ದಾವಣಗೆರೆ | ಸಮರ್ಪಕ ವಿದ್ಯುತ್ ಪೂರೈಕೆಗೆ ಬಿಜೆಪಿ ಆಗ್ರಹ

Date:

Advertisements

ರಾಜ್ಯದಲ್ಲಿ ಕೃಷಿಗೆ ಮತ್ತು ಮನೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೆಸ್ಕಾಂನ ಅಧೀಕ್ಷಕ ಅಭಿಯಂತರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಶಾಸಕ ಬಿ.ಪಿ ಹರೀಶ್ ಮಾತನಾಡಿ, “ಸರ್ಕಾರ ರಾಜ್ಯವನ್ನು ಕತ್ತಲೆ ಕೂಪಕ್ಕೆ ತಳ್ಳಿದೆ. ರೈತರಿಗೆ ಅನ್ಯಾಯ ಅಗುತ್ತಿದ್ದರೂ ಕೂಡ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ವಿದ್ಯುತ್ ಇಲ್ಲದೆ ರಾಜ್ಯದ ರೈತರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಯಾವುದೇ ಗ್ಯಾರಂಟಿ ಸಮರ್ಪಕವಾಗಿ ರಾಜ್ಯದ ಮಹಿಳೆಯರಿಗೆ ತಲುಪಿಲ್ಲ. ಅನ್ಯಾಯ ಮಾಡಿದ ಸರ್ಕಾರವನ್ನು ಕಿತ್ತೊಗೆಯುವ ತನಕ ವಿಶ್ರಮಿಸಬಾರದು” ಎಂದರು.

ವಿಧಾನ ಪರಿಷತ್‌ ಸದಸ್ಯ ಎನ್ ರವಿಕುಮಾ‌ರ್ ಮಾತನಾಡಿ, “ಒಬ್ಬ ಕಳ್ಳ, ಒಬ್ಬ ಮಳ್ಳರ ಸರ್ಕಾರ ಕಮಿಷನ್ ದಂಧೆ ಮಾಡುತ್ತಿದೆ. ರಾಜ್ಯದ ಜನರಿಗೆ ನಿರಂತರ ವಿದ್ಯುತ್ ಕೊಡದೆ ಕತ್ತಲೆ ಭಾಗ್ಯ ತಂದಿದೆ.
ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಸಚಿವರು, ಶಾಸಕರಿಗೆ ಮಾತ್ರ 24ತಾಸು ವಿದ್ಯುತ್ ಸಿಗುತ್ತದೆ”‌ ಎಂದು ಹೇಳಿದರು.

Advertisements

“ರಾಜ್ಯದಿಂದ ಸಂಗ್ರಹ ಆದ ಹಣವನ್ನು ಪಂಚ ರಾಜ್ಯಗಳ ಚುನಾವಣೆಗೆ ಪೆಂಡಿಂಗ್ ಮಾಡಲಾಗುತ್ತಿದೆ. ಇತ್ತ ರಾಜ್ಯದ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ಮೂಲಕ ರಾಜ್ಯ ವಿರೋಧಿ ನೀತಿ ಅನುಸರಿಸುತ್ತಿದೆ. ಗ್ಯಾರಂಟಿ ಯೋಜನೆ 1.28ಕೋಟಿ ಮಹಿಳೆಯರಿಗೆ ಬರಬೇಕಾದ ಹಣ ಕೇವಲ 50 ಲಕ್ಷ ಮಂದಿ ಮಹಿಳೆಯರಿಗೆ ನೀಡಲಾಗುತ್ತಿದೆ. ಅದೇ ರೀತಿ ಅನ್ನಭಾಗ್ಯ ಯೋಜನೆಯಲ್ಲಿಯೂ ಸರಿಯಾದ ರೀತಿಯಲ್ಲಿ ಅಕ್ಕಿ ಕೊಡುತ್ತಿಲ್ಲ. ಎಲ್ಲ ಗ್ಯಾರಂಟಿ ಯೋಜನೆಗಳೂ ವಿಫಲವಾಗಿವೆ. ಎಲ್ಲ ಹಣವನ್ನು ಲೂಟಿ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಬ್ಯಾಂಕ್ ದರೋಡೆಗೆ ಯತ್ನ; ಸೆಕ್ಯೂರಿಟಿ ಗಾರ್ಡ್‌ಗೆ ಇರಿದ ದುಷ್ಕರ್ಮಿಗಳು

“ಎಲ್ಲ ಯೋಜನೆಗಳ ಹಣವನ್ನು ಲೂಟಿ ಮಾಡಲಾಗುತ್ತಿದ್ದು, ರಾಜ್ಯ ಸರ್ಕಾರದ ದಂಧೆಯ ಹಣ ಅಂಬಿಕಾಪತಿ ಮನೆಯಲ್ಲಿ ಸಿಕ್ಕಿದೆ. ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರಿಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರೇಶ್‌ ಹನಗವಾಡಿ, ಮಾಜಿ ಸಚಿವ ಎಸ್‌ ಎ ರವಿಂದ್ರನಾಥ, ಮಾಜಿ ಶಾಸಕರುಗಳಾದ ಎಸ್ ವಿ ರಾಮಚಂದ್ರಪ್ಪ, ಪ್ರೊ. ಲಿಂಗಣ್ಣ, ಡಾ. ಎ ಹೆಚ್‌ ಶಿವಯೋಗಿಸ್ವಾಮಿ, ಮುಖಂಡರುಗಳಾದ ಶ್ರೀನಿವಾಸ, ದಾಸಕರಿಯಪ್ಪ, ಬಿ ಜೆ ಅಜಯ್ ಕುಮಾರ್, ಎಸ್ ವೀರೇಶ್, ಲೋಕಿಕೆರೆ ನಾಗರಾಜ್‌, ಬಿ ಎಂ ಸತೀಶ್‌ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X