ದಾವಣಗೆರೆ | ಜಗಳೂರನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸುವಂತೆ ಒತ್ತಾಯ

Date:

Advertisements

ಜಗಳೂರು ತಾಲೂಕನ್ನು ಮೂಲ ಚಿತ್ರದುರ್ಗ ಜಿಲ್ಲೆಗೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ ‘ಜಗಳೂರು ತಾಲೂಕು ಚಿತ್ರದುರ್ಗ ಜಿಲ್ಲೆ ಮರು ಸೇರ್ಪಡೆ ಹೋರಾಟ ಸಮಿತಿ’ ಕಾರ್ಯಕರ್ತರು ಮಂಗಳವಾರ ಜಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಸೀಲ್ದಾರ್ ಸೈಯದ್ ಖಲಿಂವುಲ್ಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ.

“ಜಗಳೂರು ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ತಾಲೂಕು. ನೂರಾರು ವರ್ಷಗಳ ಇತಿಹಾಸದಲ್ಲಿ 75 ವರ್ಷಗಳ ಕಾಲ ಬರಗಾಲ ಕಂಡ ಪ್ರದೇಶವಾಗಿದೆ. ತಾಲೂಕಿನಲ್ಲಿ ಯಾವುದೇ ನದಿ, ನೀರಿನ ಮೂಲಗಳಿಲ್ಲ. ರೈಲು ಸಂಚಾರವಿಲ್ಲ. ಉದ್ಯೋಗ ಒದಗಿಸುವ ಕಂಪನಿಗಳಿಲ್ಲ. ಕೇವಲ ಮಳೆಯನ್ನೆ ನೆಚ್ಚಿಕೊಂಡು ಕೃಷಿ ಚಟುವಟಿಕೆ ಮಾಡುವ ರೈತರು ಸಂಕಷ್ಟದಲ್ಲಿ ಬದುಕುವಂತಾಗಿದೆ. ಹಾಗಾಗಿ, ಜಗಳೂರುನ್ನು ಮೂಲ ಜಿಲ್ಲೆಯಾಗಿದ್ದ ಚಿತ್ರದುರ್ಗ ಜಿಲ್ಲೆಗೆ ಸೇರ್ಪಡೆಗೊಳಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

“ದಾವಣಗೆರೆ ಜಿಲ್ಲೆಗೆ ಜಗಳೂರು ಸೇರಿದ ಬಳಿಕ ಬಡವಾಗಿದೆ. ಚುನಾಯಿತರು, ಅಧಿಕಾರಿಗಳು ಮಲತಾಯಿ ಧೋರಣೆ ಮಾಡುತ್ತಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಹರಿಹರ ತಾಲೂಕುಗಳು ನೀರಾವರಿ ಹೊಂದಿರುವ ಸಮೃದ್ದ ತಾಲೂಕುಗಳಾಗಿವೆ. ಇವರ ನಡುವೆ ಜಗಳೂರು ತಾಲೂಕು ಹೋರಾಟ ಮಾಡುವುದು ತುಂಬ ಕಷ್ಟವಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisements

“ಯಾವುದೇ ಕೆಲಸ ಕಾರ್ಯಗಳು ನಡೆಯಬೇಕಾದರೆ ದಾವಣಗೆರೆಯಲ್ಲಿ ದಿನವಿಡಿ ಕಾಯಬೇಕು. ಆದರೆ ಚಿತ್ರದುರ್ಗ ಹತ್ತಿರವಿದ್ದು ಅಲೆದಾಡುವುದು ತುಂಬ ಕಡಿಮೆಯಾಗುತ್ತದೆ. ಆದ್ದರಿಂದ ಚಿತ್ರದುರ್ಗ ಸೇರ್ಪಡೆಯಾಗುವವರೆಗೂ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಸಮಿತಿಯ ಅಧ್ಯಕ್ಷ ತಿಮ್ಮಾರೆಡ್ಡಿ, ಉಪಾಧ್ಯಕ್ಷ ಪುಟ್ಟಣ್ಣ, ಸಿ. ತಿಪ್ಪೇಸ್ವಾಮಿ, ಪಾಲನಾಯಕನಗೋಟೆ ಓಬಣ್ಣ, ಸೂರಲಿಂಗಪ್ಪ, ಹನುಮಂತಪ್ಪ, ಖಾದರ್ ಸಾಬ್, ಬಂಗಾರಪ್ಪ, ಜಿ.ಎಚ್ ಶಂಬುಲಿಂಗಪ್ಪ, ವಕೀಲ ಸಣ್ಣ ಓಬಯ್ಯ, ದಸಂಸ ಸಂಚಾಲಕ ಸತೀಶ್ ಮಾಚಿಕೆರೆ, ಸೇರಿದಂತೆ ಮತ್ತಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X