ಬೆಂಗಳೂರು | ವಿಶ್ವಕಪ್ ಪಂದ್ಯಾವಳಿಗಳಿಗೆ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ

Date:

Advertisements

ಬೆಂಗಳೂರಿನಲ್ಲಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಇರುವ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಪಂದ್ಯಗಳು ನಡೆಯುವ ದಿನ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ ಕಲ್ಪಿಸಿದೆ. ಜತೆಗೆ ಟಿಕೆಟ್‌ ದರದಲ್ಲಿ ರಿಯಾಯಿತಿ ಘೋಷಣೆ ಮಾಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌), “ಬೆಂಗಳೂರಿನಲ್ಲಿ ವಿಶ್ವಕಪ್ ಕ್ರಿಕೆಟ್‌ ಪಂದ್ಯಾವಳಿಗಳು ಅಕ್ಟೋಬರ್ 20, 26, ನವೆಂಬರ್ 4, 9, 12ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಈ ಹಿನ್ನೆಲೆ, ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ವಿಶ್ವಕಪ್ ಪಂದ್ಯಾವಳಿಗಳಿಗೆ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ” ಎಂದು ಹೇಳಿದೆ.

“ಪಂದ್ಯಾವಳಿ ನಡೆಯುವ ಎಲ್ಲ ದಿನಗಳಲ್ಲಿ ನಮ್ಮ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಬರುವ ಮತ್ತು ಹೋಗುವ ಪ್ರಯಾಣಕ್ಕೆ ₹50 ಟಿಕೆಟ್ ದರ ನಿಗದಿಪಡಿಸಲಾಗಿದೆ. ಕ್ರಿಕೆಟ್ ಪಂದ್ಯದ ದಿನದಂದು ಬೆಳಗ್ಗೆ 7 ಗಂಟೆಗೆ ಪೇಪರ್ ಟಿಕೆಟ್​ ಲಭ್ಯವಿರಲಿದೆ” ಎಂದು ತಿಳಿಸಿದೆ.

Advertisements

“ಈ ಕಾಗದದ ಟಿಕೆಟ್‌ಗಳು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಸಂಜೆ 4 ಗಂಟೆಯ ನಂತರ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿದೆ. ಕಾಗದದ ಟಿಕೆಟ್ ಬೆಲೆ ₹50 ಇದೆ. ಸಾಮಾನ್ಯ ದರದ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿದೆ. ಕ್ಯೂಆರ್ ಕೋಡ್ ಟಿಕೆಟ್‌ಗಳನ್ನು ಖರೀದಿಸಿದರೆ ಪಂದ್ಯಗಳು ನಡೆಯುವ ದಿನದಂದು ಪ್ರಯಾಣಿಸಬಹುದು. ಕ್ಯೂಆ‌ರ್‌ ಕೋಡ್ ಟಿಕೆಟ್‌ಗಳನ್ನು ವಾಟ್ಸ್ ಆಪ್ ಅಥವಾ ನಮ್ಮ ಮೆಟ್ರೋ ಆಪ್ ಇಲ್ಲವೇ ಪೆಟಿಎಂ ಮೂಲಕ ಕ್ರಿಕೆಟ್ ಪಂದ್ಯಾವಳಿಗಳು ಪ್ರಾರಂಭವಾಗುವ ಮೊದಲು ಮುಂಗಡವಾಗಿ ಖರೀದಿಸಿದರೆ ಯಾವುದೇ ಅಡಚಣೆ ಇಲ್ಲದೆ ಹಿಂದಿರುಗುವ ಪುಯಾಣಕ್ಕೆ ಬಳಸಬಹುದು” ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಮಯ ಪರಿಪಾಲನೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ ವಿಶ್ವದಲ್ಲೇ ಪ್ರಥಮ

“ಎಂದಿನಂತೆ ಸ್ಮಾರ್ಟ್ ಕಾರ್ಡ್ ಮತ್ತು ಎನ್.ಸಿ.ಎಂ.ಸಿ. ಕಾರ್ಡ್‌ಗಳನ್ನು ಉಪಯೋಗಿಸಬಹುದು. ಪ್ರಯಾಣಿಕರು ಈ ಅವಕಾಶವನ್ನು ಉಪಯೋಗಿಸಿಕೂಂಡರೆ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆಯ ಮೆಟ್ರೋ ಟಿಕೆಟ್ ಕೌಂಟರ್‌ಗಳಲ್ಲಿ ಜನ ದಟ್ಟಣೆಯನ್ನು ಕಡಿಮೆ ಮಾಡಲು ಸಹಕಾರಿಯಾಗಲಿದೆ” ಎಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X