- ಬಿಜೆಪಿ ಮತ್ತು ಜೆಡಿಎಸ್ನವರು ಹತಾಶೆಯ ಸ್ಥಿತಿಗೆ ತಲುಪಿದ್ದಾರೆ
- ಜಗದೀಶ ಶೆಟ್ಟರ್, ರಮೇಶ ಜಾರಕಿಹೊಳಿ ಭೇಟಿಗೇಕೆ ಭಯ?
ಬಿಜೆಪಿ ಮತ್ತು ಜೆಡಿಎಸ್ನವರು ಹತಾಶೆಯ ಸ್ಥಿತಿಗೆ ತಲುಪಿದ್ದಾರೆ. ಅವರಿಗೆ ಡಾಕ್ಟರ್ಗಳೇ ಮೇಜರ್ ಆಪರೇಷನ್ ಮಾಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಲೇವಡಿ ಮಾಡಿದರು.
ಬೆಂಗಳೂರಿನ ಸದಾಶಿವನಗರದ ನಿವಾಸದ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿಯ ತಂಡವೊಂದು ಸರ್ಕಾರ ಬೀಳಿಸಲು ಕೆಲಸ ಮಾಡುತ್ತಿದೆ. ಈ ಬಗ್ಗೆ ನನಗೆ ಎಲ್ಲ ಗೊತ್ತಿದೆ. ಯಾವ ಶಾಸಕರನ್ನು, ಯಾರು ಯಾವಾಗ ಭೇಟಿ ಮಾಡಿದರು, ಮಾಡುತ್ತಿದ್ದಾರೆ ಎಂದು ಸಂಬಂಧಪಟ್ಟವರೇ ನನಗೆ ಮತ್ತು ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದಾರೆ” ಎಂದು ಹೇಳಿದರು.
ಬಿಜೆಪಿಯವರು ಯಾವ ರೀತಿ ಆಮೀಷ ಒಡ್ಡುತ್ತಿದ್ದಾರೆ ಎನ್ನುವುದನ್ನೂ ನಮ್ಮ ಶಾಸಕರು ಹೇಳಿದ್ದಾರೆ. ನಮ್ಮ ಬಳಿ ಪ್ರತಿಯೊಂದು ಮಾಹಿತಿ ಇದೆ. ಯಾರನ್ನೆಲ್ಲ ಭೇಟಿಯಾಗಿದ್ದಾರೆ ಎಂಬುದನ್ನು ಅಧಿವೇಶನದಲ್ಲಿ ಬಹಿರಂಗಪಡಿಸುವೆ” ಎಂದರು.
ಈ ಸುದ್ದಿ ಓದಿದ್ದೀರಾ? ಕೆ ಸಿ ರಘು: ಮಾಸದ ನಗು, ಜ್ಞಾನದ ಬೆರಗು
ಜಗದೀಶ ಶೆಟ್ಟರ್ ಮತ್ತು ರಮೇಶ ಜಾರಕಿಹೊಳಿ ಭೇಟಿ ವಿಚಾರವಾಗಿ ಪತ್ರಕರ್ತರು ಪ್ರಶ್ನಿಸಿದಾಗ, “ಎಲ್ಲದರಲ್ಲೂ ಅನುಮಾನ ಪಡಬಾರದು. ಜಗದೀಶ ಶೆಟ್ಟರ್ ಅವರು, ತಮ್ಮ ಶಕ್ತಿ ಏನಿದೆ ಎಂದು ಈಗಾಗಲೇ ತೋರಿಸಿದ್ದಾರೆ. ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ” ಎಂದು ಹೇಳಿದರು.