ಶಿವಮೊಗ್ಗ | ಆನೆ ಬಾಲ ಕತ್ತರಿಸಲು ಯತ್ನಿಸಿದ ದುಷ್ಕರ್ಮಿಗಳು; ತನಿಖೆಗೆ ತಂಡ ರಚನೆ

Date:

Advertisements

ಗರ್ಭಿಣಿ ಆನೆಯೊಂದರ ಬಾಲವನ್ನು ಕತ್ತರಿಸಲು ದುಷ್ಕರ್ಮಿಗಳು ಯತ್ನಿಸಿದ್ದು, ಆನೆಯ ಬಾಲದಲ್ಲಿ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದಲ್ಲಿ ನಡೆದಿದೆ.

ಬಿಡಾರದ ಭಾನುಮತಿ ಎಂಬ ಸಾಕಾನೆಯ ಬಾಲದಲ್ಲಿ ಗಾಯವಾಗಿದೆ. ಬಿಡಾರದ ಆನೆಗಳನ್ನು ಪ್ರತಿದಿನ ಮಧ್ಯಾಹ್ನ ಕಾಡಿಗೆ ಬಿಡಲಾಗುತ್ತದೆ. ಮರುದಿನ ಬೆಳಿಗ್ಗೆ ಮರಳಿ ಬಿಡಾರಕ್ಕೆ ಕರೆತರಲಾಗುತ್ತದೆ.ಅದೇ ರೀತಿ ಸೋಮವಾರ ಭಾನುಮತಿ ಆನೆಯನ್ನು ಕಾಡಿನಿಂದ ಕರೆತರಲು ಸಿಬ್ಬಂದಿಗಳು ಹೋದಾಗ, ದಾರಿಯಲ್ಲಿ ರಕ್ತ ಬಿದ್ದಿರುವುದು ಕಂಡುಬಂದಿದೆ.

ಆನೆ ಮರಿ ಹಾಕಿರಬಹುದೆಂದು ಭಾವಿಸಿ ಆನೆಯ ಬಳಿ ಸಿಬ್ಬಂದಿಗಳು ತೆರಳಿದ್ದಾರೆ. ಈ ವೇಳೆ, ಆನೆಯ ಬಾಲ ಸುಮಾರು 2 ಇಂಚು ಆಳಕ್ಕೆ ಕೋಯ್ದುಕೊಂಡಿರುವುದು ಕಂಡುಬಂದಿದೆ. ನುಣುಪಾದ ಆಯುಧದಿಂದ ಕೊಯ್ದಿರುವಂತೆ ಕಂಡುಬಂದಿದೆ ಎಂದು ತಿಳಿದುಬಂದಿದೆ.

Advertisements

ಆನೆಯನ್ನು ಬಿಡಾರಕ್ಕೆ ಕರೆತರಾಗಿದ್ದು, ವೈದ್ಯರು ಚಿಕಿತ್ಸೆ ನೀಡಿ, ಹೊಲಿಗೆ ಹಾಕಿದ್ದಾರೆ.

“ಆನೆಯ ಬಾಲ ಕತ್ತರಿಸಲು ಯತ್ನಿಸಿದವರು ಯಾರು ಎಂದು ಪತ್ತೆಹಚ್ಚಲು ಎಸಿಎಫ್‌ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ವಾರದೊಳಗೆ ವರದಿ ನೀಡುವಂತೆ ಸೂಚನೆ ನೀಡಿದ್ದೇವೆ” ಎಂದು ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಪಟಗಾರ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X