ತುಮಕೂರು | ಮಗಳ ಸಾವಿಗೆ ನ್ಯಾಯ ಕೊಡಿಸಿ; ಜಿಲ್ಲಾಧಿಕಾರಿ ಕಚೇರಿ ಎದುರು ಪೋಷಕರ ಪ್ರತಿಭಟನೆ

Date:

Advertisements

ಮಗಳನ್ನು ಕೊಲೆ ಮಾಡಿರುವ ಅಳಿಯನನ್ನು ಬಂಧಿಸುವಂತೆ ಆಗ್ರಹಿಸಿ ಗುಬ್ಬಿಯ ಹರಿಶೇಷ ದಂಪತಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಕೊಲೆಯಾದ ಸ್ಥಳಕ್ಕೆ ಪೋಷಕರನ್ನು ಕರೆಸಿಕೊಂಡು ವಿಚಾರಣೆ ಮಾಡದೆ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಮೃತದೇಹದ ಮೇಲೆ ಗಾಯಗಳನ್ನು ಗಮನಿಸಿದಾಗ, ಹೊಡೆದು ಸಾಯಿಸಿರುವುದು ತಿಳಿಯುತ್ತದೆ. ಹಣದ ಆಮಿಷಕ್ಕೆ ಒಳಗಾಗಿ ಸರಿಯಾದ ರೀತಿಯಲ್ಲಿ ಮರಣೋತ್ತರ ಪರೀಕ್ಷೆಯನ್ನು ಮಾಡಿಲ್ಲ. ಜಿಲ್ಲಾಧಿಕಾರಿಗಳು ಈ ಕುರಿತು ಗಮನ ಹರಿಸಿ, ಸೂಕ್ತ ಕ್ರಮಕೈಗೊಳ್ಳಬೇಕು. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮೃತಳ ತಂದೆ-ತಾಯಿ ಒತ್ತಾಯಿಸುತ್ತಿದ್ದಾರೆ.

ನಮ್ಮ ಮಗಳು ಯಶೋದಮ್ಮನನ್ನು, ತಾಲ್ಲೂಕಿನ ಊರ್ಡಿಗೆರೆ ಟಿ.ಎನ್.ಅಭಿಲಾಷ್‌ಗೆ,  2020ರ ಮೇ 30ರಂದು ಮದುವೆ ಮಾಡಿಕೊಡಲಾಗಿತ್ತು. ಪ್ರಾರಂಭದಲ್ಲಿ ಒಳ್ಳೆಯವರಂತೆ ನಡೆದುಕೊಂಡ ಅಭಿಲಾಷ್, ಕಳೆದ ಒಂದು ವರ್ಷದಿಂದ ಮಗಳಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಸೆ. 6ರಂದು ಮಗಳನ್ನು ಕೊಲೆ ಮಾಡಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡದ್ದಾಳೆ ಎಂದು ಬಿಂಬಿಸಿದ್ದಾರೆ. ಇವರಿಗೆ ಪೊಲೀಸರು ಸಹ ಬೆಂಬಲ ನೀಡಿದ್ದಾರೆ, ಎಂದು ಹರಿಶೇಷ ಆರೋಪಿಸಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X