ಬೆಂಗಳೂರು | ಗಂಡನನ್ನು ತಾನೇ ಕೊಲೆ ಮಾಡಿ ಹುಡುಕಿಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದ ಎರಡನೇ ಪತ್ನಿ

Date:

Advertisements

ಗಂಡನನ್ನು ಕೊಲೆ ಮಾಡಿ, ಹೊಂಡದಲ್ಲಿ ಹಾಕಿ ಬಳಿಕ ಪೊಲೀಸರಿಗೆ ಗಂಡ ಕಾಣುತ್ತಿಲ್ಲವೆಂದು ದೂರು ನೀಡಿದ್ದ ಮೃತನ ಎರಡನೇ ಪತ್ನಿ ಸದ್ಯ ಪೊಲೀಸರ ಅತಿಥಿಯಾಗಿದ್ದಾರೆ.

ಶಕೀಲ್ ಅಕ್ತಾರ್ ಕೊಲೆಯಾದ ವ್ಯಕ್ತಿ. ಈತ ಮೂಲತಃ ಬಿಹಾರದವರು. ಮೃತನ ಎರಡನೇ ಪತ್ನಿ ನಜೀರ್ ಖಾತುನ್ ಮತ್ತು ನಾದಿನಿ ಕಾಶ್ಮೀರಿ ಬಂಧಿತರು.

ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿ ಶಕೀಲ್‌ ಅಕ್ಟೋಬರ್ 9ರಂದು ಮನೆಯ ಮಂಚದ ಮೇಲೆ ಮಲಗಿದ್ದರು. ಈ ವೇಳೆ, ಆತನ ಎದೆಯ ಮೇಲೆ ಎರಡನೇ ಪತ್ನಿ ನಜೀರ್ ಖಾತುನ್ ಕುಳಿತು, ಕತ್ತು ಹಿಸುಕಿದ್ದಾಳೆ. ಈ ವೇಳೆ, ಆತನ ಕೈ ಮತ್ತು ಕಾಲುಗಳನ್ನು ನಾದಿನಿ ಕಾಶ್ಮೀರಿ ಬಿಗಿಯಾಗಿ ಹಿಡಿದಿದ್ದಾಳೆ.

Advertisements

ಪ್ರಾಣ ಉಳಿಸಿಕ್ಕೊಳ್ಳಲು ಶಕೀಲ್ ಎಷ್ಟೇ ಪ್ರಯತ್ನಪಟ್ಟರು, ಬಿಡದ ಇಬ್ಬರು ಆರೋಪಿಗಳೂ ಆತ ಕೆಳಗೆ ಬಿದ್ದರೂ ಬಿಡದೇ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ‘ನಂಬರ್ ಪ್ಲೇಟ್’ ಮರೆಮಾಚಿದ್ದ ಸವಾರನ ವಿರುದ್ಧ ಎಫ್‌ಐಆರ್‌ ದಾಖಲು

ಶಕೀಲ್ ಅವರನ್ನು ಹತ್ಯೆ ಮಾಡಿದ ಬಳಿಕ ಇಬ್ಬರೂ ಆರೋಪಿಗಳು ಭಾರೀ ಮಳೆ ಬಂದ ಸಮಯದಲ್ಲಿ ಬೆಡ್ ಶೀಟ್​ನಲ್ಲೇ ಶವವನ್ನು ಸುತ್ತಿ ಯಾರಿಗೂ ಗೊತ್ತಾಗದ ಹಾಗೇ ಉಪಾಯ ಮಾಡಿ ಮಧ್ಯರಾತ್ರಿಯಲ್ಲಿ ಹೆಣವನ್ನು ಸಾಗಿಸಿದ್ದಾರೆ. ಕೊಲೆಯಾದ ಮನೆಯಿಂದ ಸ್ವಲ್ಪ ದೂರದಲ್ಲೇ ಇದ್ದ ಹೊಂಡಕ್ಕೆ ಮೃತದೇಹವನ್ನು ಎಸೆದಿದ್ದಾರೆ.

ಈ ಕೃತ್ಯ ಮಾಡಿದ ಎರಡು ದಿನದ ಬಳಿಕ ಆತನ ಎರಡನೇ ಪತ್ನಿ ಆರೋಪಿ ನಜೀರ್ ಖಾತುನ್ ಪತಿ ಕಾಣೆಯಾಗಿದ್ದಾನೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಈ ವೇಳೆ, ಗಂಡನನ್ನು ಹುಡುಕಿ ಕೊಡುವಂತೆ ಪೊಲೀಸರ ಮುಂದೆ ಗೋಳಾಡಿದ್ದಾಳೆ.

ದೂರು ಬಂದ ಮೇರೆಗೆ ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದರು. ಅ.15 ರಂದು ಹೊಂಡದಲ್ಲಿ ಕೆಟ್ಟ ವಾಸನೆ ಬರುತ್ತಿದ್ದೆ ಎಂದು ಮಾಹಿತಿ ಬಂದಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಪೊಲೀಸರಿಗೆ ಮೃತದೇಹ ಪತ್ತೆಯಾಗಿದೆ.

ಹೊಂಡದಿಂದ ಶವ ಹೊರತೆಗೆದು ತನಿಖೆ ಕೈಗೊಂಡಿದ್ದ ಪೊಲೀಸರು ಸದ್ಯ ಆರೋಪಿಗಳಾದ ನಜೀರ್ ಖಾತುನ್ ಮತ್ತು ಕಾಶ್ಮೀರಿಯನ್ನು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X