ವಿಜಯಪುರ | ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

Date:

Advertisements

ಬರಗಾಲದ ಪರಿಹಾರ ಹಾಗೂ ಕಬ್ಬಿಗೆ ನ್ಯಾಯಯುತ ಬೆಲೆ ಒದಗಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

“ಪ್ರಸಕ್ತ ವರ್ಷದಲ್ಲಿ ತೀವ್ರ ಬರಗಾಲ ಒದಗಿದ್ದು, ಬರಗಾಲಕ್ಕೆ ತಕ್ಕಂತೆ ತಾಲೂಕಿನ ರೈತರಿಗೆ ಸೂಕ್ತವಾದಂತಹ ಬರ ಪರಿಹಾರವನ್ನು ನೀಡಬೇಕು. ಮಳೆ ಬಾರದೆ ಇರುವುದರಿಂದ ರೈತರ ಖುಷ್ಕಿ ಬೆಳೆಗೆ ಎಕರೆಗೆ ಕನಿಷ್ಠ ₹10,000 ಹಾಗೂ ನೀರಾವರಿ ಬೆಳಗ್ಗೆ ಕನಿಷ್ಠ ₹25,000ಗಳನ್ನು ಘೋಷಿಸಿ ತುರ್ತು ಬಿಡುಗಡೆಗೆ ಕ್ರಮ ವಹಿಸಬೇಕು” ಎಂದು ಆಗ್ರಹಿಸಿದರು.

“ದನ ಕರುಗಳಿಗೆ ಮೇವಿನ ಅಭಾವ ಎದುರಾಗಿರುವುದರಿಂದ ಮೇವು ಬ್ಯಾಂಕ್ ಆರಂಭಿಸಬೇಕು.‌ ಮನರೇಗಾ ಯೋಜನೆ ಅಡಿ ರೈತರ ಹೊಲಗಳಿಗೆ ಕೃಷಿ ಕಾರ್ಮಿಕರನ್ನು ಒದಗಿಸಬೇಕು. ಕೇಂದ್ರ ಸರ್ಕಾರ ಕಬ್ಬಿಗೆ ಬೆಂಬಲ ಬೆಲೆಯಾಗಿ ₹3,364ರಷ್ಟು ಘೋಷಿಸಿದ್ದು, ಇದು ರೈತರಿಗೆ ಲಾಭದಾಯಕ ಬೆಲೆಯಾಗಿರುವುದಿಲ್ಲ. ಇಂತಹ ಬರಗಾಲದಲ್ಲಿ ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು” ಎಂದು ಒತ್ತಾಯಿಸಿದರು.

Advertisements

“ಕಾರ್ಖಾನೆಗಳ ಮಾಲೀಕರು ಮತ್ತು ರೈತರ ನಡುವೆ ಮಧ್ಯಸ್ಥಿಕೆ ವಹಿಸಿ ರೈತರಿಗೆ ಕಾರ್ಖಾನೆಯವರಿಂದ ಕಬ್ಬಿನ ಸಾಗಾಣಿಕೆ ವೆಚ್ಚ, ಕಟಾವು ವೆಚ್ಚವನ್ನು, ಕಟಾವು ಪ್ರಾರಂಭವಾಗುವ ಮುಂಚೆಯೇ ರೈತರ ಸಮ್ಮುಖದಲ್ಲಿ ನಿರ್ಧರಿಸಿ ಸೂಕ್ತ ಬೆಲೆಯನ್ನು ಘೋಷಿಸಿ, ಕಟಾವು ಪ್ರಾರಂಭ ಮಾಡಬೇಕು” ಎಂದು  ಕಬ್ಬು ಬೆಳೆಗಾರರು ಹಾಗೂ ತಾಲೂಕಿನ ರೈತರು ಸರ್ಕಾರಕ್ಕೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಆಗ್ರಹ

ಪ್ರತಿಭಟನೆಯಲ್ಲಿ ಸಂಗಣ್ಣ ಬಾಗೇವಾಡಿ, ವಿಜಯ್ ಪೂಜಾರಿ, ಅಯ್ಯಪ್ಪ ನಿಂಗಪ್ಪ ಬಿದರಕುಂದಿ , ವೈ ಎನ್ ಬಿರಾದರ್, ಹನುಮಂತರಾಯ ಗೌಡ್, ರುದ್ರಪ್ಪ ಅಥಣಿ, ಸಂಗಪ್ಪ ಕಟ್ಟಿ, ಗದಗಯ್ಯ ಹಿರೇಮಠ್, ಶಿವು ಕಟ್ಟಿ, ಮನೋಹರ್ ನಿಡಗುಂದಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X