ಮಂತ್ರಿ ಶಿವಾನಂದ ಪಾಟೀಲ್ ಕೂಡಲೇ ರಾಜೀನಾಮೆ ನೀಡಬೇಕು; ಎಎಪಿ ಒತ್ತಾಯ

Date:

Advertisements

ರಾಜ್ಯದ ಸಕ್ಕರೆ ಹಾಗೂ ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ್ ಅವರು ತೆಲಂಗಾಣ ರಾಜ್ಯದ ಮದುವೆ ಒಂದರಲ್ಲಿ ಕಂತೆ ಕಂತೆ ನೋಟುಗಳ ನಡುವೆ ನಡೆಸಿದ ದುಸ್ಸಾಹಸವು ಕರ್ನಾಟಕ ರಾಜ್ಯಕ್ಕೆ ಕಪ್ಪುಮಸಿ ಬೆಳೆಯುವಂತಿದೆ. ರಾಜ್ಯದಲ್ಲಿ 70% ಹೆಚ್ಚು ತಾಲೂಕುಗಳು ಈಗ ಬರಗಾಲಪೀಡಿತವಾಗಿ ಅದರಲ್ಲೂ ಉತ್ತರ ಕರ್ನಾಟಕ ಭಾಗದ ಹಳ್ಳಿಗರೆಲ್ಲ ಬದುಕಿಗಾಗಿ ಗುಳೆ ಹೋಗುತ್ತಿದ್ದಾರೆ. ಇಂತಹ ಕೆಟ್ಟ ಸಂದರ್ಭದಲ್ಲಿ ಉತ್ತರ ಕರ್ನಾಟಕದಿಂದಲೇ ಬಂದಿರುವ ಈ ಉದ್ದಟ ಮಂತ್ರಿಯ ಈ ವರ್ತನೆ ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಎಎಪಿ ಅಭಿಪ್ರಾಯಪಟ್ಟಿದೆ.

ರಾಜ್ಯದ ಮುಖ್ಯಮಂತ್ರಿಗಳು ಈ ಕೂಡಲೇ ಶಿವಾನಂದ ಪಾಟೀಲರ ರಾಜೀನಾಮೆಯನ್ನು ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಶ್ವಕಪ್ ಪಂದ್ಯಗಳ ಟಿಕೆಟ್ ಮಾರಾಟ ಆರಂಭ; ಕಚೇರಿಗೆ ರಜೆ ಹಾಕಿ ಸರತಿ ಸಾಲಿನಲ್ಲಿ ನಿಂತ ಜನ

Advertisements

ರಾಜ್ಯದಲ್ಲಿ ಈಗಾಗಲೇ ಹಲವು ಕಡೆ ಐಟಿ ದಾಳಿಯಾಗಿ ನೂರಾರು ಕೋಟಿ ಸಿಕ್ಕಿದೆ. ಅಕ್ರಮ ಹಣ ಸಿಕ್ಕಿಬಿದ್ದು ಮುಂಬರುವ ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಹಣ ಹರಿದುಹೋಗುತ್ತಿದೆ ಎಂಬ ಕಪ್ಪು ಮಸಿ ಬಳಿದಿರುವಾಗ ಮಂತ್ರಿಗಳ ಈ ದುರ್ವರ್ತನೆ ನಿಜಕ್ಕೂ ಅಸಹ್ಯ. ಇಂತಹ ಮಂತ್ರಿಗಳು ಒಂದು ಕ್ಷಣವೂ ಸಂಪುಟದಲ್ಲಿ ಮುಂದುವರಿಯಬಾರದು. ಜನ ವಿರೋಧಿ ಸರ್ಕಾರವೆಂಬ ಹಣೆಪಟ್ಟಿ ಬರುವ ಮುಂಚೆ ಈ ಉದ್ಧಟ ಮಂತ್ರಿಯನ್ನು ಸಂಪಟದಿಂದ ಕಿತ್ತು ಹಾಕಬೇಕು ಎಂದು ಒತ್ತಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X