿ ಲಂಚ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಿತಿ ಅಥವಾ ಸಿಬಿಐ ವಿಚಾರಣೆಗೆ ತಾವು ಸಿದ್ಧ ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹೇಳಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮಾಡಿರುವ ಗಂಭೀರ ಆರೋಪವನ್ನು ಟಿಎಂಸಿ ಸಂಸದೆ ನಿರಾಕರಿಸಿ ಈ ಬಗ್ಗೆ ಟ್ವಿಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಮಹುವಾ ಮೊಯಿತ್ರಾ, ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಿಬಿಐ ತನಿಖೆಗೂ ತಾವು ಸಿದ್ಧ. ಇದೊಂದು ಸುಳ್ಳು ಆರೋಪ ಎಂದು ಅವರು ಹೇಳಿದ್ದಾರೆ.

“ನಕಲಿ ಪದವೀಧರ ಮತ್ತು ಇತರ ಬಿಜೆಪಿ ದಿಗ್ಗಜರ ವಿರುದ್ಧ ಬಾಕಿ ಉಳಿದಿರುವ ಸಾಂವಿಧಾನಿಕ ಸವಲತ್ತುಗಳ ಉಲ್ಲಂಘನೆ ಪ್ರಕರಣವನ್ನು ಮೊದಲು ವಿಚಾರಣೆ ನಡೆಸಲಿ. ಬಳಿಕ ಸ್ಪೀಕರ್ ಅವರು ನನ್ನ ವಿರುದ್ಧದ ಆರೋಪವನ್ನು ವಿಚಾರಿಸಲಿ. ಜೊತೆಗೆ ಅದಾನಿ ಹಗರಣದಲ್ಲಿ ಇಡಿ ಮತ್ತು ಇತರ ತನಿಖಾ ಸಂಸ್ಥೆಗಳು ಎಫ್‌ಐಆರ್ ದಾಖಲಿಸಲು ಕಾಯುತ್ತಿದ್ದೇನೆ” ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಪ್ರಧಾನಿಗೆ ಮಣಿಪುರಕ್ಕಿಂತ ಇಸ್ರೇಲ್ –ಹಮಸ್ ಯುದ್ಧದಲ್ಲಿ ಹೆಚ್ಚು ಆಸಕ್ತಿ: ರಾಹುಲ್ ಗಾಂಧಿ ವಾಗ್ದಾಳಿ

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು ಮಾತ್ರವಲ್ಲದೇ ಈ ಸಂಬಂಧ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಈ ಆರೋಪ ಮಾಡಿದ್ದು, ಮಹುವಾ ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಹಣ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು ಮತ್ತು ತಕ್ಷಣದಿಂದಲೇ ಅವರನ್ನು ಅಮಾನತಿನಲ್ಲಿಡಬೇಕು ಎಂದು ಆಗ್ರಹಿಸಿದ್ದಾರೆ.

ಟಿಎಂಸಿ ಸಂಸದೆ ಮೊಯಿತ್ರಾ ಅವರು ಸದನದಲ್ಲಿ 61 ಪ್ರಶ್ನೆಗಳ ಪೈಕಿ 50 ಪ್ರಶ್ನೆಗಳನ್ನು ಉದ್ಯಮಿಯೊಬ್ಬರ ಕಂಪನಿಯ ಪರವಾಗಿಯೇ ಕೇಳಿದ್ದಾರೆ. ಇದಕ್ಕಾಗಿ ಅವರು ಲಂಚದ ರೂಪದಲ್ಲಿ ಹಣ ಮತ್ತು ಉಡುಗೊರೆಗಳನ್ನು ಪಡೆದುಕೊಂಡಿದ್ದಾರೆ ಎಂದು ಕೆಲ ದಾಖಲೆಗಳನ್ನೂ ಸಲ್ಲಿಸಿದ್ದಾರೆ.

ಈ ಪಿತೂರಿ ಇಲ್ಲಿಗೆ ಕೊನೆಗೊಳ್ಳುವುದಿಲ್ಲ ಎಂದು ಹೇಳಿರುವ ದುಬೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಗುರಿಯಾಗಿಸಿಕೊಂಡು ಸರ್ಕಾರವನ್ನು ಟೀಕಿಸಲೆಂದೇ ಅವರು ಸದನದಲ್ಲಿ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆ ಮತ್ತು ಮಾಹಿತಿಯನ್ನು ಉದ್ಯಮಿಗಳೊಂದಿಗೆ ಸಂಸದೆ ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X